AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಕಳಪೆ ಮಟ್ಟದಲ್ಲಿಯೇ ಇರುವ ವಾಯು ಗುಣಮಟ್ಟ, ಇಂದಿನಿಂದ ಸುಧಾರಿಸುವ ಸಾಧ್ಯತೆ; ಅಕ್ಕಪಕ್ಕದ ನಗರಗಳಲ್ಲಿ ಪರಿಸ್ಥಿತಿ ಹೇಗಿದೆ?

Delhi Air Pollution: ದೆಹಲಿಯಲ್ಲಿ ಸತತ ಎಂಟನೇ ದಿನವೂ ವಾಯು ಮಾಲಿನ್ಯ ಕಳಪೆ ಮಟ್ಟದಲ್ಲಿದೆ. ಅದರ ಅಕ್ಕಪಕ್ಕದ ನಗರಗಳಲ್ಲೂ ಪರಿಸ್ಥಿತಿ ಗಂಭೀರವಾಗಿದ್ದು, ಈ ಕುರಿತ ಮಾಹಿತಿ ಇಲ್ಲಿದೆ.

ದೆಹಲಿ: ಕಳಪೆ ಮಟ್ಟದಲ್ಲಿಯೇ ಇರುವ ವಾಯು ಗುಣಮಟ್ಟ, ಇಂದಿನಿಂದ ಸುಧಾರಿಸುವ ಸಾಧ್ಯತೆ; ಅಕ್ಕಪಕ್ಕದ ನಗರಗಳಲ್ಲಿ ಪರಿಸ್ಥಿತಿ ಹೇಗಿದೆ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 21, 2021 | 4:55 PM

Share

ದೆಹಲಿ: ದೇಶದ ರಾಜಧಾನಿ ಹಾಗೂ ಸುತ್ತಮುತ್ತದ ನಗರಗಳಲ್ಲಿ ಸತತ ಎಂಟನೇ ದಿನವೂ ವಾಯುಗುಣಮಟ್ಟ ಕಳಪೆ ಮಟ್ಟದಲ್ಲಿಯೇ ಇದೆ. ಗಾಳಿಯ ಗುಣಮಟ್ಟ ಮತ್ತು ಹವಾಮಾನ ಮುನ್ಸೂಚನೆ ಮತ್ತು ಸಂಶೋಧನೆಯ ವ್ಯವಸ್ಥೆ (SAFAR) ಇಂದಿನ (ಭಾನುವಾರ) ಸೂಚ್ಯಂಕವನ್ನು ಬಿಡುಗಡೆಗೊಳಿಸಿದ್ದು, 347 ಎಕ್ಯುಐ ದಾಖಲಾಗಿದೆ. ನಿನ್ನೆ (ಶನಿವಾರ) 355 (ಎಕ್ಯುಐ) ಇತ್ತು. ತಜ್ಞರ ಪ್ರಕಾರ, ಮಾಲಿನ್ಯದ ಮಟ್ಟ ಕಡಿಮೆಯಾಗುತ್ತಿದ್ದು, ಸೋಮವಾರದಿಂದ ವಾಯು ಗುಣಮಟ್ಟ ಸುಧಾರಣೆಯಾಗಲಿದೆ ಎನ್ನಲಾಗಿದೆ. ಇಂದಿನಿಂದ ವಾತಾವರಣ ಬದಲಾಗಲಿದೆ ಎಂದು ತಜ್ಞರು ಹೇಳಿದ್ದು, ಭಾರಿ ಗಾಳಿಯನ್ನು ನಿರೀಕ್ಷಿಸಲಾಗಿದೆ. ಇದರಿಂದ ಕ್ರಮೇಣ ವಾಯುಗುಣಮಟ್ಟ ಉತ್ತಮವಾಗುವ ಸಾಧ್ಯತೆ ಇದೆ. ಸೂಚ್ಯಂಕದ ಪ್ರಕಾರ ಎಕ್ಯುಐ 0 ಯಿಂದ 50ರ ಒಳಗಿದ್ದರೆ ಉತ್ತಮವೆಂದು, 51 ರಿಂದ 100ರೊಳಗಿದ್ದರೆ ಮಧ್ಯಮವೆಂದೂ, 301ರಿಂದ 400ರ ಒಳಗಿದ್ದರೆ ಕಳಪೆಯಿಂದೂ ಗುರುತಿಸಲಾಗುತ್ತದೆ. 400-500ರ ನಡುವಿದ್ದರೆ ಅದನ್ನು ಅತ್ಯಂತ ಗಂಭೀರ ಪರಿಸ್ಥಿತಿ ಎಂದು ಪರಿಗಣಿಸಲಾಗುತ್ತದೆ. ಕಳೆದ ಎರಡು ವಾರದಿಂದ ದೆಹಲಿಯ ವಾಯು ಗುಣಮಟ್ಟ ಕಳಪೆ ಹಾಗೂ ಅತ್ಯಂತ ಗಂಭೀರ ಸ್ಥಿತಿಯ ನಡುವೆಯೇ ಇದೆ.

ಈ ನಡುವೆ ದೆಹಲಿ ಸರ್ಕಾರ, ಮಾಲಿನ್ಯ ಮಟ್ಟವನ್ನು ನಿಯಂತ್ರಿಸಲು ಶಾಲೆಗಳನ್ನು ಮುಚ್ಚುವುದು, ಕಟ್ಟಡ ನಿರ್ಮಾಣ ಮತ್ತು ಕಸ ಸುಡುವುದನ್ನು ನಿಷೇಧಿಸುವುದು, ಜನರಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವುದು ಮೊದಲಾದ ಕ್ರಮಗಳನ್ನು ತೆಗೆದುಕೊಂಡಿದೆ. ಇತ್ತೀಚೆಗಷ್ಟೇ ಸಾರಿಗೆ ಇಲಾಖೆ ವಾಹನಗಳಿಗೆ ಯಾವ ಮಾದರಿಯ ಇಂಧನ ಬಳಸುತ್ತಿದೆ ಎಂಬುದನ್ನು ಗಮನಿಸಿ, ಕಲರ್ ಕೋಡಿಂಗ್ ಸ್ಟಿಕ್ಕರ್ ನೀಡುವ ನಿಯಮ ಜಾರಿಗೆ ತಂದಿದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿರುವಂತೆ ದೆಹಲಿಯ ಪಕ್ಕದ ನಗರಗಳಾದ, ಫರೀದಾಬಾದ್ (332), ಘಾಜಿಯಾಬಾದ್ (346), ಗ್ರೇಟರ್ ನೋಯ್ಡಾ (340), ಗುರುಗ್ರಾಮ್ (375) ಮತ್ತು ನೋಯ್ಡಾ (422)ಗಳೂ ಕೂಡ ಕಳಪೆ ವಾಯು ಗುಣಮಟ್ಟವನ್ನು ಹೊಂದಿವೆ.

ಇದನ್ನೂ ಓದಿ:

ದೆಹಲಿ ವಾಯುಮಾಲಿನ್ಯ; ಶಾಲಾ-ಕಾಲೇಜು ಮುಚ್ಚಲು, ಕಚೇರಿಗಳಿಗೆ ಶೇ.50ರಷ್ಟು ಉದ್ಯೋಗಿಗಳು ಬರಲು ಸೂಚನೆ

Viral Video: ರಾತ್ರಿ ಹೊತ್ತು ರಸ್ತೆಯಲ್ಲಿ ಕಾರು ನಿಲ್ಲಿಸಿದ ಮಹಿಳೆಯರು ಕದ್ದಿದ್ದೇನು ಗೊತ್ತಾ? ತಮಾಷೆಯ ವಿಡಿಯೊ ಫುಲ್​ ವೈರಲ್​

Published On - 9:57 am, Sun, 21 November 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ