AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo : ರೈತರ ಟ್ರ್ಯಾಕ್ಟರ್ ಗುಡುಗಿಗೆ ದೆಹಲಿ ಗಡಿ ಗಡಗಡ

ದೆಹಲಿಯ ಗಡಿಭಾಗಗಳಲ್ಲಿ ಟ್ರ್ಯಾಕ್ಟರ್​ಗಳ ಸದ್ದು..ಸುಮಾರು 3500ಕ್ಕೂ ಹೆಚ್ಚು ಟ್ರ್ಯಾಕ್ಟರ್​ಗಳಲ್ಲಿ ಪಂಜಾಬ್ ರೈತರು ರಾಜಧಾನಿಯ ಗಡಿಗಳಲ್ಲಿ ಮೆರವಣಿಗೆ ನಡೆಸುತ್ತಿದ್ದಾರೆ.

Delhi Chalo : ರೈತರ ಟ್ರ್ಯಾಕ್ಟರ್ ಗುಡುಗಿಗೆ ದೆಹಲಿ ಗಡಿ ಗಡಗಡ
ಬುರಾರಿ ಮೈದಾನದಿಂದ ಹೊರಟ ಟ್ರ್ಯಾಕ್ಟರ್ ಮೆರವಣಿಗೆ
guruganesh bhat
| Edited By: ಸಾಧು ಶ್ರೀನಾಥ್​|

Updated on: Jan 07, 2021 | 2:48 PM

Share

ದೆಹಲಿ: ಸಿಂಘು, ಟಿಕ್ರಿ ಮತ್ತು ಘಾಜಿಪುರ ಗಡಿ ಭಾಗಗಳಿಂದ ಹೊರಟಿರುವ ಪಂಜಾಬ್ ರೈತರ 3,500ಕ್ಕೂ ಹೆಚ್ಚು ಟ್ರ್ಯಾಕ್ಟರ್​ಗಳ ಮೆರವಣಿಗೆಯ ಮುಂದಾಳತ್ವವನ್ನು ಭಾರತೀಯ ಕಿಸಾನ್ ಯೂನಿಯನ್​ ಮುಖ್ಯಸ್ಥ ರಾಕೇಶ್ ಟಿಕಾಯತ್ ವಹಿಸಿದ್ದಾರೆ. ಸುರಕ್ಷತೆಯ ದೃಷ್ಟಿಯಿಂದ ಬೃಹತ್ ಪ್ರಮಾಣದಲ್ಲಿ ಪೊಲೀಸರನ್ನು ಸಹ ಹೆದ್ದಾರಿ ಮತ್ತು ಗಡಿ ಭಾಗಗಳಲ್ಲಿ ನಿಯೋಜಿಸಲಾಗಿದೆ.

ತಾವು ವಾಸ್ತವ್ಯ ಹೂಡಿದ್ದ ಗಡಿ ಪ್ರದೇಶಗಳಿಂದ ಕುಂಡ್ಲಿ-ಮನೇಸರ್-ಪಲ್ವಾಲ್ ಹೆದ್ದಾರಿ ತುಂಬ ರೈತರ ಟ್ರ್ಯಾಕ್ಟರ್​ಗಳ ಸದ್ದಿಗೆ ದೆಹಲಿ ಸಾಕ್ಷಿಯಾಗುತ್ತಿದೆ. ಟಿಕ್ರಿ, ಘಾಜಿಪುರ್, ಸಿಂಘು ಗಡಿ ಭಾಗಗಳಿಂದ ದೆಹಲಿಯ ಹೆದ್ದಾರಿಗುಂಟ ರೈತರ ಟ್ರ್ಯಾಕ್ಟರ್​ಗಳು ಹೊರಟಿವೆ.

ಇದು ಗಣರಾಜ್ಯೋತ್ಸವದಂದು ನಡೆಯಲಿರುವ ಟ್ರ್ಯಾಕ್ಟರ್ ಪರೇಡ್​ನ ತಾಲೀಮು ಎಂದು ಭಾವಿಸಬಹುದು. ಹರಿಯಾಣ- ಪಂಜಾಬ್​ನಿಂದ ಜನವರಿ 26ರಂದು ನಡೆಯಲಿರುವ ಮೆರವಣಿಗೆಯಲ್ಲಿ ಇನ್ನಷ್ಟು ಹೆಚ್ಚಿನ ಟ್ರ್ಯಾಕ್ಟರ್​ಗಳು ಭಾಗವಹಿಸಲಿವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾದ ನಾಯಕ ಅಭಿಮನ್ಯು ಕೋಹರ್ ತಿಳಿಸಿದ್ದಾರೆ.

ಟ್ರ್ಯಾಕ್ಟರ್​ ಪೆರೇಡ್​ಗೆ​ ಹರಿಯಾಣ ಯುವತಿಯರ ಸಿದ್ಧತೆ; ಗಣರಾಜ್ಯೋತ್ಸವದಂದು ಇವರೂ ದೆಹಲಿಗೆ ಧಾವಿಸಲಿದ್ದಾರೆ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!