AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indigo Flight: ಇಂಡಿಗೋ ವಿಮಾನದಲ್ಲಿ ವೃದ್ಧರೊಬ್ಬರ ಬಾಯಿಯಿಂದ ರಕ್ತಸ್ರಾವ, ತುರ್ತು ಭೂಸ್ಪರ್ಶ, ಕೊನೆಗೂ ಬದುಕುಳಿಯಲೇ ಇಲ್ಲ

ಮಧುರೈನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ(Indigo Flight)ದಲ್ಲಿ ಪ್ರಯಾಣಿಸುತ್ತಿದ್ದ 60 ವರ್ಷದ ಪ್ರಯಾಣಿಕರೊಬ್ಬರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ವಿಮಾನವನ್ನು ಇಂದೋರ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು.

Indigo Flight: ಇಂಡಿಗೋ ವಿಮಾನದಲ್ಲಿ ವೃದ್ಧರೊಬ್ಬರ ಬಾಯಿಯಿಂದ ರಕ್ತಸ್ರಾವ, ತುರ್ತು ಭೂಸ್ಪರ್ಶ, ಕೊನೆಗೂ ಬದುಕುಳಿಯಲೇ ಇಲ್ಲ
ಇಂಡಿಗೋ ವಿಮಾನ
TV9 Web
| Edited By: |

Updated on: Jan 15, 2023 | 11:26 AM

Share

ಮಧುರೈನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ(Indigo Flight)ದಲ್ಲಿ ಪ್ರಯಾಣಿಸುತ್ತಿದ್ದ 60 ವರ್ಷದ ಪ್ರಯಾಣಿಕರೊಬ್ಬರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ವಿಮಾನವನ್ನು ಇಂದೋರ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ವಿಮಾನವು ದೇವಿ ಅಹಲ್ಯಾಬಾಯಿ ಹೋಳ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ, ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಯಾಣಿಕನನ್ನು ವಿಮಾನ ಸಮೀಪವಿರುವ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಲ್ಲಿ ವೈದ್ಯರು ಆತ ಸಾವನ್ನಪ್ಪಿರುವುದನ್ನು ದೃಢಪಡಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಇಂಡಿಗೋ ಏರ್‌ಲೈನ್ಸ್ 6E-2088 ವಿಮಾನದಲ್ಲಿದ್ದ ಅತುಲ್ ಗುಪ್ತಾ (60) ಪ್ರಯಾಣಿಸುತ್ತಿದ್ದಾಗ ಅವರ ಬಾಯಿಯಿಂದ ರಕ್ತಸ್ರಾವವಾಗುತ್ತಿತ್ತು ಮತ್ತು ಪ್ರಯಾಣದ ಮಧ್ಯದಲ್ಲಿ ಅವರ ಸ್ಥಿತಿ ಹದಗೆಟ್ಟಿತು ಎಂದು ವಿಮಾನ ನಿಲ್ದಾಣ ಪ್ರಭಾರಿ ನಿರ್ದೇಶಕ ಪ್ರಬೋಧ್ ಚಂದ್ರ ಶರ್ಮಾ ಹೇಳಿದ್ದಾರೆ. ವೈದ್ಯರ ಪ್ರಕಾರ, ಅವರು ಈಗಾಗಲೇ ಹೃದ್ರೋಗ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿದ್ದರು ಎಂದು ಶರ್ಮಾ ಹೇಳಿದ್ದಾರೆ.

ವಿಮಾನವು ತನ್ನ ಸಂಜೆ 6:40 ಕ್ಕೆ ದೆಹಲಿಗೆ ಯಾನ ಮುಂದುವರಿಸಿತು. ಮೃತರು ನೋಯ್ಡಾ ನಿವಾಸಿ , ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ ಎಂದು ಏರೋಡ್ರೋಮ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಮಾಹಿತಿ ನೀಡಿದ್ದಾರೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!