AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷವೂ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚು: ಆರೋಗ್ಯಕರ ಗಾಳಿ ಮತ್ತಷ್ಟು ಹಾಳು

ದೆಹಲಿಯಲ್ಲಿ ವಾಯುಮಾಲಿನ್ಯದ ಪ್ರಮಾಣವು ದಿನೇ ದಿನೇ ಹೆಚ್ಚಾಗುತ್ತಿದ್ದು, ನವೆಂಬರ್ 2019ಕ್ಕೆ ಹೋಲಿಸಿದರೆ ಈ ವರ್ಷ ವಾಯುಮಾಲಿನ್ಯ ಉಲ್ಬಣಗೊಂಡಿರುವುದು ಢಾಳಾಗಿ ಕಾಣಸಿಗುತ್ತದೆ. ಇದು ನೆರೆ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯಗಳ ಸುಡುವಿಕೆಯಿಂದ ಉಂಟಾಗುವ ಹೊಗೆಯಿಂದ ಉಂಟಾಗಿದ್ದು, ಆರೋಗ್ಯಕರ ಗಾಳಿಯನ್ನು ಹಾಳು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಗುರುವಾರ ದೆಹಲಿಯಲ್ಲಿ ವಾಯುಮಾಲಿನ್ಯ ಗುಣಮಟ್ಟ ಹೆಚ್ಚಾಗಿದ್ದು, ಇದಕ್ಕೆ ಮೂಲ ಕಾರಣ ಈ ವರ್ಷ ಶೇಕಡಾ 42ರಷ್ಟು ತ್ಯಾಜ್ಯ ಸುಡುವಿಕೆಯಿಂದ ಉಂಟಾದ ಮಾಲಿನ್ಯ ಎಂದು ಪರಿಗಣಿಸಲಾಗಿದೆ. ನಗರದ 24 ಗಂಟೆಗಳ ಸರಾಸರಿ ವಾಯು ಗುಟ್ಟಮಟ್ಟದ […]

ಈ ವರ್ಷವೂ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚು: ಆರೋಗ್ಯಕರ ಗಾಳಿ ಮತ್ತಷ್ಟು ಹಾಳು
Follow us
ಸಾಧು ಶ್ರೀನಾಥ್​
| Updated By: KUSHAL V

Updated on: Nov 07, 2020 | 5:56 PM

ದೆಹಲಿಯಲ್ಲಿ ವಾಯುಮಾಲಿನ್ಯದ ಪ್ರಮಾಣವು ದಿನೇ ದಿನೇ ಹೆಚ್ಚಾಗುತ್ತಿದ್ದು, ನವೆಂಬರ್ 2019ಕ್ಕೆ ಹೋಲಿಸಿದರೆ ಈ ವರ್ಷ ವಾಯುಮಾಲಿನ್ಯ ಉಲ್ಬಣಗೊಂಡಿರುವುದು ಢಾಳಾಗಿ ಕಾಣಸಿಗುತ್ತದೆ. ಇದು ನೆರೆ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯಗಳ ಸುಡುವಿಕೆಯಿಂದ ಉಂಟಾಗುವ ಹೊಗೆಯಿಂದ ಉಂಟಾಗಿದ್ದು, ಆರೋಗ್ಯಕರ ಗಾಳಿಯನ್ನು ಹಾಳು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ.

ಗುರುವಾರ ದೆಹಲಿಯಲ್ಲಿ ವಾಯುಮಾಲಿನ್ಯ ಗುಣಮಟ್ಟ ಹೆಚ್ಚಾಗಿದ್ದು, ಇದಕ್ಕೆ ಮೂಲ ಕಾರಣ ಈ ವರ್ಷ ಶೇಕಡಾ 42ರಷ್ಟು ತ್ಯಾಜ್ಯ ಸುಡುವಿಕೆಯಿಂದ ಉಂಟಾದ ಮಾಲಿನ್ಯ ಎಂದು ಪರಿಗಣಿಸಲಾಗಿದೆ. ನಗರದ 24 ಗಂಟೆಗಳ ಸರಾಸರಿ ವಾಯು ಗುಟ್ಟಮಟ್ಟದ ಸೂಚ್ಯಂಕ 406ರಷ್ಟಿತ್ತು. ಗುರುವಾರ, ಎಕ್ಯೂಐ 450 ಆಗಿದ್ದು, ಕಳೆದ ವರ್ಷ ನವೆಂಬರ್ 15ರಂದು 458 ರಷ್ಟಿತ್ತು.

ದಿನೇ ದಿನೇ ಹೆಚ್ಚಾಗುತ್ತಿರುವ ವಾಯುಮಾಲಿನ್ಯಕ್ಕೆ ಪಂಜಾಬ್ ಮೂಲ ಕಾರಣಕರ್ತವಾಗಿದ್ದು, ಶುಕ್ರವಾರ ಗಾಳಿಯ ವೇಗ ಗಂಟೆಗೆ 10 ಕಿಲೋಮೀಟರ್ ಮತ್ತು ಕನಿಷ್ಟ ತಾಪಮಾನ 11.2 ಡಿಗ್ರಿ ಸೆಲ್ಸಿಯಸ್ ಇದ್ದು, ಶಾಂತ ಗಾಳಿ ಮತ್ತು ಕಡಿಮೆ ತಾಪಮಾನವು ಮಾಲಿನ್ಯಯುಕ್ತವಾದ ಅಂಶಗಳನ್ನು ನೆಲಕ್ಕೆ ಹತ್ತಿರವಾಗುವಂತೆ ಮಾಡುತ್ತದೆ. ಇನ್ನು ಇದು ಕೊವಿಡ್-19 ಸಾಂಕ್ರಾಮಿಕ ರೋಗ ಹರಡುವ ಸಂದರ್ಭವಾಗಿರುವುದರಿಂದ ವಾಯುಮಾಲಿನ್ಯದ ಜೊತೆಗೆ ಸುತ್ತಿಕೊಂಡ ಉಸಿರಾಟ ಸಂಬಂಧಿತ ಕಾಯಿಲೆಗಳು ನೇರವಾಗಿ ಕೊರೊನಾದ ಹೆಚ್ಚಳಕ್ಕೆ ನಾಂದಿ ಹಾಡುವ ಸಾಧ್ಯತೆ ಹೆಚ್ಚಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಜನರು ಆದಷ್ಟು ಹೊರಾಂಗಣ ಚಟುವಟಿಕೆಗಳನ್ನು ಕಡಿಮೆಗೊಳಿಸಲು, ಮುಂಜಾನೆಯ ನಡಿಗೆಯನ್ನು ನಿಲ್ಲಿಸುವುದರ ಜೊತೆಗೆ ಕೊಠಡಿ ಬಾಗಿಲುಗಳನ್ನು ಮುಚ್ಚುವಂತೆ ಅಧಿಕಾರಿಗಳು ಸೂಚನೆಯನ್ನು ನೀಡಿದ್ದಾರೆ. ತೀವ್ರವಾದ ಗಾಳಿಯ ಗುಣಮಟ್ಟವು ಆರೋಗ್ಯವಂತ ಜನರಿಗೆ ಉಸಿರಾಟದ ತೊಂದರೆ ಮತ್ತು ಶ್ವಾಸಕೋಶ ಅಥವಾ ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದವರಿಗೆ ಗಂಭೀರವಾದ ಪರಿಣಾಮವನ್ನು ಉಂಟುಮಾಡಲಿದ್ದು, ಎದೆನೋವು, ಕೆಮ್ಮು, ಉಬ್ಬಸ ಇತ್ಯಾದಿ ಸಮಸ್ಯೆಗಳು ಬಂದರೆ ವೈದ್ಯರನ್ನು ಸಂಪರ್ಕಿಸಿ ಎಂಬ ಸಲಹೆ ನೀಡಲಾಗಿದೆ.

ಶುಕ್ರವಾರ ಬೆಳಗ್ಗೆ ಗಾಳಿಯ ಮಟ್ಟಕ್ಕೆ ಹೋಲಿಸಿದರೆ ಸಂಜೆ ಹೊತ್ತಿಗೆ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಇದೆ. ಮತ್ತು ಗಡಿ ಪದರದ ಗಾಳಿಯ ದಿಕ್ಕು ಉತ್ತರ ವಾಯವ್ಯ ದಿಕ್ಕಿನಲ್ಲಿದ್ದು, ಕೃಷಿ ಬೆಂಕಿಯೂ ನೇರವಾಗಿ ದೆಹಲಿಯ ಮೇಲೆ ಧಾವಿಸುವುದರಿಂದ ಇದರ ಪರಿಣಾಮ ಹೆಚ್ಚಾಗಿರುತ್ತದೆ ಎಂದು ಐಎಂಡಿಯ ಪರಿಸರ ಮೇಲ್ವಿಚಾರಣಾ ಸಂಶೋಧನಾ ಕೇಂದ್ರದ ಮುಖ್ಯಸ್ಥ ವಿ.ಕೆ. ಸೋನಿ ತಿಳಿಸಿದ್ದಾರೆ.

ಇನ್ನು ಬೆಂಗಳೂರಿನ ವಾಯುಮಾಲಿನ್ಯ ಮಟ್ಟವು ಶನಿವಾರದಂದು 32ರಷ್ಟು ಗಾಳಿಯ ಗುಣಮಟ್ಟದ ಸೂಚ್ಯಂಕವನ್ನು ಹೊಂದಿದ್ದು, ಸುರಕ್ಷಿತ ಮಟ್ಟದಲ್ಲಿ ಸದ್ಯಕ್ಕೆ ಕಂಡು ಬಂದಿದೆಯಾದರೂ, ಹವಾಮಾನದ ಬದಲಾವಣೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಗಮನಹರಿಸುವುದು ಮುಖ್ಯವಾಗಿದೆ. ದೆಹಲಿಯು 1000ರಷ್ಟು ಎಕ್ಯೂಐ ವಾಯುಮಾಲಿನ್ಯವನ್ನು ಹೊಂದಿದ್ದು, ಅಪಾಯದ ಹಂತವನ್ನು ಮೀರುವ ಸಾಧ್ಯತೆಗಳೇ ಹೆಚ್ಚು ಕಂಡುಬಂದಿದೆ.

ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್