AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AIIMS ದೆಹಲಿ ಸರ್ವರ್ ದಾಳಿ ನಡೆಸಿದ್ದು ಚೀನಾದ ಹ್ಯಾಕರ್​​, 5 ಸರ್ವರ್​​ಗಳ ಡೇಟಾ ಹಿಂಪಡೆಯಲಾಗಿದೆ: ವರದಿ

ಇ-ಹಾಸ್ಪಿಟಲ್ ಡೇಟಾವನ್ನು ಮರುಸ್ಥಾಪಿಸಲಾಗಿದೆ ಎಂದು ಎಐಐಎಂಎಸ್ ಅಧಿಕಾರಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇ-ಹಾಸ್ಪಿಟಲ್ ಡೇಟಾವನ್ನು ಸರ್ವರ್‌ಗಳಲ್ಲಿ ಮರುಸ್ಥಾಪಿಸಲಾಗಿದೆ. ಸೇವೆಗಳನ್ನು ಮರುಸ್ಥಾಪಿಸುವ ಮೊದಲು ನೆಟ್‌ವರ್ಕ್ ಅನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ.

AIIMS ದೆಹಲಿ ಸರ್ವರ್ ದಾಳಿ ನಡೆಸಿದ್ದು ಚೀನಾದ ಹ್ಯಾಕರ್​​, 5 ಸರ್ವರ್​​ಗಳ ಡೇಟಾ ಹಿಂಪಡೆಯಲಾಗಿದೆ: ವರದಿ
ಏಮ್ಸ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Dec 14, 2022 | 7:25 PM

Share

ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಕಂಪ್ಯೂಟರ್ ಸರ್ವರ್‌ನ ಮೇಲೆ ಚೀನಾದ ಹ್ಯಾಕರ್‌ಗಳು  (China Hacker) ದಾಳಿ ನಡೆಸಿದ್ದು, ಐದು ಸರ್ವರ್‌ಗಳಲ್ಲಿನ ಡೇಟಾವನ್ನು ಇದೀಗ ಯಶಸ್ವಿಯಾಗಿ ಹಿಂಪಡೆಯಲಾಗಿದೆ ಎಂದು ಸರ್ಕಾರದ  ಮೂಲವು ಬುಧವಾರ ತಿಳಿಸಿದೆ. ಏಮ್ಸ್  ದೆಹಲಿ  ಸರ್ವರ್ ಮೇಲೆ ಚೀನಾದವರು ದಾಳಿ ಮಾಡಿದ್ದು, ದಾಳಿಯು ಚೀನಾದಿಂದ ಹುಟ್ಟಿಕೊಂಡಿದೆ ಎಂದು ಎಫ್ಐಆರ್ ಹೇಳಿದೆ. 100 ಸರ್ವರ್‌ಗಳಲ್ಲಿ (40 ಭೌತಿಕ ಮತ್ತು 60 ವರ್ಚುವಲ್), ಐದು ಭೌತಿಕ ಸರ್ವರ್‌ಗಳನ್ನು ಹ್ಯಾಕರ್‌ಗಳು ಯಶಸ್ವಿಯಾಗಿ ನುಸುಳಿದ್ದಾರೆ. ಇಲ್ಲಿ ಹಾನಿ ಜಾಸ್ತಿ ಆಗಿದ್ದು, ಅದನ್ನೀಗ ಸರಿ ಮಾಡಲಾಗಿದೆ. ಐದು ಸರ್ವರ್‌ಗಳಲ್ಲಿನ ಡೇಟಾವನ್ನು ಇದೀಗ ಯಶಸ್ವಿಯಾಗಿ ಹಿಂಪಡೆಯಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ (MoHFW) ಮೂಲ ತಿಳಿಸಿದೆ. AIIMS ದೆಹಲಿಯು ತನ್ನ ಸರ್ವರ್‌ ಹ್ಯಾಕ್ ಆಗಿರುವ ಬಗ್ಗೆ ನವೆಂಬರ್ 23 ರಂದು ಮೊದಲು ವರದಿ ಮಾಡಿತ್ತು. ಸರ್ವರ್‌ಗಳ ಭದ್ರತೆಗಳನ್ನು ನೋಡಿಕೊಳ್ಳಲು ನಿಯೋಜಿಸಲಾದ ಇಬ್ಬರು ವಿಶ್ಲೇಷಕರನ್ನು ಸೈಬರ್ ಭದ್ರತೆಯ ಉಲ್ಲಂಘನೆಗಾಗಿ ಅಮಾನತುಗೊಳಿಸಲಾಗಿದೆ.

ಇ-ಹಾಸ್ಪಿಟಲ್ ಡೇಟಾವನ್ನು ಮರುಸ್ಥಾಪಿಸಲಾಗಿದೆ ಎಂದು ಎಐಐಎಂಎಸ್ ಅಧಿಕಾರಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇ-ಹಾಸ್ಪಿಟಲ್ ಡೇಟಾವನ್ನು ಸರ್ವರ್‌ಗಳಲ್ಲಿ ಮರುಸ್ಥಾಪಿಸಲಾಗಿದೆ. ಸೇವೆಗಳನ್ನು ಮರುಸ್ಥಾಪಿಸುವ ಮೊದಲು ನೆಟ್‌ವರ್ಕ್ ಅನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ. ಡೇಟಾದ ಪ್ರಮಾಣ ಮತ್ತು ಆಸ್ಪತ್ರೆಯ ಸೇವೆಗಳಿಗೆ ಹೆಚ್ಚಿನ ಸಂಖ್ಯೆಯ ಸರ್ವರ್‌ಗಳು/ಕಂಪ್ಯೂಟರ್‌ಗಳಿಂದಾಗಿ ಪ್ರಕ್ರಿಯೆಯು ಸ್ವಲ್ಪ ಸಮಯ ತೆಗೆದುಕೊಳ್ಳುತ್ತಿದೆ. ಸೈಬರ್ ಭದ್ರತೆಗಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.

“ಹೊರರೋಗಿ, ಒಳರೋಗಿ, ಪ್ರಯೋಗಾಲಯಗಳು ಸೇರಿದಂತೆ ಎಲ್ಲಾ ಆಸ್ಪತ್ರೆ ಸೇವೆಗಳನ್ನು ಮ್ಯಾನುವಲ್ ಮೋಡ್‌ನಲ್ಲಿ (ಜನರೇ ನಿರ್ವಹಿಸುವುದು) ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತವೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ  ಓದಿ: Matrimonial App fraud: ಮ್ಯಾಟ್ರಿಮೋನಿ ಆ್ಯಪ್ ವಂಚನೆ: ಕೇರಳ ಕುಟ್ಟಿಗಳ ಮಾತಿಗೆ ಮರುಳಾದ ಶಿಕ್ಷಕ, ಹಣದ ಜೊತೆಗೆ ಕೆಲಸವೂ ಕಳೆದುಕೊಂಡ

ಈ ತಿಂಗಳ ಆರಂಭದಲ್ಲಿ, ದೆಹಲಿಯ ಏಮ್ಸ್​​ನಲ್ಲಿನ ಕಂಪ್ಯೂಟರ್ ಸಿಸ್ಟಮ್ ಮೇಲಿನ ದಾಳಿಯ ಬಗ್ಗೆ ದೆಹಲಿ ಪೊಲೀಸರ ವಿಶೇಷ ಸೆಲ್ ತನಿಖೆಯನ್ನು ಪ್ರಾರಂಭಿಸಿತು. ಅಧಿಕೃತ ಮೂಲಗಳ ಪ್ರಕಾರ, ಮಾಲ್‌ವೇರ್ ದಾಳಿಯ ಮೂಲವನ್ನು ಗುರುತಿಸಲು ದೆಹಲಿಯ AIIMS ನ ಸೋಂಕಿತ ಸರ್ವರ್ ಅನ್ನು ಪರಿಶೀಲಿಸಲು ಕೇಂದ್ರೀಯ ವಿಧಿವಿಜ್ಞಾನ ಪ್ರಯೋಗಾಲಯದ (CFSL) ತಂಡವನ್ನು ಕಳುಹಿಸಲಾಗಿದೆ.

Published On - 7:23 pm, Wed, 14 December 22

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ