AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನೊಳಗಿನ ವಿಡಿಯೊ ಪ್ರಸಾರ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಲು ದೆಹಲಿ ನ್ಯಾಯಾಲಯದ ಮೊರೆ ಹೋದ ಸತ್ಯೇಂದ್ರ ಜೈನ್

ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್ ಅವರ ಮುಂದೆ ಜೈನ್ ಪರ ಹಾಜರಾದ ಹಿರಿಯ ವಕೀಲ ರಾಹುಲ್ ಮೆಹ್ರಾ, ನಿನ್ನೆ ಈ ವಿಷಯದ ವಿಚಾರಣೆಯ ಹೊರತಾಗಿಯೂ, ಇಂದು ಬೆಳಿಗ್ಗೆ ಮತ್ತೊಂದು ವಿಡಿಯೊ ಸೋರಿಕೆಯಾಗಿದೆ ಎಂದು ಹೇಳಿದರು

ಜೈಲಿನೊಳಗಿನ ವಿಡಿಯೊ ಪ್ರಸಾರ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಲು ದೆಹಲಿ ನ್ಯಾಯಾಲಯದ ಮೊರೆ ಹೋದ ಸತ್ಯೇಂದ್ರ ಜೈನ್
ಸತ್ಯೇಂದ್ರ ಜೈನ್
TV9 Web
| Edited By: |

Updated on: Nov 23, 2022 | 9:03 PM

Share

ಜೈಲಿನಲ್ಲಿರುವ ದೆಹಲಿ ಸಚಿವ ಸತ್ಯೇಂದ್ರ ಜೈನ್ (Satyendar Jain) ಅವರು ತಮ್ಮ ಜೈಲಿನ ಕೊಠಡಿಯೊಳಗಿನ ಯಾವುದೇ ದೃಶ್ಯಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ದೇಶನ ನೀಡುವಂತೆ ದೆಹಲಿಯ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್(Vikas Dhull) ಅವರ ಮುಂದೆ ಜೈನ್ ಪರ ಹಾಜರಾದ ಹಿರಿಯ ವಕೀಲ ರಾಹುಲ್ ಮೆಹ್ರಾ, ನಿನ್ನೆ ಈ ವಿಷಯದ ವಿಚಾರಣೆಯ ಹೊರತಾಗಿಯೂ, ಇಂದು ಬೆಳಿಗ್ಗೆ ಮತ್ತೊಂದು ವಿಡಿಯೊ ಸೋರಿಕೆಯಾಗಿದೆ ಎಂದು ಹೇಳಿದರು.ಅವರು ನಿರ್ದಿಷ್ಟ ದಿನ ಮತ್ತು ನಿರ್ದಿಷ್ಟ ಸಮಯದಲ್ಲಿ ಜೈಲಿನಲ್ಲಿ ಕೆಲವು ಪ್ರಮುಖ ವಿಷಯ ನಡೆಯುತ್ತಿದೆ ಎಂದು ತೋರಿಸಿದ್ದಾರೆ. ದಯವಿಟ್ಟು ಎಲ್ಲವನ್ನೂ ಪರೀಕ್ಷಿಸಿ. ನಾವು ಓಡಿಹೋಗುತ್ತಿಲ್ಲ. ಇಂದು ಒಂದು ವಿಡಿಯೊ ಬಿಡುಗಡೆಯಾಗಿದೆ ನಾಳೆ ಮತ್ತೊಂದು ಬಿಡುಗಡೆಯಾಗುತ್ತದೆ. ನಿಮ್ಮ ಆತ್ಮಸಾಕ್ಷಿಯು ಚುಚ್ಚುವುದಿಲ್ಲವೇ ಎಂದು ವಕೀಲರು ಕೇಳಿದ್ದಾರೆ. ಪ್ರತಿದಿನ ವಿಡಿಯೊ ಸೋರಿಕೆಯಾಗುತ್ತಿದೆ. ಇದು ಮಾಧ್ಯಮದ ವಿಚಾರಣೆ. ನಮ್ಮ ಎಲ್ಲಾ ಹಕ್ಕುಗಳನ್ನು ಗಾಳಿಗೆ ತೂರಲಾಗಿದೆ ಎಂದು ಹೇಳಿದ್ದಾರೆ.ಇದಕ್ಕೆ ಪ್ರತಿಕ್ರಿಯಿಸಿದ ವಿಶೇಷ ನ್ಯಾಯಾಧೀಶರು ಈ ವಿಷಯಕ್ಕೆ ಸಂಬಂಧಿಸಿದಂತೆ ಜೈನ್ ಪರವಾಗಿ ಯಾವುದೇ ಅರ್ಜಿ ಸಲ್ಲಿಸಿಲ್ಲ ಎಂದು ಸೂಚಿಸಿದರು. ಇದಾದ ನಂತರ ಮಾಧ್ಯಮವನ್ನು ನಿರ್ಬಂಧಿಸಲು ಮತ್ತು ವಿಡಿಯೊ ಸೋರಿಕೆ ಹೇಗೆ ನಡೆಯಿತು ಎಂಬುದರ ಕುರಿತು ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಲಾಯಿತು.  ಅರ್ಜಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ನ್ಯಾಯಾಲಯವು ನಾಳೆಯೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಜೈಲು ಅಧಿಕಾರಿಗಳಿಗೆ ಸೂಚಿಸಿದೆ.

ತಿಹಾರ್ ಜೈಲು ಅಧಿಕಾರಿಗಳು ತಮ್ಮ ಧಾರ್ಮಿಕ ನಂಬಿಕೆಯಂತೆ ತನಗೆ ಆಹಾರ ಪದಾರ್ಥಗಳನ್ನು ನೀಡುತ್ತಿಲ್ಲ ಮತ್ತು ವೈದ್ಯಕೀಯ ತಪಾಸಣೆಯನ್ನು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಜೈನ್ ಸಲ್ಲಿಸಿದ ಮನವಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿರುವಾಗ ಈ ವಾದಗಳು ನಡೆದವು. ಅವರ ಮನವಿಯ ಪ್ರಕಾರ, ಜೈನ್ ಹಣ್ಣುಗಳು, ತರಕಾರಿಗಳು ಮತ್ತು ಒಣ-ಹಣ್ಣುಗಳನ್ನು ಮಾತ್ರ ಸೇವಿಸುತ್ತಿದ್ದಾರೆ. ಇದು ಅವರಿಗೆ ವೈದ್ಯರು ಸೂಚಿಸಿದ ಆಹಾರಕ್ರಮವಾಗಿದೆ. ಆದರೆ, ಕಳೆದ 12 ದಿನಗಳಿಂದ ಜೈಲು ಅಧಿಕಾರಿಗಳು ಈ ವಸ್ತುಗಳನ್ನು ನೀಡುವುದನ್ನು ನಿಲ್ಲಿಸಿದ್ದಾರೆ ಎಂದು ಹೇಳಲಾಗಿದೆ.

ಜೈನ್ ಅವರು ವಿಚಾರಣಾಧೀನ ಕೈದಿಯಾಗಿದ್ದು, ಹಸಿವಿನಿಂದ ಬಳಲುವಂತೆ ಅಥವಾ ಅವರ ಧಾರ್ಮಿಕ ನಂಬಿಕೆಗಳನ್ನು ತ್ಯಜಿಸಲು ಮತ್ತು ಮೂಲಭೂತ ವೈದ್ಯಕೀಯ ಸ್ಥಿತಿಯನ್ನು ನಿರಾಕರಿಸಲು ಸಾಧ್ಯವಿಲ್ಲ ಎಂಬ ಅಂಶವನ್ನು ಮನವಿಯಲ್ಲಿ ಒತ್ತಿಹೇಳಲಾಗಿದೆ. ಅವರ ತೂಕ 103 ಇತ್ತು ಮತ್ತು ಈಗ ಅದು 75 ಆಗಿದೆ. ಸ್ವತಂತ್ರ ವ್ಯಕ್ತಿ ಜೈಲಿಗೆ ಹೋಗಿ ನೋಡಲಿ ಎಂದು ಮೆಹ್ರಾ ಇಂದು ಜೈನ್ ಅವರ ಆಹಾರ ಪದಾರ್ಥಗಳನ್ನು ಸರಬರಾಜು ಮಾಡದ ಪರಿಣಾಮವಾಗಿ ತೂಕ ಇಳಿದಿದೆ ಎಂದು ಉಲ್ಲೇಖಿಸುವಾಗ ಹೇಳಿದರು.

ಜೈಲು ಅಧಿಕಾರಿಗಳು ವಿವರವಾದ ಪ್ರತಿಕ್ರಿಯೆಯನ್ನು ಸಲ್ಲಿಸಿದ ನಂತರ ಈ ಸಂಬಂಧ ನಾಳೆ ವಿಚಾರಣೆ ಮುಂದುವರಿಯಲಿದೆ. ನಿನ್ನೆ, ಮೆಹ್ರಾ ಅವರು ನ್ಯಾಯಯುತ ವಿಚಾರಣೆಯನ್ನು ನೀಡುವಂತೆ ನ್ಯಾಯಾಲಯವನ್ನು ಒತ್ತಾಯಿಸಿದರು, ಆದರೆ ಜಾರಿ ನಿರ್ದೇಶನಾಲಯ (ಇಡಿ) ಜೈನ್ ಅವರ ಜೈಲಿನ ದೃಶ್ಯಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದೆ ಎಂದು ಆರೋಪಿಸಿದರು. ಇಡಿ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ನವೆಂಬರ್ 28 ರಂದು ನಡೆಸಲು ಕೋರ್ಟ್ ಒಪ್ಪಿಕೊಂಡಿದೆ.

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?