AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Satyendar Jain ಅಕ್ರಮ ಹಣ ವರ್ಗಾವಣೆ ಪ್ರಕರಣ: ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್​​​ ಬಂಧನ

ಹವಾಲಾ ಮೂಲಕ ಪಡೆದ ಹಣವನ್ನು ಭೂಮಿ ಖರೀದಿಸಲು ಅಥವಾ ದೆಹಲಿಯಲ್ಲಿ ಕೃಷಿ ಭೂಮಿ ಖರೀದಿಸಲು ಪಡೆದ ಸಾಲ ತೀರಿಸಲು ಬಳಸಲಾಗಿತ್ತು ಎಂದು ಇಡಿ  ಹೇಳಿದೆ.

Satyendar Jain ಅಕ್ರಮ ಹಣ ವರ್ಗಾವಣೆ ಪ್ರಕರಣ: ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್​​​ ಬಂಧನ
TV9 Web
| Edited By: |

Updated on:May 30, 2022 | 8:20 PM

Share

ದೆಹಲಿ: ಕೊಲ್ಕತ್ತಾ ಮೂಲದ ಕಂಪನಿಗೆ ಹವಾಲ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ದೆಹಲಿಯ ಆರೋಗ್ಯ  ಸಚಿವ (Delhi Health Minister) ಮತ್ತು ಆಮ್ ಆದ್ಮಿಪಕ್ಷದ ನಾಯಕ ಸತ್ಯೇಂದರ್  ಜೈನ್ (Satyendar jain) ಅವರನ್ನು ಜಾರಿ ನಿರ್ದೇಶನಾಲಯ (Enforcement Directorate)  ಸೋಮವಾರ ಬಂಧಿಸಿದೆ. ಸಿಬಿಐ ನೋಂದಾಯಿಸಿದ ಎಫ್‌ಐಆರ್‌ನ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಸತ್ಯೇಂದರ್ ಕುಮಾರ್ ಜೈನ್ ಮತ್ತು ಇತರರ ವಿರುದ್ಧ  ಐಪಿಸಿ ಸೆಕ್ಷನ್ 109, ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 13(2) ಮತ್ತು13(1) (e) ಅಡಿಯಲ್ಲಿ ಪ್ರಕರಣ ದಾಖಲಿಸಿದೆ. ಏಪ್ರಿಲ್ ತಿಂಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ), ಜೈನ್ ಮತ್ತು ಕುಟುಂಬದ ಒಡೆತನದಲ್ಲಿರುವ ಐದು ಸಂಸ್ಥೆಗಳ  4.81 ಕೋಟಿ ರೂ. ಮೊತ್ತದ ಸ್ಥಿರಾಸ್ಥಿ ಮುಟ್ಟುಗೋಲು  ಹಾಕಿದ್ದು ಅಕ್ರಮ ಹಣ ವ್ಯವಹಾರ  ತಡೆ ಕಾಯ್ದೆ ಅಡಿಯಲ್ಲಿ ಮೂವರು ಮಹಿಳೆಯರನ್ನು ತನಿಖೆಗೊಳಪಡಿಸಿತ್ತು. ಹಿರಿಯ ಇಡಿ ಅಧಿಕಾರಿಯೊಬ್ಬರು ಈ ಭೂಮಿ ಅಕಿನ್ಚಾನ್ ಡೆವಲಪರ್ಸ್ ಪ್ರೈ. ಲಿಮಿಟೆಡ್, ಇಂಡೋ ಮೆಟಲ್ ಇಂಪೆಕ್ಸ್ ಪ್ರೈವೇಟ್ ಲಿಮಿಟೆಡ್, ಪರಿಯಾಸ್ ಇನ್ಫೋಸೊಲ್ಯೂಷನ್ಸ್ ಪ್ರೈ. ಲಿಮಿಟೆಡ್, ಮಂಗ್ಲಾಯತನ್ ಪ್ರಾಜೆಕ್ಟ್ಸ್ ಪ್ರೈ. ಲಿಮಿಟೆಡ್, ಜೆ.ಜೆ. ಆದರ್ಶ ಎಸ್ಟೇಟ್ ಪ್ರೈ. ಲಿಮಿಟೆಡ್ ಮತ್ತು ಮೂವರು ಮಹಿಳೆಯರಾದ ಸ್ವಾತಿ ಜೈನ್, ಸುಶಿಲಾ ಜೈನ್ ಮತ್ತು ಇಂದೂ ಜೈನ್ ಗೆ ಸೇರಿದ್ದು ಎಂದು ಹೇಳಿದ್ದಾರೆ.

2015-16ರ ಅವಧಿಯಲ್ಲಿ ಜೈನ್ ಸಾರ್ವಜನಿಕ ಸೇವಕರಾಗಿದ್ದಾಗ ಈ ಕಂಪನಿಗಳು ಅವರಿಂದ ಲಾಭದಾಯಕವಾಗಿ  ನಿಯಂತ್ರಿಸಲ್ಪಡುತ್ತಿತ್ತು. ಹವಾಲಾ ಮೂಲಕ ಪಡೆದ ಹಣವನ್ನು ಭೂಮಿ ಖರೀದಿಸಲು ಅಥವಾ ದೆಹಲಿಯಲ್ಲಿ ಕೃಷಿ ಭೂಮಿ ಖರೀದಿಸಲು ಪಡೆದ ಸಾಲ ತೀರಿಸಲು ಬಳಸಲಾಗಿತ್ತು ಎಂದು ಇಡಿ  ಹೇಳಿದೆ.

ಇದನ್ನೂ ಓದಿ
Image
ಸಿಧು ಮೂಸೆ ವಾಲಾ ಹತ್ಯೆ ಪ್ರಕರಣ: ದೆಹಲಿಯ ತಿಹಾರ್ ಜೈಲಿನಲ್ಲಿ ಶೋಧ, ಉತ್ತರಾಖಂಡದಲ್ಲಿ 6 ಶಂಕಿತರ ಬಂಧನ
Image
ದೇಶದ 81 ಉಷ್ಣ ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರ್ಧಾರ, ಯಾಕೀ ನಿರ್ಧಾರ?
Image
ದೊಡ್ಡ ವಂಚಕನಿಗೂ ಮೋಹನ್​ಲಾಲ್​​ಗೂ ನಂಟು? ಸ್ಟಾರ್​ ನಟನಿ​ಗೆ ಬಂತು ಇಡಿ ನೋಟಿಸ್
Image
ಬ್ಯಾಂಕ್ ಹಣ ಅಕ್ರಮ ವರ್ಗಾವಣೆ ಪ್ರಕರಣ: ಜಮ್ಮು ಕಾಶ್ಮೀರದ ಮಾಜಿ ಸಿಎಂ ಒಮರ್ ಅಬ್ದುಲ್ಲಾ ವಿಚಾರಣೆ ನಡೆಸಿದ ಇಡಿ

ಫೆಬ್ರವರಿಯಲ್ಲಿ ಕೇಜ್ರಿವಾಲ್ ಅವರು ಪಂಜಾಬ್ ವಿಧಾನಸಭಾ ಚುನಾವಣೆಗೆ ಸ್ವಲ್ಪ ಮುಂಚೆ ಇಡಿ ಸತ್ಯೇಂದರ್  ಜೈನ್ ಅವರನ್ನು ಬಂಧಿಸಲಿದೆ ಎಂದು ನಮಗೆ ತಿಳಿದುಬಂದಿದೆ. ಬಿಜೆಪಿ ಚುನಾವಣೆಯಲ್ಲಿ ಸೋಲಲಿದೆ ಎಂಬ ಕಾರಣದಿಂದ ಅವರು ಎಎಪಿಯನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

ಸತ್ಯೇಂದರ್ ಮೇಲೆ ಹೊರಿಸಿದ್ದು ಸುಳ್ಳು ಆರೋಪ:  ದೆಹಲಿ ಉಪಮುಖ್ಯಮಂತ್ರಿ ಮನೀಶ್  ಸಿಸೋಡಿಯಾ

ಎಂಟು ವರ್ಷಗಳಿಂದ ಸತ್ಯೇಂದರ್ ಜೈನ್ ವಿರುದ್ಧ  ಸುಳ್ಳು ಪ್ರಕರಣಗಳು ನಡೆಯುತ್ತಿವೆ.  ಇಡಿ ಹಲವಾರು ಬಾರಿ ಅವರನ್ನು ಕರೆಸಿತ್ತು. ಇಡಿಗೆ ಏನೂ ಸಿಗಲಿಲ್ಲ. ಇದೀಗ ಮತ್ತೆ ಶುರು ಮಾಡಿದೆ. ಸತ್ಯೇಂದರ್  ಹಿಮಾಚಲ ಪ್ರದೇಶದ ಚುನಾವಣೆ ಉಸ್ತುವಾರಿ ವಹಿಸಿದ್ದಾರೆ. ಈ  ಪ್ರಕರಣ ಸುಳ್ಳು ಆಗಿರುವ ಕಾರಣ ಅವರು ಕೆಲವೇ ದಿನಗಳಲ್ಲಿ  ಹೊರಬರಲಿದ್ದಾರೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್  ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 7:32 pm, Mon, 30 May 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?