AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ದೆಹಲಿ ಚುನಾವಣೆ ಫಲಿತಾಂಶ; ಹ್ಯಾಟ್ರಿಕ್ ನಿರೀಕ್ಷೆಯಲ್ಲಿ ಆಪ್, 25 ವರ್ಷಗಳ ಬಳಿಕ ಅರಳುತ್ತಾ ಕಮಲ?

ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶಗಳು ಇಂದು ಪ್ರಕಟವಾಗಲಿವೆ. ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶಗಳನ್ನು ಇಂದು (ಫೆಬ್ರವರಿ 8) ಪ್ರಕಟಿಸಲಾಗುವುದು. ಆಮ್ ಆದ್ಮಿ ಪಕ್ಷ (ಎಎಪಿ) 2015ರಿಂದ ದೆಹಲಿಯಲ್ಲಿ ಸರ್ಕಾರವನ್ನು ನಡೆಸುತ್ತಿದೆ. ಹೀಗಾಗಿ, ಈ ಬಾರಿಯೂ ಸರ್ಕಾರ ರಚಿಸುವ ಮೂಲಕ ಹ್ಯಾಟ್ರಿಕ್ ಬಾರಿಸುವ ನಿರೀಕ್ಷೆಯಲ್ಲಿ ಆಮ್ ಆದ್ಮಿ ಪಕ್ಷವಿದೆ. ಆದರೆ, ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಸರ್ಕಾರ ರಚಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಭವಿಷ್ಯ ನುಡಿದಿವೆ.

ಇಂದು ದೆಹಲಿ ಚುನಾವಣೆ ಫಲಿತಾಂಶ; ಹ್ಯಾಟ್ರಿಕ್ ನಿರೀಕ್ಷೆಯಲ್ಲಿ ಆಪ್, 25 ವರ್ಷಗಳ ಬಳಿಕ ಅರಳುತ್ತಾ ಕಮಲ?
Election Results
Follow us
ಸುಷ್ಮಾ ಚಕ್ರೆ
|

Updated on:Feb 08, 2025 | 5:51 AM

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ಫೆಬ್ರವರಿ 5ರಂದು ಕೊನೆಗೊಂಡಿತು. ಮತ ಎಣಿಕೆ ಇಂದು (ಫೆಬ್ರವರಿ 8) ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದೆ. ದೆಹಲಿಯ ಎಲ್ಲಾ 70 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 5ರಂದು ಒಂದೇ ಹಂತದಲ್ಲಿ ಮತದಾನ ನಡೆಯಿತು. ಆಮ್ ಆದ್ಮಿ ಪಕ್ಷ (ಎಎಪಿ), ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ಪಕ್ಷಗಳು ದೆಹಲಿಯಲ್ಲಿ ಸ್ಪರ್ಧಿಸಿದ ಪ್ರಮುಖ 3 ಪಕ್ಷಗಳಾಗಿವೆ. ಈ ಬಾರಿಯ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಬಹುತೇಕ ಸಮೀಕ್ಷೆಗಳು ಬಿಜೆಪಿಗೆ ಬಹುಮತ ಸಿಗಲಿದೆ ಎಂದು ಭವಿಷ್ಯ ನುಡಿದಿವೆ. ಆದರೆ, ಆಮ್ ಆದ್ಮಿ ಪಕ್ಷ ಈ ಸಮೀಕ್ಷೆಗಳನ್ನು ನಿರಾಕರಿಸಿದ್ದು, ತಮ್ಮ ಪಕ್ಷವೇ ಅಧಿಕಾರಕ್ಕೇರಲಿದೆ ಎಂಬ ವಿಶ್ವಾಸದಲ್ಲಿದೆ.

25 ವರ್ಷಗಳ ನಂತರ ಬಿಜೆಪಿ ಮತ್ತೆ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿದ್ದು, ಇಂದು ಪ್ರಕಟವಾಗಲಿರುವ ಫಲಿತಾಂಶಗಳು ಆಡಳಿತಾರೂಢ ಎಎಪಿ ಆಡಳಿತ ವಿರೋಧಿ ಅಲೆಯನ್ನು ತಡೆಯಲು ಸಾಕಷ್ಟು ಕೆಲಸ ಮಾಡಿದೆಯೇ ಅಥವಾ ಬಿಜೆಪಿಯ ಸರ್ವಪಕ್ಷ ಪ್ರಚಾರ ಯಶಸ್ವಿಯಾಗಿದೆಯೇ ಎಂಬುದನ್ನು ತೋರಿಸುತ್ತದೆ.

ಬಿಜೆಪಿ ಈ ಬಾರಿ ದೆಹಲಿಯಲ್ಲಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮತ್ತು ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಿದೆ. ಭಾರತದ ಚುನಾವಣಾ ಆಯೋಗದ (ECI) ಮತದಾರರ ಮತದಾನದ ಅಪ್ಲಿಕೇಶನ್ ಪ್ರಕಾರ, ದೆಹಲಿಯಲ್ಲಿ ಶೇ. 60.54ರಷ್ಟು ಮತದಾರರು ತಮ್ಮ ಮತ ಚಲಾಯಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಹೀನಾಯ ಸೋಲಿನ ಭವಿಷ್ಯ ನುಡಿದ ಚುನಾವಣೋತ್ತರ ಸಮೀಕ್ಷೆಗಳು

ಮತದಾರರ ಪಟ್ಟಿಯ ಪ್ರಕಾರ, ದೆಹಲಿಯಲ್ಲಿ ಒಟ್ಟು ಮತದಾರರ ಸಂಖ್ಯೆ 1,55,37,634. ಇದರಲ್ಲಿ 12,776 ಸೇವಾ ಮತದಾರರು ಸೇರಿದ್ದಾರೆ. ಈ ಬಾರಿ ಒಟ್ಟು ಮತದಾನ ಕೇಂದ್ರಗಳ ಸಂಖ್ಯೆ 13,033. ಆಮ್ ಆದ್ಮಿ ಪಕ್ಷದ (ಎಎಪಿ) ಅರವಿಂದ್ ಕೇಜ್ರಿವಾಲ್ 2015ರಿಂದ 2020ರವರೆಗೆ ಹಾಗೂ ಮತ್ತೆ 2020ರಿಂದ 2024ರವರೆಗೆ ದೆಹಲಿ ಮುಖ್ಯಮಂತ್ರಿಯಾಗಿದ್ದರು. ಅತಿಶಿ ಸೆಪ್ಟೆಂಬರ್ 2024ರಿಂದ ದೆಹಲಿ ಮುಖ್ಯಮಂತ್ರಿಯಾಗಿದ್ದಾರೆ.

2020ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ 62 ಸ್ಥಾನಗಳೊಂದಿಗೆ ಸರ್ಕಾರವನ್ನು ಉಳಿಸಿಕೊಂಡಿದೆ. ಬಿಜೆಪಿ ಕೇವಲ ಐದು ಸ್ಥಾನಗಳನ್ನು ಗಳಿಸಿತು. ಕಾಂಗ್ರೆಸ್ ಮತ್ತೊಮ್ಮೆ ಯಾವುದೇ ಸ್ಥಾನವನ್ನು ಪಡೆಯಲು ವಿಫಲವಾಯಿತು. ಆಗ ಕೇಜ್ರಿವಾಲ್ ಮತ್ತೆ ದೆಹಲಿ ಮುಖ್ಯಮಂತ್ರಿಯಾದರು.

ಚುನಾವಣೋತ್ತರ ಸಮೀಕ್ಷೆಗಳು:

ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆಯು ಬಿಜೆಪಿ ದೆಹಲಿಯ 70 ಸ್ಥಾನಗಳಲ್ಲಿ 45ರಿಂದ 55 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಹೇಳಿದೆ. ಅರವಿಂದ್ ಕೇಜ್ರಿವಾಲ್ ಅವರ ಎಎಪಿ 15 ರಿಂದ 25 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿದೆ.

ಇದನ್ನೂ ಓದಿ: ಸಾಕ್ಷಿ ನೀಡಿ; ಕಳ್ಳಬೇಟೆ ಆರೋಪದ ಮೇಲೆ ಕೇಜ್ರಿವಾಲ್ ಅವರಿಗೆ ದೆಹಲಿಯ ಎಸಿಬಿ ನೋಟಿಸ್ ಜಾರಿ

ಸಿಎನ್‌ಎಕ್ಸ್ ಬಿಜೆಪಿ ಅಧಿಕಾರಕ್ಕೇರುವ ಸಾಧ್ಯತೆಗಳ ಬಗ್ಗೆ ಹೇಳಿದೆ. ಬಿಜೆಪಿ 49ರಿಂದ 61 ಸ್ಥಾನಗಳನ್ನು ಪಡೆಯಲಿದೆ ಎಂದಿದೆ. ಮ್ಯಾಟ್ರಿಜ್ ಸಮೀಕ್ಷೆ ಎಎಪಿ 32ರಿಂದ 37 ಸ್ಥಾನಗಳನ್ನು ಪಡೆಯುತ್ತದೆ ಎಂದು ಭವಿಷ್ಯ ನುಡಿದಿದೆ. ಬಿಜೆಪಿಗೆ 35-40 ಸ್ಥಾನ ಸಿಗಲಿದೆ ಎಂದು ಭವಿಷ್ಯ ನುಡಿದಿದೆ.

ಪಿ-ಮಾರ್ಕ್ ಸಮೀಕ್ಷೆಯ ಆಮ್ ಆದ್ಮಿ ಪಕ್ಷಕ್ಕೆ 39ರಿಂದ 44 ಸ್ಥಾನಗಳು ಸಿಗುವ ಬಗ್ಗೆ ಭವಿಷ್ಯ ನುಡಿದಿದೆ. ಇದೊಂದೇ ಸಮೀಕ್ಷೆ ಆಪ್ ಅಧಿಕಾರಕ್ಕೆ ಬರುವ ಸಾಧ್ಯತೆಯನ್ನು ಹೇಳಿದೆ. ಇದು ಬಿಜೆಪಿ 21ರಿಂದ 31 ಸ್ಥಾನಗಳನ್ನು ಪಡೆಯುತ್ತದೆ ಎಂದು ಭವಿಷ್ಯ ನುಡಿದಿದೆ.

ಪೋಲ್ ಡೈರಿ ಬಿಜೆಪಿಗೆ 42ರಿಂದ 50 ಸ್ಥಾನಗಳನ್ನು ನೀಡಿದರೆ, ಜೆವಿಸಿ 39ರಿಂದ 45 ಸ್ಥಾನಗಳನ್ನು ಘೋಷಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:51 am, Sat, 8 February 25

ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
VIDEO: ಮೈದಾನದಲ್ಲೇ ಹೊಡೆದಾಟ... ಬಾಂಗ್ಲಾ ಆಟಗಾರನಿಗೆ ಪಂಚ್
VIDEO: ಮೈದಾನದಲ್ಲೇ ಹೊಡೆದಾಟ... ಬಾಂಗ್ಲಾ ಆಟಗಾರನಿಗೆ ಪಂಚ್
ಗದಗ: ಶಾಲೆ ಆರಂಭದ ದಿನವೇ ಶಾಲಾ ವಾಹನ ಪಲ್ಟಿ, ತಪ್ಪಿದ ದುರಂತ
ಗದಗ: ಶಾಲೆ ಆರಂಭದ ದಿನವೇ ಶಾಲಾ ವಾಹನ ಪಲ್ಟಿ, ತಪ್ಪಿದ ದುರಂತ