Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo : ರೈತರ ಟ್ರ್ಯಾಕ್ಟರ್ ಗುಡುಗಿಗೆ ದೆಹಲಿ ಗಡಿ ಗಡಗಡ

ದೆಹಲಿಯ ಗಡಿಭಾಗಗಳಲ್ಲಿ ಟ್ರ್ಯಾಕ್ಟರ್​ಗಳ ಸದ್ದು..ಸುಮಾರು 3500ಕ್ಕೂ ಹೆಚ್ಚು ಟ್ರ್ಯಾಕ್ಟರ್​ಗಳಲ್ಲಿ ಪಂಜಾಬ್ ರೈತರು ರಾಜಧಾನಿಯ ಗಡಿಗಳಲ್ಲಿ ಮೆರವಣಿಗೆ ನಡೆಸುತ್ತಿದ್ದಾರೆ.

Delhi Chalo : ರೈತರ ಟ್ರ್ಯಾಕ್ಟರ್ ಗುಡುಗಿಗೆ ದೆಹಲಿ ಗಡಿ ಗಡಗಡ
ಬುರಾರಿ ಮೈದಾನದಿಂದ ಹೊರಟ ಟ್ರ್ಯಾಕ್ಟರ್ ಮೆರವಣಿಗೆ
Follow us
guruganesh bhat
| Updated By: ಸಾಧು ಶ್ರೀನಾಥ್​

Updated on: Jan 07, 2021 | 2:48 PM

ದೆಹಲಿ: ಸಿಂಘು, ಟಿಕ್ರಿ ಮತ್ತು ಘಾಜಿಪುರ ಗಡಿ ಭಾಗಗಳಿಂದ ಹೊರಟಿರುವ ಪಂಜಾಬ್ ರೈತರ 3,500ಕ್ಕೂ ಹೆಚ್ಚು ಟ್ರ್ಯಾಕ್ಟರ್​ಗಳ ಮೆರವಣಿಗೆಯ ಮುಂದಾಳತ್ವವನ್ನು ಭಾರತೀಯ ಕಿಸಾನ್ ಯೂನಿಯನ್​ ಮುಖ್ಯಸ್ಥ ರಾಕೇಶ್ ಟಿಕಾಯತ್ ವಹಿಸಿದ್ದಾರೆ. ಸುರಕ್ಷತೆಯ ದೃಷ್ಟಿಯಿಂದ ಬೃಹತ್ ಪ್ರಮಾಣದಲ್ಲಿ ಪೊಲೀಸರನ್ನು ಸಹ ಹೆದ್ದಾರಿ ಮತ್ತು ಗಡಿ ಭಾಗಗಳಲ್ಲಿ ನಿಯೋಜಿಸಲಾಗಿದೆ.

ತಾವು ವಾಸ್ತವ್ಯ ಹೂಡಿದ್ದ ಗಡಿ ಪ್ರದೇಶಗಳಿಂದ ಕುಂಡ್ಲಿ-ಮನೇಸರ್-ಪಲ್ವಾಲ್ ಹೆದ್ದಾರಿ ತುಂಬ ರೈತರ ಟ್ರ್ಯಾಕ್ಟರ್​ಗಳ ಸದ್ದಿಗೆ ದೆಹಲಿ ಸಾಕ್ಷಿಯಾಗುತ್ತಿದೆ. ಟಿಕ್ರಿ, ಘಾಜಿಪುರ್, ಸಿಂಘು ಗಡಿ ಭಾಗಗಳಿಂದ ದೆಹಲಿಯ ಹೆದ್ದಾರಿಗುಂಟ ರೈತರ ಟ್ರ್ಯಾಕ್ಟರ್​ಗಳು ಹೊರಟಿವೆ.

ಇದು ಗಣರಾಜ್ಯೋತ್ಸವದಂದು ನಡೆಯಲಿರುವ ಟ್ರ್ಯಾಕ್ಟರ್ ಪರೇಡ್​ನ ತಾಲೀಮು ಎಂದು ಭಾವಿಸಬಹುದು. ಹರಿಯಾಣ- ಪಂಜಾಬ್​ನಿಂದ ಜನವರಿ 26ರಂದು ನಡೆಯಲಿರುವ ಮೆರವಣಿಗೆಯಲ್ಲಿ ಇನ್ನಷ್ಟು ಹೆಚ್ಚಿನ ಟ್ರ್ಯಾಕ್ಟರ್​ಗಳು ಭಾಗವಹಿಸಲಿವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾದ ನಾಯಕ ಅಭಿಮನ್ಯು ಕೋಹರ್ ತಿಳಿಸಿದ್ದಾರೆ.

ಟ್ರ್ಯಾಕ್ಟರ್​ ಪೆರೇಡ್​ಗೆ​ ಹರಿಯಾಣ ಯುವತಿಯರ ಸಿದ್ಧತೆ; ಗಣರಾಜ್ಯೋತ್ಸವದಂದು ಇವರೂ ದೆಹಲಿಗೆ ಧಾವಿಸಲಿದ್ದಾರೆ

VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ