AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ‘ಮನ್​ ಕಿ ಬಾತ್​‘ಗೆ ಪಂಜಾಬ್ ರೈತರಿಂದ ತಟ್ಟೆ-ಚಮಚದ ಉತ್ತರ

ಪ್ರಧಾನಿ ನರೇಂದ್ರ ಮೋದಿಯವರ ಈ ವರ್ಷದ ಕೊನೆಯ ಮನ್ ಕಿ ಬಾತ್​ಗೆ ಪಂಜಾಬ್ ರೈತರ ಘೋಷಣೆಗಳು ಪ್ರತಿರೋಧ ನೀಡಿದವು. ಚಪ್ಪಾಳೆ, ತಟ್ಟೆ-ಚಮಚ ಮತ್ತು ಡಬ್ಬಗಳ ಮೂಲಕ ಪಂಜಾಬ್ ರೈತರು ‘ಥಾಲಿ’ ಬಾರಿಸಿದರು.

ಮೋದಿ ‘ಮನ್​ ಕಿ ಬಾತ್​‘ಗೆ ಪಂಜಾಬ್ ರೈತರಿಂದ ತಟ್ಟೆ-ಚಮಚದ ಉತ್ತರ
ತಟ್ಟೆ-ಚಮಚದ ಪ್ರತಿರೋಧ
guruganesh bhat
|

Updated on:Dec 28, 2020 | 10:26 AM

Share

ದೆಹಲಿ: ಪಂಜಾಬ್ ರೈತರು ಈ ಮುಂಚೆ ಘೋಷಿಸಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್​ ನಡೆಯುವಾಗ ‘ಥಾಲಿ’ ಬಾರಿಸಿದ್ದಾರೆ. ಇಂದು ಬೆಳಗ್ಗೆ ಗಡಿಗಳಲ್ಲಿ ಮೆರವಣಿಗೆ ಆರಂಭಿಸಿದ ರೈತರು ಪ್ರಧಾನಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ತಟ್ಟೆ-ಚಮಚ, ಡಬ್ಬಗಳನ್ನು ಬಾರಿಸಿದ ರೈತರ ಘೋಷಣೆಗಳು ಮುಗಿಲು ಮುಟ್ಟಿದ್ದವು.

ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿ ಭಾಗಗಳಲ್ಲಿ ಕಳೆದ ಒಂದು ತಿಂಗಳಿಂದ ಚಳವಳಿ ನಡೆಸುತ್ತಿರುವ ಪಂಜಾಬ್​ ರೈತ ಸಮುದಾಯ, ಪ್ರಧಾನಿಯವರ ಮನದ ಮಾತನ್ನು ವಿರೋಧಿಸಲು ದೇಶದ ಜನತೆಗೆ ಕರೆ ನೀಡಿತ್ತು. ಕೊರೊನಾದ ಆರಂಭಿಕ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಒಟ್ಟಾಗಿ ಚಪ್ಪಾಳೆ, ಜಾಗಟೆ, ಶಂಖಗಳ ಥಾಲಿ ಬಾರಿಸಲು ಕರೆ ನೀಡಿದ್ದರು. ಪ್ರಧಾನಿಯವರ ನಿಲುವನ್ನು ವಿರೋಧಿಸಲು ಅದೇ ಮಾರ್ಗ ಅನುಸರಿಸಿದ ಪಂಜಾಬ್ ರೈತರು ಸಿಂಘು ಮತ್ತು ಘಾಜಿಪುರ ಗಡಿಗಳಲ್ಲಿ ಥಾಲಿ ಬಾರಿಸಿದರು.

ನೂತನ ಕೃಷಿ ಕಾಯ್ದೆ ವಿರೋಧಿಸಿ ಆತ್ಮಹತ್ಯೆ ನೂತನ ಕೃಷಿ ಕಾಯ್ದೆ ವಿರೋಧಿಸಿ ಜಲಾಲಾಬಾದ್​ನ ವಕೀಲರೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷಿ ಕಾಯ್ದೆಗಳನ್ನು ವಾಪಾಸ್ ಪಡೆಯುವಂತೆ  ಪತ್ರ ಬರೆದು ವಕೀಲ ಅಮರ್ ಜೀತ್ ಸಿಂಗ್, ದೆಹಲಿ ಟಿಕ್ರಿ ಗಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಣಿಯದ ಆಕ್ರೋಶ

ಘೋಷಣೆಯ ಭಂಗಿ ಭಾವ

Photos: ಒಂದು ತಿಂಗಳು ಪೂರೈಸಿದ ರೈತರ Delhi Chalo ಪ್ರತಿಭಟನೆ

Published On - 3:19 pm, Sun, 27 December 20

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?