AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಉದ್ಯಮಿ ಹತ್ಯೆ: ಯಾರನ್ನೋ ಕೊಲ್ಲಲು ಬಂದವರು ಮತ್ಯಾರನ್ನೋ ಕೊಂದ್ರು

ಬೆಳಗ್ಗೆ ವಾಕಿಂಗ್​ಗೆಂದು ತೆರಳಿದ್ದ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ಶನಿವಾರ ನಡೆದಿದೆ. ಆದರೆ ಆರೋಪಿಗಳು ಕೊಲ್ಲಲು ಬಂದಿದ್ದು ಯಾರನ್ನೋ ಹತ್ಯೆ ಮಾಡಿದ್ದು ಮತ್ಯಾರನ್ನೋ ಎಂದು ಉದ್ಯಮಿ ಸುನಿಲ್ ಜೈನ್ ಸುಮಿತ್ ಎನ್​ಡಿಟಿವಿಗೆ ತಿಳಿಸಿದ್ದಾರೆ.

ದೆಹಲಿ ಉದ್ಯಮಿ ಹತ್ಯೆ: ಯಾರನ್ನೋ ಕೊಲ್ಲಲು ಬಂದವರು ಮತ್ಯಾರನ್ನೋ ಕೊಂದ್ರು
ದೆಹಲಿ
ನಯನಾ ರಾಜೀವ್
|

Updated on: Dec 08, 2024 | 12:00 PM

Share

ಬೆಳಗ್ಗೆ ವಾಕಿಂಗ್​ಗೆಂದು ತೆರಳಿದ್ದ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ಶನಿವಾರ ನಡೆದಿದೆ. ಆದರೆ ಆರೋಪಿಗಳು ಕೊಲ್ಲಲು ಬಂದಿದ್ದು ಯಾರನ್ನೋ ಹತ್ಯೆ ಮಾಡಿದ್ದು ಮತ್ಯಾರನ್ನೋ ಎಂದು ಉದ್ಯಮಿ ಸುನಿಲ್ ಜೈನ್ ಸುಮಿತ್ ಎನ್​ಡಿಟಿವಿಗೆ ತಿಳಿಸಿದ್ದಾರೆ.

ದೆಹಲಿಯ ಶಾಹದಾರ ಜಿಲ್ಲೆಯ ಫರ್ಶ್ ಬಜಾರ್ ಪ್ರದೇಶದಲ್ಲಿ ಶನಿವಾರ ಇಬ್ಬರು ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು ಸುನಿಲ್ ಅವರ ಮೇಲೆ ಗುಂಡು ಹಾರಿಸಿದ್ದರು. ಮೊದಲು ಸುನಿಲ್ ಬಳಿ ನಿಮ್ಮ ಮೊಬೈಲ್ ಬಿದ್ದಿದೆ ಎಂದು ಹೇಳಿದರು, ಬಳಿಕ ಹರಿಯಾನ್ವಿ ಭಾಷೆಯಲ್ಲಿ ವಿರಾಟ್ ಎಂದರೆ ಯಾರು ಎಂದು ವಿಚಾರಿಸಿದ್ದರು. ಅದಕ್ಕೆ ಸುನಿಲ್ ಯಾರೆಂದು ಗೊತ್ತಿಲ್ಲ ಎಂದು ಹೇಳಿದ್ದರು. ಆಗ ದಾಳಿಕೋರರಲ್ಲಿ ಒಬ್ಬನು ಜೈನ್ ಅವರನ್ನು ತೋರಿಸುತ್ತಾ ಇವರೇ ಎಂದು ಕೂಗಿದ್ದಾನೆ. ದಾಳಿಕೋರ ಜೈನ್ ಮೇಲೆ ಏಳರಿಂದ ಎಂಟು ಬಾರಿ ಗುಂಡು ಹಾರಿಸಿದ್ದ.

ಪೊಲೀಸರು ವಿರಾಟ್​ಗಾಗಿ ಹುಡುಕಾಟ ನಡೆಸುತ್ತಿದ್ದಾರೆ, ಅವರ ಜೀವಕ್ಕೂ ಅಪಾಯವಿರಬಹುದು ಎಂದು ಪೊಲೀಸರು ಹೇಳಿದ್ದಾರೆ. ದೆಹಲಿಯಲ್ಲಿ ಆಕಾಶ್ ಶರ್ಮಾ ಮತ್ತು ರಿಷಭ್ ಎಂಬ ಇಬ್ಬರನ್ನು ಕೊಂದಿದ್ದಕ್ಕಾಗಿ ಅಪ್ರಾಪ್ತನನ್ನು ಕಳೆದ ತಿಂಗಳು ಬಂಧಿಸಲಾಗಿತ್ತು, ಅಪ್ರಾಪ್ತನ ತಂದೆಯ ಹೆಸರು ವಿರಾಟ್ ಎಂಬುದು ತಿಳಿದುಬಂದಿದೆ. ಶೂಟರ್‌ಗಳು ಹುಡುಕುತ್ತಿದ್ದ ವಿರಾಟ್ ಅವರೇ ಎಂಬುದು ಇನ್ನೂ ಖಚಿತವಾಗಿಲ್ಲ.

ಮತ್ತಷ್ಟು ಓದಿ: ವಾಕಿಂಗ್ ಮುಗಿಸಿ ಬರುತ್ತಿದ್ದ ವ್ಯಕ್ತಿಗೆ ದೆಹಲಿಯಲ್ಲಿ ಗುಂಡಿಕ್ಕಿ ಹತ್ಯೆ; ಬಿಜೆಪಿ ವಿರುದ್ಧ ಅರವಿಂದ್ ಕೇಜ್ರಿವಾಲ್ ಆಕ್ರೋಶ

ಉದ್ಯಮಿಯನ್ನು ಕೊಲ್ಲಲು ಶೂಟರ್ಸ್​ 9 ಎಂಎಂ ಮತ್ತು 7.61 ಎಂಎಂ ಪಿಸ್ತೂಲ್‌ಗಳನ್ನು ಬಳಸಿದ್ದಾರೆ ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ. ಮೃತರು ಕೃಷ್ಣನಗರದ ನಿವಾಸಿಯಾಗಿದ್ದು, ಪಾತ್ರೆ ಅಂಗಡಿ ಇಟ್ಟುಕೊಂಡಿದ್ದರು, ಯಾರ ಜತೆಯೂ ವೈಷಮ್ಯವಿರಲಿಲ್ಲ ಎಂಬುದು ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ