AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ‘ಮನ್​ ಕಿ ಬಾತ್​‘ಗೆ ಪಂಜಾಬ್ ರೈತರಿಂದ ತಟ್ಟೆ-ಚಮಚದ ಉತ್ತರ

ಪ್ರಧಾನಿ ನರೇಂದ್ರ ಮೋದಿಯವರ ಈ ವರ್ಷದ ಕೊನೆಯ ಮನ್ ಕಿ ಬಾತ್​ಗೆ ಪಂಜಾಬ್ ರೈತರ ಘೋಷಣೆಗಳು ಪ್ರತಿರೋಧ ನೀಡಿದವು. ಚಪ್ಪಾಳೆ, ತಟ್ಟೆ-ಚಮಚ ಮತ್ತು ಡಬ್ಬಗಳ ಮೂಲಕ ಪಂಜಾಬ್ ರೈತರು ‘ಥಾಲಿ’ ಬಾರಿಸಿದರು.

ಮೋದಿ ‘ಮನ್​ ಕಿ ಬಾತ್​‘ಗೆ ಪಂಜಾಬ್ ರೈತರಿಂದ ತಟ್ಟೆ-ಚಮಚದ ಉತ್ತರ
ತಟ್ಟೆ-ಚಮಚದ ಪ್ರತಿರೋಧ
guruganesh bhat
|

Updated on:Dec 28, 2020 | 10:26 AM

Share

ದೆಹಲಿ: ಪಂಜಾಬ್ ರೈತರು ಈ ಮುಂಚೆ ಘೋಷಿಸಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್​ ನಡೆಯುವಾಗ ‘ಥಾಲಿ’ ಬಾರಿಸಿದ್ದಾರೆ. ಇಂದು ಬೆಳಗ್ಗೆ ಗಡಿಗಳಲ್ಲಿ ಮೆರವಣಿಗೆ ಆರಂಭಿಸಿದ ರೈತರು ಪ್ರಧಾನಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ತಟ್ಟೆ-ಚಮಚ, ಡಬ್ಬಗಳನ್ನು ಬಾರಿಸಿದ ರೈತರ ಘೋಷಣೆಗಳು ಮುಗಿಲು ಮುಟ್ಟಿದ್ದವು.

ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿ ಭಾಗಗಳಲ್ಲಿ ಕಳೆದ ಒಂದು ತಿಂಗಳಿಂದ ಚಳವಳಿ ನಡೆಸುತ್ತಿರುವ ಪಂಜಾಬ್​ ರೈತ ಸಮುದಾಯ, ಪ್ರಧಾನಿಯವರ ಮನದ ಮಾತನ್ನು ವಿರೋಧಿಸಲು ದೇಶದ ಜನತೆಗೆ ಕರೆ ನೀಡಿತ್ತು. ಕೊರೊನಾದ ಆರಂಭಿಕ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಒಟ್ಟಾಗಿ ಚಪ್ಪಾಳೆ, ಜಾಗಟೆ, ಶಂಖಗಳ ಥಾಲಿ ಬಾರಿಸಲು ಕರೆ ನೀಡಿದ್ದರು. ಪ್ರಧಾನಿಯವರ ನಿಲುವನ್ನು ವಿರೋಧಿಸಲು ಅದೇ ಮಾರ್ಗ ಅನುಸರಿಸಿದ ಪಂಜಾಬ್ ರೈತರು ಸಿಂಘು ಮತ್ತು ಘಾಜಿಪುರ ಗಡಿಗಳಲ್ಲಿ ಥಾಲಿ ಬಾರಿಸಿದರು.

ನೂತನ ಕೃಷಿ ಕಾಯ್ದೆ ವಿರೋಧಿಸಿ ಆತ್ಮಹತ್ಯೆ ನೂತನ ಕೃಷಿ ಕಾಯ್ದೆ ವಿರೋಧಿಸಿ ಜಲಾಲಾಬಾದ್​ನ ವಕೀಲರೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷಿ ಕಾಯ್ದೆಗಳನ್ನು ವಾಪಾಸ್ ಪಡೆಯುವಂತೆ  ಪತ್ರ ಬರೆದು ವಕೀಲ ಅಮರ್ ಜೀತ್ ಸಿಂಗ್, ದೆಹಲಿ ಟಿಕ್ರಿ ಗಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಣಿಯದ ಆಕ್ರೋಶ

ಘೋಷಣೆಯ ಭಂಗಿ ಭಾವ

Photos: ಒಂದು ತಿಂಗಳು ಪೂರೈಸಿದ ರೈತರ Delhi Chalo ಪ್ರತಿಭಟನೆ

Published On - 3:19 pm, Sun, 27 December 20

ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ
ಟರ್ನಿಂಗ್​ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು
ಟರ್ನಿಂಗ್​ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ