AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಕಾರು ಸ್ಫೋಟಕ್ಕೂ ಮುನ್ನ ಹಮಾಸ್ ಮಾದರಿಯಲ್ಲಿ ಡ್ರೋನ್ ದಾಳಿ ನಡೆಸುವುದು ಉಗ್ರರ ಪ್ಲ್ಯಾನ್ ಆಗಿತ್ತು: ಎನ್​ಐಎ

ದೆಹಲಿಯಲ್ಲಿ ಸಂಭವಿಸಿದ ಕಾರು ಸ್ಫೋಟಕ್ಕೂ ಮುನ್ನ ರಾಜಧಾನಿಯಲ್ಲಿ ಡ್ರೋನ್ ದಾಳಿ ನಡೆಸಲು ಉಗ್ರರು ಯೋಜನೆ ರೂಪಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ನವೆಂಬರ್ 10ರಂದು ಕಾರು ಸ್ಫೋಟಗೊಂಡು 15 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.ಇದು ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ನಡೆದ ದಾಳಿಯ ಸಮಯದಲ್ಲಿ ಹಮಾಸ್ ಮಾಡಿದ್ದ ದಾಳಿಗೆ ಹೋಲುತ್ತದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇಲ್ಲಿಯವರೆಗೆ ಎಂಟು ಜನರನ್ನು ಬಂಧಿಸಿದ್ದಾರೆ.

ದೆಹಲಿ ಕಾರು ಸ್ಫೋಟಕ್ಕೂ ಮುನ್ನ ಹಮಾಸ್ ಮಾದರಿಯಲ್ಲಿ ಡ್ರೋನ್ ದಾಳಿ ನಡೆಸುವುದು ಉಗ್ರರ ಪ್ಲ್ಯಾನ್ ಆಗಿತ್ತು: ಎನ್​ಐಎ
ದೆಹಲಿ ಸ್ಫೋಟImage Credit source: NDTV
ನಯನಾ ರಾಜೀವ್
|

Updated on: Nov 18, 2025 | 7:20 AM

Share

ನವದೆಹಲಿ, ನವೆಂಬರ್ 18: ದೆಹಲಿಯಲ್ಲಿ ಕಾರು ಸ್ಫೋಟಿಸುವ ಮುನ್ನ ಹಮಾಸ್ ಮಾದರಿಯಲ್ಲಿ ಡ್ರೋನ್ ದಾಳಿ ನಡೆಸುವುದು ಉಗ್ರರ ಪ್ಲ್ಯಾನ್ ಆಗಿತ್ತು ಎಂಬುದು ಎನ್​ಐಎ ತನಿಖೆಯಲ್ಲಿ ತಿಳಿದುಬಂದಿದೆ. ದೆಹಲಿಯ ಕೆಂಪು ಕೋಟೆ ಬಳಿ ನಡೆದ ಮಾರಕ ಸ್ಫೋಟ(Blast)ಕ್ಕೆ ಸಂಬಂಧಿಸಿದಂತೆ ಎನ್​ಐಎ ಮತ್ತೊಬ್ಬ ಸಂಚುಕೋರ ಜಸೀರ್ ಬಿಲಾಲ್ ವಾನಿ ಅಲಿಯಾಸ್ ಡ್ಯಾನಿಶ್​ನನ್ನು ಬಂಧಿಸಿದೆ.

ದೆಹಲಿ ಸ್ಫೋಟದ ಬಾಂಬರ್ ಡಾ. ಉಮರ್ ಉನ್ ನಬಿ ಜೊತೆ ಡ್ಯಾನಿಶ್ ಕೆಲಸ ಮಾಡಿದ್ದ. ನವೆಂಬರ್ 10 ರ ಭಯೋತ್ಪಾದಕ ದಾಳಿಯ ಮೊದಲು ಡ್ಯಾನಿಶ್ ಡ್ರೋನ್‌ಗಳನ್ನು ಮಾರ್ಪಡಿಸಿ ರಾಕೆಟ್‌ಗಳನ್ನು ನಿರ್ಮಿಸಲು ಪ್ರಯತ್ನಿಸಿದ್ದ. ಹಮಾಸ್ ಶೈಲಿಯ ಮಾರಕ ಭಯೋತ್ಪಾದಕ ದಾಳಿಗಳನ್ನು ನಡೆಸುವುದು ಯೋಜನೆಯಾಗಿತ್ತು.

2023ರ ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ಹಮಾಸ್ ನಡೆಸಿದ ದಾಳಿಯಂತೆಯೇ ಭಯೋತ್ಪಾದಕರು ದಾಳಿ ನಡೆಸಲು ಯತ್ನಿಸಿದ್ದರು. ಇಸ್ರೇಲ್ ಮೇಲೆ ದಾಳಿ ಮಾಡಲು ಹಮಾಸ್ ಅತ್ಯಂತ ಶಕ್ತಿಶಾಲಿ ಡ್ರೋನ್​ಗಳನ್ನು ಕೂಡ ಬಳಸಿತ್ತು.

ಅನಂತ್‌ನಾಗ್‌ನ ಖಾಜಿಗುಂಡ್ ನಿವಾಸಿ ಡ್ಯಾನಿಶ್, ಕ್ಯಾಮೆರಾಗಳು ಮತ್ತು ಭಾರವಾದ ಬಾಂಬ್‌ಗಳನ್ನು ತುಂಬಲು ಸಾಧ್ಯವಾಗುವಂತೆ ದೊಡ್ಡ ಬ್ಯಾಟರಿಗಳಿಂದ ಡ್ರೋನ್ ಅನ್ನು ಸಜ್ಜುಗೊಳಿಸಿದ್ದ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ಇಂಡಿಯಾ ವರದಿ ಮಾಡಿದೆ.

ಸಣ್ಣ, ಶಸ್ತ್ರಸಜ್ಜಿತ ಡ್ರೋನ್‌ಗಳನ್ನು ನಿರ್ಮಿಸುವಲ್ಲಿ ಡ್ಯಾನಿಶ್‌ಗೆ ಅನುಭವವಿದೆ. ಡ್ರೋನ್ ಅನ್ನು ಮಾರ್ಪಡಿಸುವ ಮೂಲಕ, ಅದನ್ನು ಹೆಚ್ಚು ಶಕ್ತಿಶಾಲಿ ಮತ್ತು ಮಾರಕವಾಗಿಸಲು ಆತ ಮುಂದಾಗಿದ್ದ. ಈ ಭಯೋತ್ಪಾದಕ ಘಟಕದ ಯೋಜನೆಯು ಹೆಚ್ಚಿನ ಸಂಖ್ಯೆಯ ಜನರನ್ನು ಕೊಲ್ಲುವುದಾಗಿತ್ತು ಎಂದು ಮೂಲಗಳು ತಿಳಿಸಿವೆ. ವೈಟ್-ಕಾಲರ್ ಭಯೋತ್ಪಾದಕ ಘಟಕದ ಭಯೋತ್ಪಾದಕರು ಅತ್ಯಂತ ಮಾರಕ ಬಾಂಬ್ ಹೊಂದಿದ ಡ್ರೋನ್ ಅನ್ನು ಜನದಟ್ಟಣೆಯ ಪ್ರದೇಶಕ್ಕೆ ಕಳುಹಿಸಲು ಯೋಜಿಸಿದ್ದರು.

ಮತ್ತಷ್ಟು ಓದಿ: ದೆಹಲಿ ಸ್ಫೋಟದ ಅಪರಾಧಿಗಳು ಪಾತಾಳದಲ್ಲೇ ಅಡಗಿದ್ದರೂ ಬಿಡುವುದಿಲ್ಲ; ಅಮಿತ್ ಶಾ ಎಚ್ಚರಿಕೆ

ಹಮಾಸ್‌ನಂತಹ ಗುಂಪುಗಳು ತಮ್ಮ ದಾಳಿಗಳನ್ನು ನಡೆಸಲು ಇದೇ ರೀತಿಯ ತಂತ್ರಗಳನ್ನು ಬಳಸಿಕೊಂಡಿವೆ ಎಂದು ಮೂಲಗಳು ಸೂಚಿಸುತ್ತವೆ. ಸಿರಿಯಾದಲ್ಲಿಯೂ ಇದೇ ರೀತಿಯ ದಾಳಿಗಳು ನಡೆದಿವೆ.

ಅಂತಹ ಪರಿಸ್ಥಿತಿಯಲ್ಲಿ, ಭಯೋತ್ಪಾದಕರು ಮಾರಕ ದಾಳಿಗಳನ್ನು ನಡೆಸಲು ಡ್ರೋನ್‌ಗಳನ್ನು ಬಳಸಬಹುದು ಎಂಬುದು ಸಾಮಾನ್ಯವಾಗಿದೆ, ಅಂತಹ ಬೆದರಿಕೆಗಳನ್ನು ಎದುರಿಸಲು, ವಿವಿಧ ದೇಶಗಳು ತಮ್ಮ ತಾಂತ್ರಿಕ ಸಾಮರ್ಥ್ಯಗಳ ಆಧಾರದ ಮೇಲೆ ವಿಭಿನ್ನ ಹಂತಗಳಲ್ಲಿ ತಮ್ಮನ್ನು ತಾವು ಸಿದ್ಧಪಡಿಸಿಕೊಂಡಿವೆ.

ಪಿಟಿಐ ವರದಿಯ ಪ್ರಕಾರ, ಡ್ಯಾನಿಶ್ ಡಾ. ಒಮರ್‌ಗೆ ದೇಶದಲ್ಲಿ ಮಾರಕ ಭಯೋತ್ಪಾದಕ ದಾಳಿಗಳನ್ನು ನಡೆಸಲು ತಾಂತ್ರಿಕ ನೆರವು ನೀಡಿದ್ದು, ಇದರಲ್ಲಿ ಡ್ರೋನ್ ಮಾರ್ಪಾಡುಗಳು ಮತ್ತು ರಾಕೆಟ್ ತಯಾರಿಕೆಯೂ ಸೇರಿದೆ. ಎನ್‌ಐಎ ತಂಡವು ಶ್ರೀನಗರದಲ್ಲಿ ಡ್ಯಾನಿಶ್‌ನನ್ನು ಬಂಧಿಸಿದೆ. ಡ್ಯಾನಿಶ್ ದೆಹಲಿ ಬಾಂಬ್ ದಾಳಿಯಲ್ಲಿ ಸಕ್ರಿಯ ಸಹ-ಸಂಚುಕೋರ. ಆತ ಭಯೋತ್ಪಾದಕ ಉಮರ್ ಉನ್ ನಬಿ ಜೊತೆ ನಿಕಟವಾಗಿ ಕೆಲಸ ಮಾಡಿದ್ದ. ನವೆಂಬರ್ 10ರಂದು ದೆಹಲಿಯಲ್ಲಿ ನಡೆದ ಸ್ಫೋಟದಲ್ಲಿ 15 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ