AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Omicron Update: ದೆಹಲಿಯಲ್ಲಿ 4, ರಾಜಸ್ಥಾನದಲ್ಲಿ 4 ಒಮಿಕ್ರಾನ್​ ಕೇಸ್​ ಪತ್ತೆ; ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 49ಕ್ಕೆ ಏರಿಕೆ

ಸದ್ಯ ದೇಶದಲ್ಲಿ ಮಹಾರಾಷ್ಟ್ರದಲ್ಲಿ 20, ರಾಜಸ್ಥಾನದಲ್ಲಿ 13, ಕರ್ನಾಟಕದಲ್ಲಿ 3, ಗುಜರಾತ್​ನಲ್ಲಿ 4, ದೆಹಲಿಯಲ್ಲಿ 6, ಚಂಡಿಗಢ್​​, ಕೇರಳ, ಆಂಧ್ರಪ್ರದೇಶಗಳಲ್ಲಿ ತಲಾ ಒಂದು ಒಮಿಕ್ರಾನ್​ ಪ್ರಕರಣಗಳು ಪತ್ತೆಯಾಗಿವೆ.

Omicron Update: ದೆಹಲಿಯಲ್ಲಿ 4, ರಾಜಸ್ಥಾನದಲ್ಲಿ 4 ಒಮಿಕ್ರಾನ್​ ಕೇಸ್​ ಪತ್ತೆ; ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 49ಕ್ಕೆ ಏರಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 14, 2021 | 12:52 PM

Share

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ 4 ಹೊಸ ಒಮಿಕ್ರಾನ್​ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ದೆಹಲಿಯಲ್ಲಿ ಒಮಿಕ್ರಾನ್​ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಹಾಗೇ, ರಾಜಸ್ಥಾನದಲ್ಲಿ ಕೂಡ 4 ಕೇಸ್​ ದಾಖಲಾಗಿದ್ದು, ಅಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 13ಕ್ಕೆ ಏರಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 49ಕ್ಕೆ ತಲುಪಿದೆ. ನಿನ್ನೆ ಗುಜರಾತ್​​ನಲ್ಲಿ ವ್ಯಕ್ತಿಯೊಬ್ಬರಲ್ಲಿ ಒಮಿಕ್ರಾನ್​ ದೃಢಪಟ್ಟಿತ್ತು. ಅವರು ದಕ್ಷಿಣ ಆಫ್ರಿಕಾದಿಂದ ಆಗಮಿಸಿದ್ದವರಾಗಿದ್ದು, ಕೊವಿಡ್​ 19 ಪಾಸಿಟಿವ್​ ಬಂದಿತ್ತು. ಮಾದರಿಯನ್ನು ಹೆಚ್ಚಿನ ತಪಾಸಣೆಗೆ ಒಳಪಡಿಸಿದಾಗ ಅವರಲ್ಲಿ ಒಮಿಕ್ರಾನ್​ ಇರುವುದು ದೃಢಪಟ್ಟಿತ್ತು. ಹಾಗೇ, ಮಹಾರಾಷ್ಟ್ರದಲ್ಲಿ ಕೂಡ ಇಬ್ಬರು ದುಬೈನಿಂದ ಆಗಮಿಸಿದವರಲ್ಲಿ ಒಮಿಕ್ರಾನ್​ ಇರುವುದು ಗೊತ್ತಾಗಿತ್ತು. ಒಟ್ಟಾರೆ ನಿನ್ನೆ ದೇಶದಲ್ಲಿ ಒಮಿಕ್ರಾನ್​ ಸೋಂಕಿತರ ಸಂಖ್ಯೆ 41ಕ್ಕೆ ತಲುಪಿತ್ತು. 

ಇಂದು ದೆಹಲಿಯಲ್ಲಿ ಪತ್ತೆಯಾದ ನಾಲ್ವರಲ್ಲಿ ಎಲ್ಲರಿಗೂ ಸೌಮ್ಯ ಲಕ್ಷಣವಿದೆ. ದೆಹಲಿಯಲ್ಲಿರುವ ಒಟ್ಟಾರೆ 6 ಸೋಂಕಿತರಲ್ಲಿ ಒಬ್ಬರು ಚೇತರಿಸಿಕೊಳ್ಳುತ್ತಿದ್ದು, ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದಾರೆ. ಹಾಗಿದ್ದಾಗ್ಯೂ ಸದ್ಯ ದೆಹಲಿಯ ಎಲ್​ಎನ್​ಜೆಪಿ ಆಸ್ಪತ್ರೆಯಲ್ಲಿ 35 ಕೊವಿಡ್​ ಸೋಂಕಿತರು ಮತ್ತು 3 ಒಮಿಕ್ರಾನ್​ ಶಂಕಿತರು ಅಡ್ಮಿಟ್ ಆಗಿದ್ದಾರ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್​ ತಿಳಿಸಿದ್ದಾರೆ. ಹಾಗೇ, ರಾಜಸ್ಥಾನದಲ್ಲಿ ಇಂದು ಪತ್ತೆಯಾದ ಒಮಿಕ್ರಾನ್​ ಸೋಂಕಿತರ ಆರೋಗ್ಯವೂ ಸ್ಥಿರವಾಗಿದೆ ಎಂದು ಅಲ್ಲಿನ ಆರೋಗ್ಯ ಸಚಿವ ಪ್ರಸಾದಿ ಲಾಲ್​ ಮೀನಾ ಹೇಳಿದ್ದಾರೆ. ದೆಹಲಿಯಲ್ಲಿ ಮೊದಲ ಒಮಿಕ್ರಾನ್​ ಸೋಂಕಿತ 37ವರ್ಷದ ವ್ಯಕ್ತಿ. ಇವರೀಗ ಆಸ್ಪತ್ರೆಯಿಂದ ಡಿಸ್​ಚಾರ್ಜ್ ಆಗಿದ್ದಾರೆ. ಇವರು ರಾಂಚಿಯ ನಿವಾಸಿಯಾಗಿದ್ದು ಟಾಂಜಾನಿಯಾದಿಂದ ದೆಹಲಿಗೆ ದೋಹಾ ಮಾರ್ಗವಾಗಿ, ಡಿಸೆಂಬರ್ 2ರಂದು ಕತಾರ್​ ಏರ್​ವೇ ವಿಮಾನದಲ್ಲಿ ಬಂದಿದ್ದರು.

ಸದ್ಯ ದೇಶದಲ್ಲಿ ಮಹಾರಾಷ್ಟ್ರದಲ್ಲಿ 20, ರಾಜಸ್ಥಾನದಲ್ಲಿ 13, ಕರ್ನಾಟಕದಲ್ಲಿ 3, ಗುಜರಾತ್​ನಲ್ಲಿ 4, ದೆಹಲಿಯಲ್ಲಿ 6, ಚಂಡಿಗಢ್​​, ಕೇರಳ, ಆಂಧ್ರಪ್ರದೇಶಗಳಲ್ಲಿ ತಲಾ ಒಂದು ಒಮಿಕ್ರಾನ್​ ಪ್ರಕರಣಗಳು ಪತ್ತೆಯಾಗಿವೆ. ಈ ಎಲ್ಲ ಸೋಂಕಿತರನ್ನೂ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿ ಅಡ್ಮಿಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಒಮಿಕ್ರಾನ್​ ಮೊದಲು ಪತ್ತೆಯಾಗಿದ್ದು ಕರ್ನಾಟದಲ್ಲಿ ಆಗಿದ್ದರೂ, ಸದ್ಯ ಮಹಾರಾಷ್ಟ್ರದಲ್ಲಿ ಅತ್ಯಂತ ಹೆಚ್ಚು ಪ್ರಕರಣಗಳಿವೆ.  ಒಮಿಕ್ರಾನ್ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಪ್ರಸರಣಗೊಳ್ಳುತ್ತಿರುವ ತಳಿಯಾಗಿದ್ದು, ಸಹಜವಾಗಿಯೇ ಆತಂಕ ಮೂಡಿಸಿದೆ. ಈ ಮಧ್ಯೆ ಒಮಿಕ್ರಾನ್​ ನಿರ್ದಿಷ್ಟ ತಪಾಸಣೆಗಾಗಿ ದೆಹಲಿ ಐಐಟಿ ಒಂದು ವಿಧಾನವನ್ನೂ ಅಭಿವೃದ್ಧಿಪಡಿಸಿದೆ.

ಇದನ್ನೂ ಓದಿ: Ravindra Jadeja: ಭರ್ಜರಿ ಫಾರ್ಮ್​ನಲ್ಲಿರುವಾಗಲೇ ನಿವೃತ್ತಿ ನೀಡಲು ಮುಂದಾದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ

Published On - 12:50 pm, Tue, 14 December 21

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು