AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo 19ನೇ ದಿನ: ಪಟ್ಟು ಬಿಡದ ರೈತರು, ಹೆಜ್ಜೆ ಹಿಂದಿಡದ ಕೇಂದ್ರ: ಉಪವಾಸ ಸತ್ಯಾಗ್ರಹ ಮುಕ್ತಾಯ

ಚಳವಳಿ ಪ್ರಾರಂಭವಾಗಿ 19 ದಿನಗಳಾದರೂ ಬೇಡಿಕೆ ಒಪ್ಪದ ಕೇಂದ್ರ ಸರ್ಕಾರದ ನಿರ್ಧಾರ ವಿರೋಧಿಸಿ ದೆಹಲಿಯ ವಿವಿಧ ಗಡಿಗಳಲ್ಲಿ ರೈತ ಒಕ್ಕೂಟಗಳ ಮುಖಂಡರು ಒಂದು ದಿನದ ಉಪವಾಸ ಸತ್ಯಾಗ್ರಹ ಆಯೋಜಿಸಿದ್ದರು.

Delhi Chalo 19ನೇ ದಿನ: ಪಟ್ಟು ಬಿಡದ ರೈತರು, ಹೆಜ್ಜೆ ಹಿಂದಿಡದ ಕೇಂದ್ರ: ಉಪವಾಸ ಸತ್ಯಾಗ್ರಹ ಮುಕ್ತಾಯ
ಸಂಗ್ರಹ ಚಿತ್ರ
guruganesh bhat
| Edited By: |

Updated on: Dec 14, 2020 | 8:55 PM

Share

ದೆಹಲಿ: ಪಂಜಾಬ್ ರೈತರ ಒಂದು ದಿನದ ಉಪವಾಸ ಸತ್ಯಾಗ್ರಹ ಮುಕ್ತಾಯಗೊಂಡಿದೆ. ಚಳವಳಿ ಪ್ರಾರಂಭವಾಗಿ 19 ದಿನಗಳಾದರೂ ಬೇಡಿಕೆ ಒಪ್ಪದ ಕೇಂದ್ರ ಸರ್ಕಾರದ ನಿರ್ಧಾರ ವಿರೋಧಿಸಿ ದೆಹಲಿಯ ವಿವಿಧ ಗಡಿಗಳಲ್ಲಿ ರೈತ ಒಕ್ಕೂಟಗಳ ಮುಖಂಡರು ಒಂದು ದಿನದ ಉಪವಾಸ ಸತ್ಯಾಗ್ರಹ ಆಯೋಜಿಸಿದ್ದರು.

ಅಲ್ಲದೇ ಪಂಜಾಬ್ ರೈತರ ಗುಂಪೊಂದು ಕೇಂದ್ರ ಸರ್ಕಾರದ ತಿದ್ದುಪಡಿ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ ಎಂಬ ಮಾಹಿತಿ ಬಂದಿದೆ. ಆದರೆ, ಈ ಕುರಿತು ಸ್ಪಷ್ಟ ಮಾಹಿತ ಇನ್ನಷ್ಟೇ ಬರಬೇಕಿದೆ. ಇತ್ತ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರೈತರ ಜೊತೆ ಇನ್ನೊಂದು ಸುತ್ತಿನ ಮಾತುಕತೆ ನಡೆಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದೆಹಲಿಯತ್ತ ತೆರಳುತ್ತಿದ್ದ ಪಂಜಾಬ್ ರೈತರ ಟ್ರ್ಯಾಕ್ಟರ್​ಗಳನ್ನು ಪೊಲೀಸರು ಅಡ್ಡಗಟ್ಟಿದರು. ಟ್ರ್ಯಾಕ್ಟರ್​ ಏರಿ ಚಾವಿಯನ್ನು ತೆಗೆದುಕೊಳ್ಳುವ ಮೂಲಕ ಪೊಲೀಸರು ರೈತರು ರಾಷ್ಟ್ರ ರಾಜಧಾನಿ ಪ್ರವೇಶಿಸುವುದನ್ನು ತಡೆದರು. 20 ರೈತರನ್ನು ವಶಕ್ಕೆ ಪಡೆದ ಪೊಲೀಸರು ನಂತರ, ರೈತರ ವಿರೋಧ ಹೆಚ್ಚಿದಂತೆ ಅವರನ್ನು ಬಿಡುಗಡೆಗೊಳಿಸಿದರು.

ಹರಿಯಾಣ ಸಂಸದರು ಶಾಸಕರಿಂದ ಕೇಂದ್ರ ಕೃಷಿ ಸಚಿವರ ಭೇಟಿ ಕೇಂದ್ರ ನೀರಾವರಿ ಖಾತೆಯ ರಾಜ್ಯ ಸಚಿವ ರತ್ನಾಲಾಲ್ ಕತಾರಿಯಾ, ಸಂಸದ ಧರಮ್​ವೀರ್ ಸಿಂಗ್ ಮತ್ತು ನಯಾಬ್ ಸಿಂಗ್ ಸೈನಿ ಮತ್ತು ಹರಿಯಾಣದ ಶಾಸಕರು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿಯಾಗಿ ನೂತನ ಕೃಷಿ ಕಾಯ್ದೆಗಳ ಕುರಿತು ಚರ್ಚಿಸಿದ್ದಾರೆ. ಜೊತೆಗೆ, ಉತ್ತರ ಪ್ರದೇಶ, ಕೇರಳ, ತಮಿಳುನಾಡು, ತೆಲಂಗಾಣ, ಬಿಹಾರ ಮತ್ತು ಹರಿಯಾಣದ ವಿವಿಧ ರೈತ ಒಕ್ಕೂಟಗಳು ದೆಹಲಿ ಚಲೋಗೆ ಬೆಂಬಲ ಘೋಷಿಸಿವೆ.

ನಾನು ಹರಿಯಾಣ ರಾಜ್ಯ ಸರ್ಕಾರದ ಭಾಗವಾಗಿರುವರೆಗೂ ರಾಜ್ಯದ ರೈತರು ಕನಿಷ್ಠ ಬೆಂಬಲ ಬೆಲೆಯಿಂದ ವಂಚಿತರಾಗಲು ಬಿಡುವುದಿಲ್ಲ ಎಂದು ಹರಿಯಾಣ ಉಪ ಮುಖ್ಯಮಂತ್ರಿ ದುಷ್ಯಂತ ಚೌಟಾಲಾ ಇತ್ತೀಚಿಗೆ ಹೇಳಿಕೆ ನೀಡಿದ್ದರು. ಈ ಹೇಳಿಕೆಯ ಬೆನ್ನಲ್ಲೇ ಹರಿಯಾಣದ ಜನಪ್ರತಿನಿಧಿಗಳು ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿಯಾಗಿದ್ದು ಮಹತ್ವ ಪಡೆದಿದೆ. ದುಷ್ಯಂತ್ ಚೌಟಾಲಾ ಮೇಲೆ ಪ್ರತಿಪಕ್ಷ ಮತ್ತು ಹರಿಯಾಣದ ರೈತ ಸಂಘಟನೆಗಳು ಪ್ರಬಲ ಒತ್ತಡ ಹೇರುತ್ತಿವೆ.

ನೂತನ ಕೃಷಿ ಕಾಯ್ದೆಗಳು ರೈತರನ್ನು ಅಭಿವೃದ್ಧಿಯ ಹಾದಿಯಲ್ಲಿ ಒಯ್ಯಲಿವೆ. ಪಂಜಾಬ್ ರೈತರ ಜೊತೆ ಮುಕ್ತವಾಗಿ ಮಾತನಾಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೂತನ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡಿದ್ದಾರೆ. ಜೊತೆಗೆ, ಗೃಹ ಸಚಿವ ಅಮಿತ್ ಶಾ ನಿವಾಸಕ್ಕೆ ನರೇಂದ್ರ ಸಿಂಗ್ ತೋಮರ್ ಭೇಟಿ ನೀಡಿ ಚರ್ಚಿಸಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ