AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷವೂ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚು: ಆರೋಗ್ಯಕರ ಗಾಳಿ ಮತ್ತಷ್ಟು ಹಾಳು

ದೆಹಲಿಯಲ್ಲಿ ವಾಯುಮಾಲಿನ್ಯದ ಪ್ರಮಾಣವು ದಿನೇ ದಿನೇ ಹೆಚ್ಚಾಗುತ್ತಿದ್ದು, ನವೆಂಬರ್ 2019ಕ್ಕೆ ಹೋಲಿಸಿದರೆ ಈ ವರ್ಷ ವಾಯುಮಾಲಿನ್ಯ ಉಲ್ಬಣಗೊಂಡಿರುವುದು ಢಾಳಾಗಿ ಕಾಣಸಿಗುತ್ತದೆ. ಇದು ನೆರೆ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯಗಳ ಸುಡುವಿಕೆಯಿಂದ ಉಂಟಾಗುವ ಹೊಗೆಯಿಂದ ಉಂಟಾಗಿದ್ದು, ಆರೋಗ್ಯಕರ ಗಾಳಿಯನ್ನು ಹಾಳು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಗುರುವಾರ ದೆಹಲಿಯಲ್ಲಿ ವಾಯುಮಾಲಿನ್ಯ ಗುಣಮಟ್ಟ ಹೆಚ್ಚಾಗಿದ್ದು, ಇದಕ್ಕೆ ಮೂಲ ಕಾರಣ ಈ ವರ್ಷ ಶೇಕಡಾ 42ರಷ್ಟು ತ್ಯಾಜ್ಯ ಸುಡುವಿಕೆಯಿಂದ ಉಂಟಾದ ಮಾಲಿನ್ಯ ಎಂದು ಪರಿಗಣಿಸಲಾಗಿದೆ. ನಗರದ 24 ಗಂಟೆಗಳ ಸರಾಸರಿ ವಾಯು ಗುಟ್ಟಮಟ್ಟದ […]

ಈ ವರ್ಷವೂ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚು: ಆರೋಗ್ಯಕರ ಗಾಳಿ ಮತ್ತಷ್ಟು ಹಾಳು
ಸಾಧು ಶ್ರೀನಾಥ್​
| Updated By: KUSHAL V|

Updated on: Nov 07, 2020 | 5:56 PM

Share

ದೆಹಲಿಯಲ್ಲಿ ವಾಯುಮಾಲಿನ್ಯದ ಪ್ರಮಾಣವು ದಿನೇ ದಿನೇ ಹೆಚ್ಚಾಗುತ್ತಿದ್ದು, ನವೆಂಬರ್ 2019ಕ್ಕೆ ಹೋಲಿಸಿದರೆ ಈ ವರ್ಷ ವಾಯುಮಾಲಿನ್ಯ ಉಲ್ಬಣಗೊಂಡಿರುವುದು ಢಾಳಾಗಿ ಕಾಣಸಿಗುತ್ತದೆ. ಇದು ನೆರೆ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯಗಳ ಸುಡುವಿಕೆಯಿಂದ ಉಂಟಾಗುವ ಹೊಗೆಯಿಂದ ಉಂಟಾಗಿದ್ದು, ಆರೋಗ್ಯಕರ ಗಾಳಿಯನ್ನು ಹಾಳು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ.

ಗುರುವಾರ ದೆಹಲಿಯಲ್ಲಿ ವಾಯುಮಾಲಿನ್ಯ ಗುಣಮಟ್ಟ ಹೆಚ್ಚಾಗಿದ್ದು, ಇದಕ್ಕೆ ಮೂಲ ಕಾರಣ ಈ ವರ್ಷ ಶೇಕಡಾ 42ರಷ್ಟು ತ್ಯಾಜ್ಯ ಸುಡುವಿಕೆಯಿಂದ ಉಂಟಾದ ಮಾಲಿನ್ಯ ಎಂದು ಪರಿಗಣಿಸಲಾಗಿದೆ. ನಗರದ 24 ಗಂಟೆಗಳ ಸರಾಸರಿ ವಾಯು ಗುಟ್ಟಮಟ್ಟದ ಸೂಚ್ಯಂಕ 406ರಷ್ಟಿತ್ತು. ಗುರುವಾರ, ಎಕ್ಯೂಐ 450 ಆಗಿದ್ದು, ಕಳೆದ ವರ್ಷ ನವೆಂಬರ್ 15ರಂದು 458 ರಷ್ಟಿತ್ತು.

ದಿನೇ ದಿನೇ ಹೆಚ್ಚಾಗುತ್ತಿರುವ ವಾಯುಮಾಲಿನ್ಯಕ್ಕೆ ಪಂಜಾಬ್ ಮೂಲ ಕಾರಣಕರ್ತವಾಗಿದ್ದು, ಶುಕ್ರವಾರ ಗಾಳಿಯ ವೇಗ ಗಂಟೆಗೆ 10 ಕಿಲೋಮೀಟರ್ ಮತ್ತು ಕನಿಷ್ಟ ತಾಪಮಾನ 11.2 ಡಿಗ್ರಿ ಸೆಲ್ಸಿಯಸ್ ಇದ್ದು, ಶಾಂತ ಗಾಳಿ ಮತ್ತು ಕಡಿಮೆ ತಾಪಮಾನವು ಮಾಲಿನ್ಯಯುಕ್ತವಾದ ಅಂಶಗಳನ್ನು ನೆಲಕ್ಕೆ ಹತ್ತಿರವಾಗುವಂತೆ ಮಾಡುತ್ತದೆ. ಇನ್ನು ಇದು ಕೊವಿಡ್-19 ಸಾಂಕ್ರಾಮಿಕ ರೋಗ ಹರಡುವ ಸಂದರ್ಭವಾಗಿರುವುದರಿಂದ ವಾಯುಮಾಲಿನ್ಯದ ಜೊತೆಗೆ ಸುತ್ತಿಕೊಂಡ ಉಸಿರಾಟ ಸಂಬಂಧಿತ ಕಾಯಿಲೆಗಳು ನೇರವಾಗಿ ಕೊರೊನಾದ ಹೆಚ್ಚಳಕ್ಕೆ ನಾಂದಿ ಹಾಡುವ ಸಾಧ್ಯತೆ ಹೆಚ್ಚಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಜನರು ಆದಷ್ಟು ಹೊರಾಂಗಣ ಚಟುವಟಿಕೆಗಳನ್ನು ಕಡಿಮೆಗೊಳಿಸಲು, ಮುಂಜಾನೆಯ ನಡಿಗೆಯನ್ನು ನಿಲ್ಲಿಸುವುದರ ಜೊತೆಗೆ ಕೊಠಡಿ ಬಾಗಿಲುಗಳನ್ನು ಮುಚ್ಚುವಂತೆ ಅಧಿಕಾರಿಗಳು ಸೂಚನೆಯನ್ನು ನೀಡಿದ್ದಾರೆ. ತೀವ್ರವಾದ ಗಾಳಿಯ ಗುಣಮಟ್ಟವು ಆರೋಗ್ಯವಂತ ಜನರಿಗೆ ಉಸಿರಾಟದ ತೊಂದರೆ ಮತ್ತು ಶ್ವಾಸಕೋಶ ಅಥವಾ ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದವರಿಗೆ ಗಂಭೀರವಾದ ಪರಿಣಾಮವನ್ನು ಉಂಟುಮಾಡಲಿದ್ದು, ಎದೆನೋವು, ಕೆಮ್ಮು, ಉಬ್ಬಸ ಇತ್ಯಾದಿ ಸಮಸ್ಯೆಗಳು ಬಂದರೆ ವೈದ್ಯರನ್ನು ಸಂಪರ್ಕಿಸಿ ಎಂಬ ಸಲಹೆ ನೀಡಲಾಗಿದೆ.

ಶುಕ್ರವಾರ ಬೆಳಗ್ಗೆ ಗಾಳಿಯ ಮಟ್ಟಕ್ಕೆ ಹೋಲಿಸಿದರೆ ಸಂಜೆ ಹೊತ್ತಿಗೆ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಇದೆ. ಮತ್ತು ಗಡಿ ಪದರದ ಗಾಳಿಯ ದಿಕ್ಕು ಉತ್ತರ ವಾಯವ್ಯ ದಿಕ್ಕಿನಲ್ಲಿದ್ದು, ಕೃಷಿ ಬೆಂಕಿಯೂ ನೇರವಾಗಿ ದೆಹಲಿಯ ಮೇಲೆ ಧಾವಿಸುವುದರಿಂದ ಇದರ ಪರಿಣಾಮ ಹೆಚ್ಚಾಗಿರುತ್ತದೆ ಎಂದು ಐಎಂಡಿಯ ಪರಿಸರ ಮೇಲ್ವಿಚಾರಣಾ ಸಂಶೋಧನಾ ಕೇಂದ್ರದ ಮುಖ್ಯಸ್ಥ ವಿ.ಕೆ. ಸೋನಿ ತಿಳಿಸಿದ್ದಾರೆ.

ಇನ್ನು ಬೆಂಗಳೂರಿನ ವಾಯುಮಾಲಿನ್ಯ ಮಟ್ಟವು ಶನಿವಾರದಂದು 32ರಷ್ಟು ಗಾಳಿಯ ಗುಣಮಟ್ಟದ ಸೂಚ್ಯಂಕವನ್ನು ಹೊಂದಿದ್ದು, ಸುರಕ್ಷಿತ ಮಟ್ಟದಲ್ಲಿ ಸದ್ಯಕ್ಕೆ ಕಂಡು ಬಂದಿದೆಯಾದರೂ, ಹವಾಮಾನದ ಬದಲಾವಣೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಗಮನಹರಿಸುವುದು ಮುಖ್ಯವಾಗಿದೆ. ದೆಹಲಿಯು 1000ರಷ್ಟು ಎಕ್ಯೂಐ ವಾಯುಮಾಲಿನ್ಯವನ್ನು ಹೊಂದಿದ್ದು, ಅಪಾಯದ ಹಂತವನ್ನು ಮೀರುವ ಸಾಧ್ಯತೆಗಳೇ ಹೆಚ್ಚು ಕಂಡುಬಂದಿದೆ.

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್