ದೆಹಲಿ ಚುನಾವಣೆಗೂ ಮುನ್ನ ಆಪ್ಗೆ ದೊಡ್ಡ ಆಘಾತ; 8 ಶಾಸಕರು, ಕೌನ್ಸಿಲರ್ಗಳು ಬಿಜೆಪಿಗೆ ಸೇರ್ಪಡೆ
ದೆಹಲಿಯಲ್ಲಿ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಆದರೆ, ಚುನಾವಣೆಗೂ ಮುನ್ನವೇ ಆಮ್ ಆದ್ಮಿ ಪಕ್ಷಕ್ಕೆ ಬಿಗ್ ಶಾಕ್ ಉಂಟಾಗಿದೆ. ದೆಹಲಿ ವಿಧಾನಸಭಾ ಚುನಾವಣೆ ಎಎಪಿಗೆ ಭಾರಿ ಹೊಡೆತ ಬಿದ್ದಿದ್ದು, 8 ಶಾಸಕರು, ಕೌನ್ಸಿಲರ್ಗಳು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇಂದು ರಾಜೀನಾಮೆ ನೀಡುವಾಗ ಶಾಸಕರು ಭ್ರಷ್ಟಾಚಾರ ಆರೋಪ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸಿದ್ಧಾಂತದ ಬಗ್ಗೆ ನಂಬಿಕೆಯಿಲ್ಲ ಎಂಬ ಮುಂತಾದ ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಈ ಬಾರಿ 8 ಶಾಸಕರಿಗೆ ಆಪ್ ಚುನಾವಣಾ ಟಿಕೆಟ್ ನಿರಾಕರಿಸಿತ್ತು.

ನವದೆಹಲಿ: ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲು ಕೇವಲ 4 ದಿನಗಳು ಬಾಕಿ ಇವೆ. ಫೆಬ್ರವರಿ 5ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆದರೆ, ಚುನಾವಣೆಗೂ ಮುನ್ನ ಆಮ್ ಆದ್ಮಿ ಪಕ್ಷ ತೊರೆದಿರುವ ಆಪ್ನ ಎಂಟು ಶಾಸಕರು ಮತ್ತು ಪಕ್ಷದ ಕೆಲವು ಕೌನ್ಸಿಲರ್ಗಳು ಬಿಜೆಪಿಗೆ ಸೇರಿದ್ದಾರೆ. ಫೆಬ್ರವರಿ 5ರ ದೆಹಲಿ ವಿಧಾನಸಭಾ ಚುನಾವಣೆಗೆ ಕೇವಲ 4 ದಿನಗಳು ಬಾಕಿ ಇರುವಾಗ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದ್ದರಿಂದ ಆಮ್ ಆದ್ಮಿ ಪಕ್ಷ (ಎಎಪಿ) ದೊಡ್ಡ ಹಿನ್ನಡೆಯನ್ನು ಅನುಭವಿಸಿದೆ.
ಪಲಂನಿಂದ 2 ಬಾರಿ ಶಾಸಕರಾಗಿರುವ ಭಾವನಾ ಗೌರ್, ಕಸ್ತೂರ್ಬಾ ನಗರದಿಂದ 3 ಬಾರಿ ಶಾಸಕರಾಗಿರುವ ಮದನ್ ಲಾಲ್, 3 ಬಾರಿ ಶಾಸಕರಾಗಿರುವ ಗಿರೀಶ್ ಸೋನಿ, 2 ಬಾರಿ ಶಾಸಕರಾಗಿರುವ ರಾಜೇಶ್ ರಿಷಿ, ನರೇಶ್ ಯಾದವ್, ಪವನ್ ಶರ್ಮಾ, ಬಿಎಸ್ ಜೂನ್, ರೋಹಿತ್ ಮೆಹ್ರೋಲಿಯಾ ಮತ್ತು ಮಾಜಿ ಶಾಸಕ ಬಿಜೇಂದ್ರ ಗಾರ್ಗ್ ಇಂದು ಬಿಜೆಪಿ ಸೇರಿದ 8 ಶಾಸಕರು. ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ಆಗಿದ್ದ ಅಜಯ್ ರೈ ಕೂಡ ಬಿಜೆಪಿಗೆ ಸೇರಿದ್ದಾರೆ.
ಇದನ್ನೂ ಓದಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ ಡಿಕೆ ಶಿವಕುಮಾರ್
Prominent Personalities are joining BJP. @PandaJay @Virend_Sachdeva https://t.co/sl6uHjv4Dy
— BJP Delhi (@BJP4Delhi) February 1, 2025
ಶುಕ್ರವಾರ ರಾಜೀನಾಮೆ ನೀಡಿದ ಶಾಸಕರು, ಭ್ರಷ್ಟಾಚಾರ ಆರೋಪ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷದ ಸಿದ್ಧಾಂತದಿಂದ ವಿಮುಖತೆ ಮುಂತಾದ ಕಾರಣಗಳನ್ನು ನೀಡಿದ್ದಾರೆ. ಈ ಬಾರಿ 8 ಶಾಸಕರಿಗೂ ಎಎಪಿ ಚುನಾವಣಾ ಟಿಕೆಟ್ ನಿರಾಕರಿಸಿದೆ. ಹೀಗಾಗಿ, ಈ ಶಾಸಕರು ಅಸಮಾಧಾನಗೊಂಡು ಬಿಜೆಪಿ ಸೇರಿದ್ದಾರೆ.
ಎಎಪಿಗೆ ರಾಜೀನಾಮೆ ನೀಡಿದ ನಂತರ, ಅವರು ತಮ್ಮ ರಾಜೀನಾಮೆ ಪತ್ರಗಳನ್ನು ವಿಧಾನಸಭಾ ಸ್ಪೀಕರ್ಗೆ ಕಳುಹಿಸಿದ್ದಾರೆ ಮತ್ತು ಸದನದ ಸದಸ್ಯತ್ವವನ್ನು ತ್ಯಜಿಸಿದ್ದಾರೆ. 70 ಸದಸ್ಯರ ದೆಹಲಿ ವಿಧಾನಸಭೆಗೆ ಫೆಬ್ರವರಿ 5ರಂದು ಚುನಾವಣೆ ನಡೆಯಲಿದ್ದು, ಫೆಬ್ರವರಿ 8ರಂದು ಫಲಿತಾಂಶಗಳು ಪ್ರಕಟವಾಗಲಿವೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ