AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Omicron Update: ದೆಹಲಿಯಲ್ಲಿ 4, ರಾಜಸ್ಥಾನದಲ್ಲಿ 4 ಒಮಿಕ್ರಾನ್​ ಕೇಸ್​ ಪತ್ತೆ; ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 49ಕ್ಕೆ ಏರಿಕೆ

ಸದ್ಯ ದೇಶದಲ್ಲಿ ಮಹಾರಾಷ್ಟ್ರದಲ್ಲಿ 20, ರಾಜಸ್ಥಾನದಲ್ಲಿ 13, ಕರ್ನಾಟಕದಲ್ಲಿ 3, ಗುಜರಾತ್​ನಲ್ಲಿ 4, ದೆಹಲಿಯಲ್ಲಿ 6, ಚಂಡಿಗಢ್​​, ಕೇರಳ, ಆಂಧ್ರಪ್ರದೇಶಗಳಲ್ಲಿ ತಲಾ ಒಂದು ಒಮಿಕ್ರಾನ್​ ಪ್ರಕರಣಗಳು ಪತ್ತೆಯಾಗಿವೆ.

Omicron Update: ದೆಹಲಿಯಲ್ಲಿ 4, ರಾಜಸ್ಥಾನದಲ್ಲಿ 4 ಒಮಿಕ್ರಾನ್​ ಕೇಸ್​ ಪತ್ತೆ; ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 49ಕ್ಕೆ ಏರಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 14, 2021 | 12:52 PM

Share

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ 4 ಹೊಸ ಒಮಿಕ್ರಾನ್​ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ದೆಹಲಿಯಲ್ಲಿ ಒಮಿಕ್ರಾನ್​ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಹಾಗೇ, ರಾಜಸ್ಥಾನದಲ್ಲಿ ಕೂಡ 4 ಕೇಸ್​ ದಾಖಲಾಗಿದ್ದು, ಅಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 13ಕ್ಕೆ ಏರಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 49ಕ್ಕೆ ತಲುಪಿದೆ. ನಿನ್ನೆ ಗುಜರಾತ್​​ನಲ್ಲಿ ವ್ಯಕ್ತಿಯೊಬ್ಬರಲ್ಲಿ ಒಮಿಕ್ರಾನ್​ ದೃಢಪಟ್ಟಿತ್ತು. ಅವರು ದಕ್ಷಿಣ ಆಫ್ರಿಕಾದಿಂದ ಆಗಮಿಸಿದ್ದವರಾಗಿದ್ದು, ಕೊವಿಡ್​ 19 ಪಾಸಿಟಿವ್​ ಬಂದಿತ್ತು. ಮಾದರಿಯನ್ನು ಹೆಚ್ಚಿನ ತಪಾಸಣೆಗೆ ಒಳಪಡಿಸಿದಾಗ ಅವರಲ್ಲಿ ಒಮಿಕ್ರಾನ್​ ಇರುವುದು ದೃಢಪಟ್ಟಿತ್ತು. ಹಾಗೇ, ಮಹಾರಾಷ್ಟ್ರದಲ್ಲಿ ಕೂಡ ಇಬ್ಬರು ದುಬೈನಿಂದ ಆಗಮಿಸಿದವರಲ್ಲಿ ಒಮಿಕ್ರಾನ್​ ಇರುವುದು ಗೊತ್ತಾಗಿತ್ತು. ಒಟ್ಟಾರೆ ನಿನ್ನೆ ದೇಶದಲ್ಲಿ ಒಮಿಕ್ರಾನ್​ ಸೋಂಕಿತರ ಸಂಖ್ಯೆ 41ಕ್ಕೆ ತಲುಪಿತ್ತು. 

ಇಂದು ದೆಹಲಿಯಲ್ಲಿ ಪತ್ತೆಯಾದ ನಾಲ್ವರಲ್ಲಿ ಎಲ್ಲರಿಗೂ ಸೌಮ್ಯ ಲಕ್ಷಣವಿದೆ. ದೆಹಲಿಯಲ್ಲಿರುವ ಒಟ್ಟಾರೆ 6 ಸೋಂಕಿತರಲ್ಲಿ ಒಬ್ಬರು ಚೇತರಿಸಿಕೊಳ್ಳುತ್ತಿದ್ದು, ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದಾರೆ. ಹಾಗಿದ್ದಾಗ್ಯೂ ಸದ್ಯ ದೆಹಲಿಯ ಎಲ್​ಎನ್​ಜೆಪಿ ಆಸ್ಪತ್ರೆಯಲ್ಲಿ 35 ಕೊವಿಡ್​ ಸೋಂಕಿತರು ಮತ್ತು 3 ಒಮಿಕ್ರಾನ್​ ಶಂಕಿತರು ಅಡ್ಮಿಟ್ ಆಗಿದ್ದಾರ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್​ ತಿಳಿಸಿದ್ದಾರೆ. ಹಾಗೇ, ರಾಜಸ್ಥಾನದಲ್ಲಿ ಇಂದು ಪತ್ತೆಯಾದ ಒಮಿಕ್ರಾನ್​ ಸೋಂಕಿತರ ಆರೋಗ್ಯವೂ ಸ್ಥಿರವಾಗಿದೆ ಎಂದು ಅಲ್ಲಿನ ಆರೋಗ್ಯ ಸಚಿವ ಪ್ರಸಾದಿ ಲಾಲ್​ ಮೀನಾ ಹೇಳಿದ್ದಾರೆ. ದೆಹಲಿಯಲ್ಲಿ ಮೊದಲ ಒಮಿಕ್ರಾನ್​ ಸೋಂಕಿತ 37ವರ್ಷದ ವ್ಯಕ್ತಿ. ಇವರೀಗ ಆಸ್ಪತ್ರೆಯಿಂದ ಡಿಸ್​ಚಾರ್ಜ್ ಆಗಿದ್ದಾರೆ. ಇವರು ರಾಂಚಿಯ ನಿವಾಸಿಯಾಗಿದ್ದು ಟಾಂಜಾನಿಯಾದಿಂದ ದೆಹಲಿಗೆ ದೋಹಾ ಮಾರ್ಗವಾಗಿ, ಡಿಸೆಂಬರ್ 2ರಂದು ಕತಾರ್​ ಏರ್​ವೇ ವಿಮಾನದಲ್ಲಿ ಬಂದಿದ್ದರು.

ಸದ್ಯ ದೇಶದಲ್ಲಿ ಮಹಾರಾಷ್ಟ್ರದಲ್ಲಿ 20, ರಾಜಸ್ಥಾನದಲ್ಲಿ 13, ಕರ್ನಾಟಕದಲ್ಲಿ 3, ಗುಜರಾತ್​ನಲ್ಲಿ 4, ದೆಹಲಿಯಲ್ಲಿ 6, ಚಂಡಿಗಢ್​​, ಕೇರಳ, ಆಂಧ್ರಪ್ರದೇಶಗಳಲ್ಲಿ ತಲಾ ಒಂದು ಒಮಿಕ್ರಾನ್​ ಪ್ರಕರಣಗಳು ಪತ್ತೆಯಾಗಿವೆ. ಈ ಎಲ್ಲ ಸೋಂಕಿತರನ್ನೂ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿ ಅಡ್ಮಿಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಒಮಿಕ್ರಾನ್​ ಮೊದಲು ಪತ್ತೆಯಾಗಿದ್ದು ಕರ್ನಾಟದಲ್ಲಿ ಆಗಿದ್ದರೂ, ಸದ್ಯ ಮಹಾರಾಷ್ಟ್ರದಲ್ಲಿ ಅತ್ಯಂತ ಹೆಚ್ಚು ಪ್ರಕರಣಗಳಿವೆ.  ಒಮಿಕ್ರಾನ್ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಪ್ರಸರಣಗೊಳ್ಳುತ್ತಿರುವ ತಳಿಯಾಗಿದ್ದು, ಸಹಜವಾಗಿಯೇ ಆತಂಕ ಮೂಡಿಸಿದೆ. ಈ ಮಧ್ಯೆ ಒಮಿಕ್ರಾನ್​ ನಿರ್ದಿಷ್ಟ ತಪಾಸಣೆಗಾಗಿ ದೆಹಲಿ ಐಐಟಿ ಒಂದು ವಿಧಾನವನ್ನೂ ಅಭಿವೃದ್ಧಿಪಡಿಸಿದೆ.

ಇದನ್ನೂ ಓದಿ: Ravindra Jadeja: ಭರ್ಜರಿ ಫಾರ್ಮ್​ನಲ್ಲಿರುವಾಗಲೇ ನಿವೃತ್ತಿ ನೀಡಲು ಮುಂದಾದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ

Published On - 12:50 pm, Tue, 14 December 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!