AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪ್​ ಶಾಸಕ ಅಮಾನತ್​ವುಲ್ಲಾ ಖಾನ್​ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

ವಕ್ಫ್ ಮಂಡಳಿಗೆ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಬಂಧನವಾಗಿರುವ ಆಪ್​ ಶಾಸಕ ಅಮಾನತ್​ವುಲ್ಲಾ ಖಾನ್​ ಜೈಲೇ ಗತಿ.

ಆಪ್​ ಶಾಸಕ ಅಮಾನತ್​ವುಲ್ಲಾ ಖಾನ್​ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್
Amanatullah Khan
TV9 Web
| Edited By: |

Updated on:Sep 26, 2022 | 3:32 PM

Share

ನವದೆಹಲಿ: ವಕ್ಫ್ ಮಂಡಳಿಗೆ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ದೆಹಲಿ ಆಪ್​ ಶಾಸಕ ಅಮಾನತ್​ವುಲ್ಲಾ ಖಾನ್​ಗೆ(Amanatullah Khan) ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದೆ.

14 ದಿನಗಳ ಕಾಲ ನ್ಯಾಯಾಂದ ಬಂಧನಕ್ಕೆ ನೀಡಿ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಇಂದು (ಸೆ.26) ಆದೇಶ ಹೊರಡಿಸಿದೆ. ಈ ಮೂಲಕ ಆಮ್ ಆದ್ಮಿ ಪಾರ್ಟಿ ನಾಯಕರ ಜೈಲು ಪರೇಡ್ ಮುಂದುವರಿದಿದೆ. ಸಚಿವ ಸತ್ಯಪಾಲ್ ಜೈನ್ ಜೈಲು ಸೇರಿದ ಬಳಿಕ ಇದೀಗ ದೆಹಲಿ ಆಪ್ ಶಾಸಕ ಅಮಾನತುಲ್ಹಾ ಖಾನ್ ಸರದಿ. 2 ವರ್ಷಗಳ ಹಿಂದಿನ ವಕ್ಫ್ ಬೋರ್ಡ್‌ನಲ್ಲಿ ನಡೆಸಿದ ಭ್ರಷ್ಟಾಚಾರ ಪ್ರಕರಣದಡಿ ಅಮಾನತುಲ್ಹಾ ಬಂಧನವಾಗಿದ್ದು, ಇದೀಗ ಜೈಲು ಸೇರಿದ್ದಾರೆ.

ಎಎಪಿ ಶಾಸಕ ಅಮಾನತುಲ್ಲಾ ಖಾನ್ (Amanatullah Khan) ಅವರನ್ನು ದೆಹಲಿ ಪೊಲೀಸ್ ಘಟಕದ ಭ್ರಷ್ಟಾಚಾರ ನಿಗ್ರಹ ದಳ (ACB)ಸೆಪ್ಟೆಂಬರ್ 16ರಂದು ಬಂಧಿಸಿತ್ತು. ವಕ್ಫ್ ಮಂಡಳಿಗೆ ಅಕ್ರಮ ನೇಮಕಾತಿ ಆರೋಪದ ಮೇಲೆ ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಮನೆ, ಕಚೇರಿ ಮೇಲೆ ದಾಳಿ ನಡೆಸಿತ್ತು. ಆ ವೇಳೆ ದೋಷಾರೋಪಣೆಯ ವಸ್ತುಗಳು ಮತ್ತು ಸಾಕ್ಷ್ಯಗಳನ್ನು ವಶಪಡಿಸಿಕೊಂಡಿತ್ತು.

ಅಲ್ಲದೇ ದೆಹಲಿ ಪೊಲೀಸರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನಡೆಸಿದ ದಾಳಿ ವೇಳೆ ಆಮ್ ಆದ್ಮಿ ಪಕ್ಷದ (AAP) ಶಾಸಕ ಅಮಾನತುಲ್ಲಾ ಖಾನ್ ಅವರ ಆಪ್ತ ಸಹಾಯಕ ಎಂದು ಹೇಳುವ ವ್ಯಕ್ತಿಯಿಂದ ಎರಡು ಶಸ್ತ್ರಾಸ್ತ್ರಗಳು ಮತ್ತು 24 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡಿತ್ತು.

ನಿಯಮಗಳು, ನಿಬಂಧನೆಗಳು ಮತ್ತು ಕಾನೂನಿನ ಉದ್ದೇಶಪೂರ್ವಕ ಮತ್ತು ಕ್ರಿಮಿನಲ್ ಉಲ್ಲಂಘನೆ, ಸ್ಥಾನದ ದುರುಪಯೋಗ ಮತ್ತು ಆರ್ಥಿಕ ನಷ್ಟವನ್ನು ಉಂಟು ಮಾಡುವುದು ಸೇರಿದಂತೆ ಅಪರಾಧಗಳಿಗಾಗಿ ಆಗಿನ ವಕ್ಫ್ ಬೋರ್ಡ್ ಸಿಇಒ ಮೆಹಬೂಬ್ ಆಲಂ ವಿರುದ್ಧವೂ ಪ್ರಾಸಿಕ್ಯೂಷನ್ ಮಂಜೂರಾತಿ ನೀಡಲಾಗಿದೆ ಎನ್ನಲಾಗಿದೆ.

ದಿಲ್ಲಿಯ ಅಬಕಾರಿ ನೀತಿಗೆ (2021-22) ಸಂಬಂಧಿಸಿದಂತೆ ಮನೀಶ್‌ ಸಿಸೋಡಿಯಾ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ) ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:19 pm, Mon, 26 September 22

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?