AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ವಾಯು ಮಾಲಿನ್ಯ: ಅವಧಿಗೂ ಮುನ್ನವೇ ಶಾಲೆಗಳಿಗೆ ಚಳಿಗಾಲದ ರಜೆ ಘೋಷಣೆ

ಒಂದು ವಾರದಿಂದ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಕ್ಷೀಣಿಸುತ್ತಿರುವುದರಿಂದ ದೆಹಲಿ ಸರ್ಕಾರವು ಶಾಲೆಗಳಿಗೆ ನವೆಂಬರ್ 9 ರಿಂದ 18 ರವರೆಗೆ  ರಜೆಯನ್ನು ಘೋಷಿಸಿದೆ. ಪ್ರತಿ ವರ್ಷವೂ ಡಿಸೆಂಬರ್​ನಲ್ಲಿ ತುಂಬಾ ಚಳಿ ಇರುವ ಕಾರಣ ಒಂದು ವಾರಗಳ ಕಾಲ ಚಳಿಗಾಲದ ರಜೆ ನೀಡಲಾಗುತ್ತಿತ್ತು. ಆದರೆ ಗಾಳಿಯ ಗುಣಮಟ್ಟ ತೀರಾ ಕಳಪೆಯಾಗಿರುವ ಕಾರಣ ನವೆಂಬರ್ 9-18 ರವರೆಗೆ ರಜೆ ಘೋಷಿಸಲಾಗಿದೆ.

ದೆಹಲಿ ವಾಯು ಮಾಲಿನ್ಯ: ಅವಧಿಗೂ ಮುನ್ನವೇ ಶಾಲೆಗಳಿಗೆ ಚಳಿಗಾಲದ ರಜೆ ಘೋಷಣೆ
ವಾಯು ಮಾಲಿನ್ಯImage Credit source: Mint
ನಯನಾ ರಾಜೀವ್
|

Updated on:Nov 08, 2023 | 2:28 PM

Share

ಒಂದು ವಾರದಿಂದ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಕ್ಷೀಣಿಸುತ್ತಿರುವುದರಿಂದ ದೆಹಲಿ ಸರ್ಕಾರವು ಶಾಲೆಗಳಿಗೆ ನವೆಂಬರ್ 9 ರಿಂದ 18 ರವರೆಗೆ  ರಜೆಯನ್ನು ಘೋಷಿಸಿದೆ. ಪ್ರತಿ ವರ್ಷವೂ ಡಿಸೆಂಬರ್​ನಲ್ಲಿ ತುಂಬಾ ಚಳಿ ಇರುವ ಕಾರಣ ಒಂದು ವಾರಗಳ ಕಾಲ ಚಳಿಗಾಲದ ರಜೆ ನೀಡಲಾಗುತ್ತಿತ್ತು. ಆದರೆ ಗಾಳಿಯ ಗುಣಮಟ್ಟ ತೀರಾ ಕಳಪೆಯಾಗಿರುವ ಕಾರಣ ನವೆಂಬರ್ 9-18 ರವರೆಗೆ ರಜೆ ಘೋಷಿಸಲಾಗಿದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ದ ಅಂಕಿಅಂಶಗಳ ಪ್ರಕಾರ ನಗರದ ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕವು (ಎಕ್ಯೂಐ) ಬೆಳಿಗ್ಗೆ 7 ಗಂಟೆಗೆ 421 ದಾಖಲಾಗಿದೆ.

ಆನಂದ್ ವಿಹಾರ್, ದ್ವಾರಕಾ, ಶಾದಿಪುರ್, ಮಂದಿರ ಮಾರ್ಗ, ಐಟಿಒ, ಆರ್‌ಕೆ ಪುರಂ, ಪಂಜಾಬಿ ಬಾಗ್, ಉತ್ತರ ಕ್ಯಾಂಪಸ್, ಮಥುರಾ ರಸ್ತೆ, ರೋಹಿಣಿ, ಪಟ್‌ಪರ್‌ಗಂಜ್, ಓಖ್ಲಾ, ಇಂಡಿಯಾ ಗೇಟ್, ಮುಂಡ್ಕಾ ಸೇರಿದಂತೆ ಹಲವಾರು ವಾಯು ನಿಗಾ ಕೇಂದ್ರಗಳು ಬೆಳಗ್ಗೆ 6 ಗಂಟೆಗೆ 400 ಕ್ಕಿಂತ ಹೆಚ್ಚಿನ AQI ದಾಖಲಿಸಿವೆ.

ಮತ್ತಷ್ಟು ಓದಿ:  Delhi Air Pollution: ದೆಹಲಿ ವಾಯು ಮಾಲಿನ್ಯ, ಪಂಜಾಬ್​ಗೆ ಸುಪ್ರೀಂ ಛೀಮಾರಿ, ಹುಲ್ಲು ಸುಡುವುದನ್ನು ನಿಲ್ಲಿಸಲು ಸೂಚನೆ

ಆನಂದ್ ವಿಹಾರ್‌ನಲ್ಲಿ ಎಕ್ಯೂಐ 452, ಆರ್‌ಕೆ ಪುರಂನಲ್ಲಿ 433, ಪಂಜಾಬಿ ಬಾಗ್‌ನಲ್ಲಿ 460 ಮತ್ತು ಐಟಿಒದಲ್ಲಿ 413 ದಾಖಲಾಗಿದೆ. ಮಾಲಿನ್ಯ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 10 ಮತ್ತು 12ನೇ ತರಗತಿಗಳನ್ನು ಹೊರತುಪಡಿಸಿ ದೈಹಿಕ ತರಗತಿಗಳನ್ನು ನವೆಂಬರ್ 10ರವರೆಗೆ ಸ್ಥಗಿತಗೊಳಿಸುವಂತೆ ದೆಹಲಿಯ ಎಲ್ಲಾ ಶಾಲೆಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಪರಿಸರ ಸಚಿವ ಗೋಪಾಲ್ ರೈ ಹೇಳಿದ್ದರು.

ಶಾಲೆಗಳನ್ನು ಮುಚ್ಚುವುದರಿಂದ ವಿದ್ಯಾರ್ಥಿಗಳ ಅಧ್ಯಯನದ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರುವುದನ್ನು ತಡೆಯಲು, ಚಳಿಗಾಲದ ರಜಾದಿನವನ್ನು ಈ ರಜೆಗಳಿಗೆ ಸರಿಹೊಂದಿಸಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:27 pm, Wed, 8 November 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?