AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಸತತ ಏಳನೇ ದಿನವೂ ವಾಯು ಗುಣಮಟ್ಟ ಕಳಪೆ; ವಾಹನಗಳಿಗೆ ಹೊಸ ನಿಯಮ ಜಾರಿಗೊಳಿಸಿದ ಸಾರಿಗೆ ಇಲಾಖೆ

Delhi Air Pollution: ದೆಹಲಿ ಹಾಗೂ ಅಕ್ಕಪಕ್ಕದ ನಗರಗಳಲ್ಲಿ ಸತತ ಏಳನೇ ದಿನವೂ ಕಳಪೆ ವಾಯು ಗುಣಮಟ್ಟ ದಾಖಲಾಗಿದೆ. ನಾಸಾ ಕೂಡ ಚಿತ್ರವನ್ನು ಹಂಚಿಕೊಂಡು ಆತಂಕ ವ್ಯಕ್ತಪಡಿಸಿದೆ.

ದೆಹಲಿಯಲ್ಲಿ ಸತತ ಏಳನೇ ದಿನವೂ ವಾಯು ಗುಣಮಟ್ಟ ಕಳಪೆ; ವಾಹನಗಳಿಗೆ ಹೊಸ ನಿಯಮ ಜಾರಿಗೊಳಿಸಿದ ಸಾರಿಗೆ ಇಲಾಖೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 20, 2021 | 2:39 PM

Share

ದೆಹಲಿಯಲ್ಲಿ ಸತತ ಏಳನೇ ದಿನವೂ ವಾಯು ಗುಣಮಟ್ಟ ಕಳಪೆ ಮಟ್ಟದಲ್ಲಿದೆ. ಶನಿವಾರ ಸೂಚ್ಯಂಕದಲ್ಲಿ ಒಟ್ಟಾರೆ ಎಕ್ಯುಐ 355 ದಾಖಲಾಗಿದೆ. ಗಾಳಿಯ ಗುಣಮಟ್ಟ ಮತ್ತು ಹವಾಮಾನ ಮುನ್ಸೂಚನೆ ಮತ್ತು ಸಂಶೋಧನೆಯ ವ್ಯವಸ್ಥೆ (SAFAR) ಶನಿವಾರ ಬೆಳಗ್ಗೆ ಮಾಲಿನ್ಯದ ಪ್ರಮಾಣ ಸೂಚಿಸುವ ಸೂಚ್ಯಂಕ ಬಿಡುಗಡೆಗೊಳಿಸಿದೆ. ಅದರ ಪ್ರಕಾರ, ಎಕ್ಯುಐ 0 ಯಿಂದ 50ರ ಒಳಗಿದ್ದರೆ ಉತ್ತಮವೆಂದು, 51 ರಿಂದ 100ರೊಳಗಿದ್ದರೆ ಮಧ್ಯಮವೆಂದೂ, 301ರಿಂದ 400ರ ಒಳಗಿದ್ದರೆ ಕಳಪೆಯಿಂದೂ ಗುರುತಿಸಲಾಗುತ್ತದೆ. 5400-500ರ ನಡುವಿದ್ದರೆ ಅದನ್ನು ಅತ್ಯಂತ ಗಂಭೀರ ಪರಿಸ್ಥಿತಿ ಎಂದು ಪರಿಗಣಿಸಲಾಗುತ್ತದೆ. ದೆಹಲಿಯಲ್ಲಿ ಮಾಲಿನ್ಯ ಅತ್ಯಂತ ಕಳಪೆ ಮಟ್ಟದಲ್ಲಿದೆ. ಮೂಲಗಳ ಪ್ರಕಾರ, ಭಾನುವಾರದಿಂದ ಭಾರಿ ಗಾಳಿಯನ್ನು ನಿರೀಕ್ಷಿಸಲಾಗಿದ್ದು, ಕ್ರಮೇಣ ವಾಯುಗುಣಮಟ್ಟ ಉತ್ತಮವಾಗುವ ಸಾಧ್ಯತೆ ಇದೆ.

ಮಾಲಿನ್ಯವನ್ನು ನಿಯಂತ್ರಿಸಲು ದೆಹಲಿ ಸರ್ಕಾರ ಹರಸಾಹಸ ಪಡುತ್ತಿದ್ದು, ವಿವಿಧ ನಿಯಮಗಳನ್ನು ಜಾರಿಗೆ ತರು ಮುಂದಾಗುತ್ತಿದೆ. ಶುಕ್ರವಾರ ಸಾರಿಗೆ ಇಲಾಖೆ ನೀಡಿರುವ ಸೂಚನೆಯಂತೆ, ಕ್ರೋಮಿಯಮ್ ಮೂಲದ ಹಾಲೋಗ್ರಾಮ್ ಸ್ಟಿಕ್ಕರ್​ಗಳು ದೆಹಲಿಯ ಎನ್​ಸಿಟಿ ಅಡಿಯಲ್ಲಿ ನೋಂದಾಯಿತವಾದ ಎಲ್ಲಾ ವಾಹನಗಳಿಗೆ ಕಡ್ಡಾಯ ಎಂದು ತಿಳಿಸಲಾಗಿದೆ. ವಾಹನಗಳು ಹೊರಸೂಸುವ ಮಾಲಿನ್ಯದ ಪ್ರಮಾಣವನ್ನು ಸೂಚಿಸಲು ಅಂತಹ ಕಲರ್- ಕೋಡ್ ಸ್ಟಿಕ್ಕರ್ ಹೊಂದುವಂತೆ ಮಾಲಿಕರಿಗೆ ತಿಳಿಸಲಾಗಿದೆ. ಹಳೆಯ ವಾಹನಗಳ ಮಾಲೀಕರು ತಮ್ಮ ವಾಹನಗಳ ವಿಂಡ್‌ಶೀಲ್ಡ್‌ನಲ್ಲಿ ಕ್ರೋಮಿಯಂ ಆಧಾರಿತ ಹೊಲೊಗ್ರಾಮ್ ಸ್ಟಿಕ್ಕರ್‌ಗಳನ್ನು ಅಳವಡಿಸಲು ಸಂಬಂಧಪಟ್ಟ ವಿತರಕರನ್ನು ಸಂಪರ್ಕಿಸಲು ಸೂಚಿಸಲಾಗಿದೆ ಎಂದು ಇಲಾಖೆ ಹೇಳಿದೆ. ಇದರಿಂದಾಗಿ ರಸ್ತೆಗಳಲ್ಲಿನ ತಪಾಸಣೆಯ ಸಮಯದಲ್ಲಿ ಯಾವ ಮಾದರಿಯ ವಾಹನ ಎಂದು ಗುರುತಿಸಲು ಸಹಾಯವಾಗಲಿದೆ ಎಂದು ಅದು ತಿಳಿಸಿದೆ.

ಆತಂಕದ ಸಂಗತಿಯೆಂದರೆ, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿರುವಂತೆ ದೆಹಲಿಯ ಪಕ್ಕದ ನಗರಗಳಾದ, ಫರೀದಾಬಾದ್ (354), ಘಾಜಿಯಾಬಾದ್ (372), ಗ್ರೇಟರ್ ನೋಯ್ಡಾ (388), ಗುರುಗ್ರಾಮ್ (345) ಮತ್ತು ನೋಯ್ಡಾ (385)ಗಳೂ ಕೂಡ ಕಳಪೆ ವಾಯು ಗುಣಮಟ್ಟವನ್ನು ಹೊಂದಿವೆ. ಗುರುವಾರ ನಾಸಾ ಚಿತ್ರವೊಂದನ್ನು ಬಿಡುಗಡೆ ಮಾಡಿ, ಆತಂಕ ವ್ಯಕ್ತಪಡಿಸಿದೆ. ಚಿತ್ರದಲ್ಲಿ ದೆಹಲಿ ಹಾಗೂ ಅದರ ಸುತ್ತಮುತ್ತಲಿನ ನಗರಗಳ ವಾಯು ಗುಣಮಟ್ಟವನ್ನು ಉಪಗ್ರಹ ಚಿತ್ರದ ಮುಖಾಂತರ ತೋರಿಸಲಾಗಿದೆ.

ನಾಸಾ ಹಂಚಿಕೊಂಡ ಚಿತ್ರ:

ದೆಹಲಿ ಸರ್ಕಾರ ಮಾಲಿನ್ಯ ನಿಯಂತ್ರಣಕ್ಕೆ ಬುಧವಾರ 10 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಶಾಲಾ- ಕಾಲೇಜುಗಳ ಸುತ್ತಮುತ್ತ ಅವಶ್ಯಕ ವಸ್ತುಗಳಲ್ಲದ ಸರಕನ್ನು ಹೊತ್ತೊಯ್ಯುವ ಟ್ರಕ್​ಗಳ ಸಂಚಾರ ನಿಷೇಧವೂ ಸೇರಿದಂತೆ ಹಲವು ನಿಯಮ ಜಾರಿಗೆ ತರಲಾಗಿದೆ. ಅದಾಗ್ಯೂ ದೆಹಲಿ ಹಾಗೂ ಸುತ್ತಮುತ್ತ ನಗರಗಳ ವಾಯು ಗುಣಮಟ್ಟದ ಸಮಸ್ಯೆ ಹಾಗೂ ಅದರ ಪರಿಣಾಮಗಳು ಅಧಿಕಾರಿಗಳು ಹಾಗೂ ಆರೋಗ್ಯ ತಜ್ಞರನ್ನು ಕಂಗೆಡಿಸಿದೆ.

ಇದನ್ನೂ ಓದಿ:

ದೆಹಲಿ ವಾಯುಮಾಲಿನ್ಯ; ಶಾಲಾ-ಕಾಲೇಜು ಮುಚ್ಚಲು, ಕಚೇರಿಗಳಿಗೆ ಶೇ.50ರಷ್ಟು ಉದ್ಯೋಗಿಗಳು ಬರಲು ಸೂಚನೆ

ಈ ಕೆಲಸ ಮೊದಲೇ ಮಾಡಿದ್ದರೆ 700ಕ್ಕೂ ಹೆಚ್ಚು ರೈತರ ಪ್ರಾಣ ಉಳಿಯುತ್ತಿತ್ತು: ಪ್ರಧಾನಿ ಮೋದಿಗೆ ಪತ್ರ ಬರೆದ ಬಿಜೆಪಿ ಸಂಸದ

Follow Us
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ