ಜನವರಿ 26ರಂದು ಕೆಂಪು ಕೋಟೆಯನ್ನು ಗುರಿಯಾಗಿಸಿ ದಾಳಿ ನಡೆಸುವುದಾಗಿತ್ತು ಉಗ್ರರ ಪ್ಲ್ಯಾನ್

ದೆಹಲಿಯಲ್ಲಿ ನವೆಂಬರ್ 10ರಂದು ನಿಗೂಢ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 10ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಎನ್​ಐಎ ಪ್ರಕರಣದ ತನಿಖೆ ನಡೆಸುತ್ತಿದೆ. ಹಾಗೆಯೇ ಇಬ್ಬರು ಶಂಕಿತರ ವಿಚಾರಣೆ ನಡೆಸುವಾಗ ಹಲವು ವಿಚಾರಗಳು ಬಹಿರಂಗಗೊಂಡಿವೆ. ಜನವರಿ 26ರಂದು ಗಣರಾಜ್ಯೋತ್ಸವದ ದಿನ ಕೆಂಉಕೋಟೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದು ಉಗ್ರರ ಯೋಜನೆಯಾಗಿತ್ತು ಎಂಬುದು ತಿಳಿದುಬಂದಿದೆ.

ಜನವರಿ 26ರಂದು ಕೆಂಪು ಕೋಟೆಯನ್ನು ಗುರಿಯಾಗಿಸಿ ದಾಳಿ ನಡೆಸುವುದಾಗಿತ್ತು ಉಗ್ರರ ಪ್ಲ್ಯಾನ್
ಕಾರು ಸ್ಫೋಟ ದೆಹಲಿ
Image Credit source: PTI

Updated on: Nov 12, 2025 | 10:47 AM

ನವದೆಹಲಿ, ನವೆಂಬರ್ 12: ದೆಹಲಿಯಲ್ಲಿ ನವೆಂಬರ್ 10ರಂದು ನಿಗೂಢ ಸ್ಫೋಟ(Blast) ಸಂಭವಿಸಿದ್ದು, ಘಟನೆಯಲ್ಲಿ 10ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಎನ್​ಐಎ ಪ್ರಕರಣದ ತನಿಖೆ ನಡೆಸುತ್ತಿದೆ. ಹಾಗೆಯೇ ಇಬ್ಬರು ಶಂಕಿತರ ವಿಚಾರಣೆ ನಡೆಸುವಾಗ ಹಲವು ವಿಚಾರಗಳು ಬಹಿರಂಗಗೊಂಡಿವೆ. ಜನವರಿ 26ರಂದು ಗಣರಾಜ್ಯೋತ್ಸವದ ದಿನ ಕೆಂಉಕೋಟೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದು ಉಗ್ರರ ಯೋಜನೆಯಾಗಿತ್ತು ಎಂಬುದು ತಿಳಿದುಬಂದಿದೆ.

ದೆಹಲಿ ಸ್ಫೋಟ ಪ್ರಕರಣದಲ್ಲಿ ಪ್ರಮುಖ ಆರೋಪಿ ಮುಜಮ್ಮಿಲ್ ತನಿಖಾಧಿಕಾರಿಗಳಿಗೆ ತಿಳಿಸಿರುವ ಪ್ರಕಾರ, ಆ ಪ್ರದೇಶದಲ್ಲಿ ನಡೆದ ಸ್ಫೋಟಕ್ಕೂ ಮೊದಲು ತಾನು ಮತ್ತು ಉಮರ್ ಕೆಂಪು ಕೋಟೆಯಿಂದ ಹಿಂದಿರುಗಿ ಬಂದಿದ್ದೆವು. ಮೊದಲು ಕೆಂಪುಕೋಟೆಯನ್ನು ಗುರಿಯಾಗಿಸಿ ದಾಳಿ ಮಾಡುವ ಯೋಜನೆಯಿತ್ತು ಹಾಗಾಗಿ ಹಲವು ಬಾರಿ ಕೆಂಪು ಕೋಟೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಓಡಾಡಿದ್ದೆವು ಎಂದು ತಿಳಿಸಿದ್ದಾನೆ.

ಈ ದೀಪಾವಳಿಯಂದು ಜನದಟ್ಟಣೆ ಇರುವ ಸ್ಥಳದ ಮೇಲೆ ದಾಳಿ ಮಾಡುವ ಯೋಜನೆಯಿತ್ತು ಮುಜಮ್ಮಿಲ್ ಪೊಲೀಸರಿಗೆ ತಿಳಿಸಿದ್ದಾನೆ, ಆದರೆ ಅದನ್ನು ಕಾರ್ಯಗತಗೊಳಿಸಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ. ಫರಿದಾಬಾದ್‌ನ ಅಲ್ ಫಲಾಹ್ ವಿಶ್ವವಿದ್ಯಾಲಯದಲ್ಲಿ ಮುಜಮ್ಮಿಲ್ ಅವರ ಸಹಾಯಕ ಮತ್ತು ಸಹೋದ್ಯೋಗಿ ಉಮರ್, ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿಯ ಟ್ರಾಫಿಕ್ ಸಿಗ್ನಲ್ ಬಳಿ ಕಾರು ಸ್ಫೋಟಗೊಂಡು ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ.

ಈಗ ಎನ್​ಐಎ ತಂಡವು ಇದರ ಹಿಂದೆ ಪಾಕಿಸ್ತಾನ ಅಥವಾ ಬೇರೆ ಯಾರಾದರೂ ಇದ್ದಾರೆಯೇ ಎಂದು ಕಂಡುಹಿಡಿಯಲು ಪ್ರತಿಯೊಂದು ಅಂಶವನ್ನು ಪರಿಶೀಲಿಸುತ್ತದೆ. ಏತನ್ಮಧ್ಯೆ, ಮಾಧ್ಯಮ ವರದಿಗಳ ಪ್ರಕಾರ, ಭಯೋತ್ಪಾದಕರ ಯೋಜನೆ ದೊಡ್ಡದಾಗಿತ್ತು. ದೀಪಾವಳಿ ಹಬ್ಬದಂದು ದೆಹಲಿಯನ್ನು ಭಯಗೊಳಿಸಲು ದುಷ್ಟ ಶಕ್ತಿಗಳು ಸಂಚು ರೂಪಿಸಿದ್ದವು.

ಮತ್ತಷ್ಟು ಓದಿ: ದೆಹಲಿಯ ಸ್ಫೋಟ ಆತ್ಮಾಹುತಿ ದಾಳಿಯಲ್ಲ, ಆಕಸ್ಮಿಕ; ತನಿಖೆ ವೇಳೆ ಮಹತ್ವದ ಸಂಗತಿ ಬಯಲು

ದೀಪಾವಳಿಯಂದು ದೆಹಲಿಯಲ್ಲಿ ಭಯ ಹುಟ್ಟಿಸುವ ಸಂಚು ವಿಫಲವಾದ ನಂತರ, ಭಯೋತ್ಪಾದಕರು ಜನವರಿ 26, ಅಂದರೆ ಗಣರಾಜ್ಯೋತ್ಸವವನ್ನು ಆರಿಸಿಕೊಂಡರು, ಆದರೆ ಅದಕ್ಕೂ ಮೊದಲು ಅಹಮದಾಬಾದ್, ಫರಿದಾಬಾದ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರು ತೆಗೆದುಕೊಂಡ ತ್ವರಿತ ಕ್ರಮವು ಈ ಆಟವನ್ನು ಹಾಳು ಮಾಡಿತು.

ಇದರ ನಂತರ, ಬಂಧನಕ್ಕೆ ಹೆದರಿ, ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ ಭಯೋತ್ಪಾದಕ ಡಾ. ಮೊಹಮ್ಮದ್ ಉಮರ್ ಈ ಯೋಜನೆಯನ್ನು ರೂಪಿಸಿ ಕೆಂಪು ಕೋಟೆಯ ಬಳಿ ಸ್ಫೋಟ ನಡೆಸಿದ್ದಾನೆ.ಅತ್ಯಂತ ಆಶ್ಚರ್ಯಕರ ವಿಷಯವೆಂದರೆ ಘಟನೆ ನಡೆದ 24 ಗಂಟೆಗಳ ನಂತರವೂ ಯಾವುದೇ ಭಯೋತ್ಪಾದಕ ಸಂಘಟನೆಯು ಇದರ ಹೊಣೆಯನ್ನು ಹೊತ್ತುಕೊಂಡಿಲ್ಲ. ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್​ನೊಂದಿಗೆ ಸಂಪರ್ಕ ಹೊಂದಿದೆ ಎಂದು ಹೇಳಲಾಗುತ್ತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ