AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ಞೆ ತಪ್ಪಿದ ಪ್ರಯಾಣಿಕನಿಗಾಗಿ ಇಂದೋರ್​​ನಲ್ಲಿ ಲ್ಯಾಂಡ್ ಆದ ದೆಹಲಿ ವಿಮಾನ; ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ವ್ಯಕ್ತಿ ಸಾವು!

50 ವರ್ಷದ ಮನೋಜ್ ಕುಮಾರ್ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದರು. ಆಗ ಉಸಿರಾಟದ ತೊಂದರೆಯಾಘಿ ಪ್ರಜ್ಞೆ ತಪ್ಪಿದ ಅವರನ್ನು ಆಸ್ಪತ್ರೆಗೆ ಸೇರಿಸಲು ಇಂದೋರ್​ನಲ್ಲಿ ವಿಮಾನವನ್ನು ಇಳಿಸಲಾಯಿತು. ಆದರೂ ಅವರು ಬದುಕುಳಿಯಲಿಲ್ಲ.

ಪ್ರಜ್ಞೆ ತಪ್ಪಿದ ಪ್ರಯಾಣಿಕನಿಗಾಗಿ ಇಂದೋರ್​​ನಲ್ಲಿ ಲ್ಯಾಂಡ್ ಆದ ದೆಹಲಿ ವಿಮಾನ; ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ವ್ಯಕ್ತಿ ಸಾವು!
ವಿಸ್ತಾರ ವಿಮಾನ
TV9 Web
| Edited By: |

Updated on: Oct 22, 2021 | 3:56 PM

Share

ಇಂದೋರ್: ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಸ್ತಾರ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರಿನ ಪ್ರಯಾಣಿಕರೊಬ್ಬರಿಗೆ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿ, ಪ್ರಜ್ಞೆ ತಪ್ಪಿದರು. ಈ ಹಿನ್ನೆಲೆಯಲ್ಲಿ ಅವರಿಗೆ ತುರ್ತಾಗಿ ವೈದ್ಯಕೀಯ ಚಿಕಿತ್ಸೆ ಕೊಡಿಸಲು ವಿಮಾನವನ್ನು ಇಂದೋರ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಯಿತು. ಇಂದೋರ್ ಏರ್​ಪೋರ್ಟ್​ನಿಂದ ಆ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು.

ವಿಸ್ತಾರ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮನೋಜ್ ಕುಮಾರ್ ಅಗರ್​ವಾಲ್ ಎಂಬುವವರು ಈ ರೀತಿ ದುರಂತವಾಗಿ ಸಾವನ್ನಪ್ಪಿದ ವ್ಯಕ್ತಿ. 50 ವರ್ಷದ ಮನೋಜ್ ಕುಮಾರ್ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದರು. ನಿನ್ನೆ ರಾತ್ರಿ 9.30ಕ್ಕೆ ವಿಮಾನ ಇಂದೋರ್​ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಆಯಿತು. ಮಧ್ಯಪ್ರದೇಶದ ಇಂದೋರ್ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿ, ಆಸ್ಪತ್ರೆಗೆ ಸೇರಿಸಿದರೂ ಆ ಪ್ರಯಾಣಿಕ ಬದುಕುಳಿಯಲಿಲ್ಲ.

ಮನೋಜ್ ಕುಮಾರ್ ತಿವಾರ್ ಉದ್ಯಮಿಯಾಗಿದ್ದು, ಕೆಲಸದ ನಿಮಿತ್ತ ಬೆಂಗಳೂರಿಗೆ ಬಂದಿದ್ದ ಅವರು ವಾಪಾಸ್ ದೆಹಲಿಗೆ ಹೊರಟಿದ್ದರು. ಬೆಂಗಳೂರಿನಿಂದ ಪ್ರಯಾಣಿಸುತ್ತಿದ್ದ ಮನೋಜ್ ಕುಮಾರ್ ಅಗರವಾಲ್ ಇದ್ದಕ್ಕಿದ್ದಂತೆ ಉಸಿರಾಟದ ತೊಂದರೆಯಾಗುತ್ತಿರುವುದಾಗಿ ವಿಮಾನದ ಸಿಬ್ಬಂದಿಗೆ ಮಾಹಿತಿ ನೀಡಿದರು. ತಕ್ಷಣ ಅವರು ಪ್ರಜ್ಞೆ ತಪ್ಪಿದರು. ಹೀಗಾಗಿ, ಪೈಲಟ್ ವಿಮಾನವನ್ನು ಇಂದೋರ್​ನತ್ತ ತಿರುಗಿಸಿದರು. ತಕ್ಷಣ ಮನೋಜ್ ಕುಮಾರ್ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲೇ ಅವರು ಸಾವನ್ನಪ್ಪಿದ್ದರು ಇಂದೋರ್ ವಿಮಾನ ನಿಲ್ದಾಣದ ಉಸ್ತುವಾರಿ ನಿರ್ದೇಶಕ ಪ್ರಮೋದ್ ಕುಮಾರ್ ಶರ್ಮಾ ತಿಳಿಸಿದ್ದಾರೆ.

ಹೃದಯಾಘಾತದಿಂದ ಮನೋಜ್ ಕುಮಾರ್ ಸಾವನ್ನಪ್ಪಿರುವ ಸಾಧ್ಯತೆಯಿದೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ದೆಹಲಿ ಮೂಲದ ಮನೋಜ್ ಕುಮಾರ್ ಬೆಂಗಳೂರಿಗೆ ತೆರಳಿದ್ದರು. ಅಲ್ಲಿಂದ ದೆಹಲಿಗೆ ವಾಪಾಸ್ ತೆರಳುವಾಗ ಈ ಘಟನೆ ನಡೆದಿದೆ.

ಇದನ್ನೂ ಓದಿ: Viral News: ಕಿಡ್ನಿ ಸ್ಟೋನ್ ಬದಲು ಕಿಡ್ನಿಯನ್ನೇ ತೆಗೆದ ವೈದ್ಯ; 11 ಲಕ್ಷ ರೂ. ಪರಿಹಾರ ನೀಡಲು ಆಸ್ಪತ್ರೆಗೆ ಆದೇಶ

Shocking News: ಇಟ್ಟಿಗೆ ಎಸೆದು ಮನುಷ್ಯನ ಪ್ರಾಣ ತೆಗೆದ ಕೋತಿ!; ದೆಹಲಿಯಲ್ಲೊಂದು ಶಾಕಿಂಗ್ ಘಟನೆ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್