AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi: ದೆಹಲಿಯಲ್ಲಿ ಕಟ್ಟಡ ಕುಸಿತ; ಇಬ್ಬರು ಮಕ್ಕಳ ಶವ ಪತ್ತೆ, ಹಲವರು ನಾಪತ್ತೆ

Delhi Building Collapse: ಈ ಕಟ್ಟಡದಲ್ಲಿ ಕಾಮಗಾರಿ ಕೆಲಸ ನಡೆಯುತ್ತಿತ್ತು ಎನ್ನಲಾಗಿದೆ. ಹೀಗಾಗಿ, ಕಟ್ಟಡದೊಳಗೆ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅವರು ಅವಶೇಷಗಳಡಿ ಸಿಲುಕಿದ್ದಾರೆ. ಕಟ್ಟಡದ ಕೆಳಗೆ ನಿಲ್ಲಿಸಿದ್ದ ಕಾರು ಕೂಡ ಕಟ್ಟಡದ ಅಡಿಯಲ್ಲಿ ಸಿಲುಕಿದೆ.

Delhi: ದೆಹಲಿಯಲ್ಲಿ ಕಟ್ಟಡ ಕುಸಿತ; ಇಬ್ಬರು ಮಕ್ಕಳ ಶವ ಪತ್ತೆ, ಹಲವರು ನಾಪತ್ತೆ
ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ
TV9 Web
| Edited By: |

Updated on: Sep 13, 2021 | 7:42 PM

Share

ನವದೆಹಲಿ: ನವದೆಹಲಿಯ ಸಬ್ಜಿ ಮಂಡಿ ಏರಿಯಾದಲ್ಲಿ 4 ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಮಕ್ಕಳು ಸೇರಿದಂತೆ ಹಲವು ಜನರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದರು. ಅವರಲ್ಲಿ ಇಬ್ಬರು ಮಕ್ಕಳ ಶವಗಳನ್ನು ಹೊರಗೆ ತೆಗೆಯಲಾಗಿದೆ. 7 ಅಗ್ನಿಶಾಮಕದಳದ ವಾಹನಗಳನ್ನು ರಕ್ಷಣಾ ಕಾರ್ಯಾಚರಣೆಗೆ ಬಳಸಲಾಗಿದೆ. ಅವಶೇಷಗಳಡಿ ಸಿಲುಕಿದ್ದ ವೃದ್ಧರೊಬ್ಬರನ್ನು ರಕ್ಷಿಸಲಾಗಿದ್ದು, ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆ 11.50ಕ್ಕೆ ದೆಹಲಿಯ ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಲಾಗಿದೆ. ಇನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಈ ಕಟ್ಟಡದಲ್ಲಿ ಕಾಮಗಾರಿ ಕೆಲಸ ನಡೆಯುತ್ತಿತ್ತು ಎನ್ನಲಾಗಿದೆ. ಹೀಗಾಗಿ, ಕಟ್ಟಡದೊಳಗೆ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅವರು ಅವಶೇಷಗಳಡಿ ಸಿಲುಕಿದ್ದಾರೆ. ಕಟ್ಟಡದ ಕೆಳಗೆ ನಿಲ್ಲಿಸಿದ್ದ ಕಾರು ಕೂಡ ಕಟ್ಟಡದ ಅಡಿಯಲ್ಲಿ ಸಿಲುಕಿದೆ.

ಪ್ರತ್ಯಕ್ಷದರ್ಶಿಯ ಪ್ರಕಾರ, ಇದ್ದಕ್ಕಿದ್ದಂತೆ ಕಟ್ಟಡ ಶೇಕ್ ಆಗಿದ್ದು, ಆಗ ಕರೆಂಟ್ ಕೂಡ ಹೋಯಿತು. ನಂತರ ಕಟ್ಟಡ ನೆಲಸಮವಾಯಿತು. ಕಟ್ಟಡದ ಬಳಿ ಹೋಗುತ್ತಿದ್ದ ಮಕ್ಕಳ ಮೇಲೆ ಕೂಡ ಕಟ್ಟಡದ ಭಾಗಗಳು ಸಿಲುಕಿವೆ. ಕಾಮಗಾರಿ ವೇಳೆ ಕಟ್ಟಡದಲ್ಲಿದ್ದವರು ಈ ವೇಳೆ ಹೊರಬರಲಾರದೆ ಒಳಗೆ ಸಿಲುಕಿದ್ದಾರೆ. ಅವರ ಮೇಲೆ ಕಟ್ಟಡದ ಭಾಗಗಳು ಬಿದ್ದಿವೆ.

ಸಬ್ಜಿ ಮಂಡಿ ಪ್ರದೇಶದಲ್ಲಿ ಕಟ್ಟಡ ಕುಸಿದಿರುವ ಘಟನೆ ಬಹಳ ಬೇಸರದ ಸಂಗತಿ. ರಕ್ಷಣಾ ಕಾರ್ಯಾಚರಣೆಗೆ ದೆಹಲಿ ಆಡಳಿತಾಧಿಕಾರಿಗಳು ಬಹಳ ಪ್ರಯತ್ನಿಸುತ್ತಿದ್ದಾರೆ. ನಾನೇ ಖುದ್ದಾಗಿ ಪರಿಸ್ಥಿತಿಯ ಬಗ್ಗೆ ಗಮನ ಹರಿಸುತ್ತಿದ್ದೇನೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಎನ್​ಡಿಆರ್​ಎಫ್​, ಎಂಸಿಡಿ, ಸ್ಥಳೀಯ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Delhi Rain: ದೆಹಲಿಯಲ್ಲಿ ವಿಪರೀತ ಮಳೆಗೆ ಜನ ತತ್ತರ; ಚರಂಡಿಯಲ್ಲಿ ಕೊಚ್ಚಿ ಹೋಗಿ ವ್ಯಕ್ತಿ ಸಾವು

Delhi Rain: 121 ವರ್ಷಗಳಲ್ಲೇ ಅತ್ಯಂತ ಭೀಕರ ಮಳೆ ಕಂಡ ದೆಹಲಿ, ಇಂದು ಕೂಡ ಮಳೆಯಾಗುವ ಸಾಧ್ಯತೆ

(Delhi Building collapses in Sabzi Mandi area two Children dead Rescue Operation Underway)

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ