AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಸ್ಫೋಟ ಪ್ರಕರಣ; ಶ್ರೀನಗರದಲ್ಲಿ ಮತ್ತೋರ್ವ ಆರೋಪಿಯ ಬಂಧನ

ಡ್ರೋನ್‌ಗಳನ್ನು ಮಾರ್ಪಡಿಸುವುದು, ರಾಕೆಟ್ ತಯಾರಿಸುವಲ್ಲಿ ಭಾಗಿಯಾಗಿದ್ದ ದೆಹಲಿಯ ಕಾರ್ ಬಾಂಬರ್‌ನ ಮತ್ತೊಬ್ಬ ಸಹಾಯಕನನ್ನು NIA ಅಧಿಕಾರಿಗಳು ಇಂದು ಬಂಧಿಸಿದ್ದಾರೆ. ಆರೋಪಿಯನ್ನು ಜಾಸಿರ್ ಬಿಲಾಲ್ ವಾನಿ ಅಲಿಯಾಸ್ ಡ್ಯಾನಿಶ್ ಎಂದು ಗುರುತಿಸಲಾಗಿದ್ದು, ಆತ್ಮಹತ್ಯಾ ಬಾಂಬರ್ ಡಾ. ಉಮರ್ ಉನ್ ನಬಿ ಜೊತೆ ನಿಕಟವಾಗಿ ಕೆಲಸ ಮಾಡಿದ್ದ. ಆತನಿಗೆ ಬಾಂಬ್ ತಯಾರಿಕೆಯಲ್ಲಿ ತಾಂತ್ರಿಕ ಸಹಾಯವನ್ನು ಕೂಡ ನೀಡಿದ್ದ.

ದೆಹಲಿ ಸ್ಫೋಟ ಪ್ರಕರಣ; ಶ್ರೀನಗರದಲ್ಲಿ ಮತ್ತೋರ್ವ ಆರೋಪಿಯ ಬಂಧನ
Nia Officers
ಸುಷ್ಮಾ ಚಕ್ರೆ
|

Updated on: Nov 17, 2025 | 8:34 PM

Share

ನವದೆಹಲಿ, ನವೆಂಬರ್ 17: ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ 15 ಜೀವಗಳನ್ನು ಬಲಿ ತೆಗೆದುಕೊಂಡ ಮತ್ತು ಡಜನ್​ಗಟ್ಟಲೆ ಜನರನ್ನು ಗಾಯಗೊಳಿಸಿದ ಸ್ಫೋಟಕ್ಕೆ (Delhi Car Blast) ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ. ಆರೋಪಿಯನ್ನು ಜಾಸಿರ್ ಬಿಲಾಲ್ ವಾನಿ ಅಲಿಯಾಸ್ ಡ್ಯಾನಿಶ್ ಎಂದು ಗುರುತಿಸಲಾಗಿದ್ದು, ಆತ್ಮಹತ್ಯಾ ಬಾಂಬರ್ ಡಾ. ಉಮರ್ ಉನ್ ನಬಿ ಜೊತೆ ನಿಕಟವಾಗಿ ಕೆಲಸ ಮಾಡಿದ್ದ. ಆತನಿಗೆ ಇವನೇ ತಾಂತ್ರಿಕ ಸಹಾಯವನ್ನು ಕೂಡ ನೀಡಿದ್ದ ಎಂದು ಆರೋಪಿಸಲಾಗಿದೆ.

ಅನಂತ್‌ನಾಗ್ ಜಿಲ್ಲೆಯ ಖಾಜಿಗುಂಡ್ ನಿವಾಸಿಯಾಗಿರುವ ಜಾಸಿರ್ ವಾನಿ, ದೆಹಲಿಯ ದಾಳಿಯ ಹಿಂದಿನ ಸಕ್ರಿಯ ಸಹ-ಸಂಚುಗಾರನಾಗಿದ್ದ. ರಾಷ್ಟ್ರ ರಾಜಧಾನಿಯಲ್ಲಿ ಸ್ಫೋಟಕ್ಕೆ ಮುಂಚಿತವಾಗಿ ಡ್ರೋನ್‌ಗಳನ್ನು ಮಾರ್ಪಡಿಸಿ ರಾಕೆಟ್‌ಗಳನ್ನು ತಯಾರಿಸಲು ಪ್ರಯತ್ನಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆತನನ್ನು ಈಗ ದೆಹಲಿಗೆ ಕರೆತರಲಾಗಿದೆ. ಅಲ್ಲಿ ಆತನನ್ನು NIA ಪ್ರಧಾನ ಕಚೇರಿಯಲ್ಲಿ ವಿಚಾರಣೆ ನಡೆಸಲಾಗುವುದು.

ಇದನ್ನೂ ಓದಿ: ದೆಹಲಿ ಬಾಂಬ್ ಸ್ಫೋಟ ಪ್ರಕರಣ: ಆತ್ಮಹತ್ಯಾ ಬಾಂಬರ್​ಗೆ ನೆರವಾಗಿದ್ದ ಅಮೀರ್ ರಷೀದ್ ಬಂಧನ

ಬಾಂಬ್ ಸ್ಫೋಟದ ಹಿಂದಿನ ಪಿತೂರಿಯನ್ನು ಬಯಲು ಮಾಡಲು ವಿವಿಧ ಕೋನಗಳನ್ನು ಅನ್ವೇಷಿಸುವುದನ್ನು ಮುಂದುವರೆಸಿರುವುದಾಗಿ ತನಿಖಾ ಸಂಸ್ಥೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ. “ಭಯೋತ್ಪಾದನಾ ನಿಗ್ರಹ ಸಂಸ್ಥೆಯ ಹಲವಾರು ತಂಡಗಳು ಹಲವು ಸುಳಿವುಗಳನ್ನು ಹುಡುಕುತ್ತಿವೆ ಮತ್ತು ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬ ವ್ಯಕ್ತಿಯನ್ನು ಗುರುತಿಸಲು ರಾಜ್ಯಗಳಾದ್ಯಂತ ಶೋಧ ನಡೆಸುತ್ತಿವೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ