AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Air Pollution: ದೆಹಲಿ ವಾಯು ಮಾಲಿನ್ಯ, ಪಂಜಾಬ್​ಗೆ ಸುಪ್ರೀಂ ಛೀಮಾರಿ, ಹುಲ್ಲು ಸುಡುವುದನ್ನು ನಿಲ್ಲಿಸಲು ಸೂಚನೆ

ದೆಹಲಿಯಲ್ಲಿ ಮಾಲಿನ್ಯದ ಮಟ್ಟ ನಿರಂತರವಾಗಿ ಹೆಚ್ಚುತ್ತಿದೆ. ಈ ಸಂಬಂಧ ಇಂದು ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆಯಿತು. ಪಂಜಾಬ್​ ಸರ್ಕಾರವನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತು. ನೀವು ಹೇಗೆ ಮಾಡುತ್ತೀರಿ ಎಂಬುದು ನನಗೆ ತಿಳಿದಿಲ್ಲ, ಆದರೆ ಹುಲ್ಲು ಸುಡುವಿಕೆಯನ್ನು ಕಡಿಮೆ ಮಾಡಲೇಬೇಕು ಅದು ನಿಮ್ಮ ಕೆಲಸ, ಈ ಸಮಸ್ಯೆಗೆ ನೀವೇ ಪರಿಹಾರ ಕಂಡುಹಿಡಿಯಬೇಕು ಎಂದು ಕೋರ್ಟ್​ ಹೇಳಿದೆ.

Delhi Air Pollution: ದೆಹಲಿ ವಾಯು ಮಾಲಿನ್ಯ, ಪಂಜಾಬ್​ಗೆ ಸುಪ್ರೀಂ ಛೀಮಾರಿ, ಹುಲ್ಲು ಸುಡುವುದನ್ನು ನಿಲ್ಲಿಸಲು ಸೂಚನೆ
ಬೆಂಕಿImage Credit source: ABP Live
ನಯನಾ ರಾಜೀವ್
|

Updated on: Nov 07, 2023 | 12:43 PM

Share

ದೆಹಲಿಯಲ್ಲಿ ಮಾಲಿನ್ಯದ ಮಟ್ಟ ನಿರಂತರವಾಗಿ ಹೆಚ್ಚುತ್ತಿದೆ. ಈ ಸಂಬಂಧ ಇಂದು ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆಯಿತು. ಪಂಜಾಬ್​ ಸರ್ಕಾರವನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತು. ನೀವು ಹೇಗೆ ಮಾಡುತ್ತೀರಿ ಎಂಬುದು ನನಗೆ ತಿಳಿದಿಲ್ಲ, ಆದರೆ ಹುಲ್ಲು ಸುಡುವಿಕೆಯನ್ನು ಕಡಿಮೆ ಮಾಡಲೇಬೇಕು ಅದು ನಿಮ್ಮ ಕೆಲಸ, ಈ ಸಮಸ್ಯೆಗೆ ನೀವೇ ಪರಿಹಾರ ಕಂಡುಹಿಡಿಯಬೇಕು ಎಂದು ಕೋರ್ಟ್​ ಹೇಳಿದೆ.

ಹಬ್ಬ ಹರಿದಿನಗಳಲ್ಲಿ ಪಟಾಕಿ ಸಿಡಿಸುವ ವಿಚಾರದಲ್ಲಿ ಹಿಂದಿನ ಆದೇಶವನ್ನು ಪಾಲಿಸುವಂತೆ ರಾಜಸ್ಥಾನ ಹಾಗೂ ಇತರೆ ರಾಜ್ಯಗಳಿಗೆ ಸುಪ್ರೀಂಕೋರ್ಟ್​ ನಿರ್ದೇಶನ ನೀಡಿದೆ. ವಿಶೇಷವಾಗಿ ಹಬ್ಬ ಹರಿದಿನಗಳಲ್ಲಿ ವಾಯು ಮಾಲಿನ್ಯವನ್ನು ತಗ್ಗಿಸಲು ಕ್ರಮ ಕೈಗೊಳ್ಳುವಂತೆ ರಾಜಸ್ಥಾನ ಸರ್ಕಾರಕ್ಕೆ ಸೂಚನೆ ನೀಡಿದೆ.

ಮಾಲಿನ್ಯವನ್ನು ನಿಯಂತ್ರಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಪಂಜಾಬ್​ನಲ್ಲಿ ಹುಲ್ಲು ಸುಡುವ ಪ್ರಕರಣಗಳಲ್ಲಿ ಯಾವುದೇ ಇಳಿಕೆ ಕಂಡುಬರುತ್ತಿಲ್ಲ.

ಮತ್ತಷ್ಟು ಓದಿ: ದೆಹಲಿಯಲ್ಲಿ ಮಿತಿಮೀರಿದ ವಾಯು ಮಾಲಿನ್ಯ: ನವೆಂಬರ್‌ 13ರಿಂದ 20ರವರೆಗೆ ವಾಹನಗಳ ಬೆಸ-ಸಮ ನಿಯಮ ಮತ್ತೆ ಜಾರಿ

ಪಂಜಾಬ್​ನ 2060 ಕಡೆಗಳಲ್ಲಿ ಹುಲ್ಲು ಸುಡುವ ಪ್ರಕರಣಗಳು ವರದಿಯಾಗಿದೆ, ಇದುವರೆಗೆ 19,463 ಹುಲ್ಲು ಸುಡುವ ಪ್ರಕರಣಗಳು ವರದಿಯಾಗಿವೆ. ಇದರಿಂದಾಗಿ ಪಂಜಾಬ್​ನ ಹಲವು ನಗರಗಳ ವಾಯು ಗುಣಮಟ್ಟ ಸೂಚ್ಯಂಕ ಈಗ ಕಳಪೆ ವರ್ಗವನ್ನು ತಲುಪಿದೆ.

ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಾಗಿದ್ದು, ಸಾರ್ವಜನಿಕ ಯೋಜನೆಗಳಿಗೆ ಸಂಬಂಧಿಸಿದ ನಿರ್ಮಾಣ ಕಾರ್ಯಗಳನ್ನು ಮತ್ತು ಟ್ರಕ್‌ಗಳು ಹಾಗೂ ವಾಣಿಜ್ಯ ಬಳಕೆ ನಾಲ್ಕು ಚಕ್ರಗಳ ವಾಹನಗಳು ರಾಷ್ಟ್ರ ರಾಜಧಾನಿ ಪ್ರವೇಶ ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಕೇಂದ್ರದ ವಾಯುಮಾಲಿನ್ಯ ನಿಯಂತ್ರಣ ಯೋಜನೆ ಅಡಿ ಈಗಾಗಲೇ ಮೂರು ಹಂತದಲ್ಲಿ ನಿಬಂಧನೆಗಳನ್ನು ವಿಧಿಸಲಾಗಿದ್ದು, ಈಗ ನಾಲ್ಕನೇ ಹಂತದ ನಿರ್ಬಂಧಗಳನ್ನು ವಿಧಿಸಲಾಗುತ್ತಿದೆ. ಸಮ ಬೆಸ ನಿಯಮವನ್ನೂ ಕೂಡ ಜಾರಿ ಮಾಡಲಾಗಿದೆ. ದೆಹಲಿಯಲ್ಲಿ ಮಾಲಿನ್ಯಕಾರಕ ಟ್ರಕ್‌ಗಳು ಮತ್ತು ವಾಣಿಜ್ಯ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು