AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಸರ್ವೋಚ್ಛ ನ್ಯಾಯಾಲಯದಲ್ಲಿ ಕೆಲವೇ ಕ್ಷಣಗಳಲ್ಲಿ ವಿಚಾರಣೆ ಆರಂಭ..

ಕೇವಲ ರಾಜಕೀಯ ನಾಯಕತ್ವದಿಂದ ಮಾತ್ರ ಈ ಸಮಸ್ಯೆಗೆ ಪರಿಹಾರ ಸಾಧ್ಯ. ನ್ಯಾಯಾಲಯಕ್ಕೆ ಜವಾಬ್ದಾರಿ ಹಸ್ತಾಂತರಿಸಿ ಸರ್ಕಾರದ ನುಸುಳಿಕೊಳ್ಳುವ ಪ್ರಯತ್ನ ನಡೆಸಿದೆ ಎಂದು ಆಲ್ ಇಂಡಿಯಾ ಕಿಸಾನ್ ಸಂಘರ್ಷ ಕೋರ್ಡಿನೇಶನ್ ಕಮಿಟಿ ಕೇಂದ್ರ ಸರ್ಕಾರವನ್ನು ದೂರಿದೆ.

Delhi Chalo: ಸರ್ವೋಚ್ಛ ನ್ಯಾಯಾಲಯದಲ್ಲಿ ಕೆಲವೇ ಕ್ಷಣಗಳಲ್ಲಿ ವಿಚಾರಣೆ ಆರಂಭ..
ಸುಪ್ರೀಂ ಕೋರ್ಟ್
guruganesh bhat
| Edited By: |

Updated on: Jan 11, 2021 | 11:02 AM

Share

ದೆಹಲಿ: ಕಾನೂನು ವಿದ್ಯಾರ್ಥಿ ರಿಷಭ್ ಶರ್ಮಾ ಅವರು ಚಳುವಳಿ ನಿರತ ರೈತರನ್ನು ತೆರವುಗೊಳಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯ ಇಂದು ವಿಚಾರಣೆ ನಡೆಸಲಿದೆ. ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಎಸ್.ಎ. ಬೊಬ್ಡೆ, ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಮತ್ತು ನ್ಯಾಯಮೂರ್ತಿ ವಿ. ರಾಮಸುಬ್ರಹ್ಮಣಿಯನ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ದೆಹಲಿ ಚಲೋ ತೆರವುಗೊಳಿಸಲು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಂದು ಕೈಗೆತ್ತಿಕೊಳ್ಳಲಿದೆ.

ಸುಪ್ರೀಂ ಪೀಠ ಉಭಯ ಕಡೆಯವರಿಗೂ ನೋಟಿಸ್ ನೀಡಿ, ಒಂದಷ್ಟು ತಿಳಿವಳಿಕೆ/ಕಿವಿಮಾತು ಹೇಳುವ ಕೆಲಸವನ್ನು ಇದಕ್ಕೂ ಮುನ್ನ ಮಾಡಿದೆ.  ಇಂದು ಇನ್ನೂ ವಾದ-ಪ್ರತಿವಾದ ಮುಂದುವರಿಯಲಿದೆ. ಅದಾದ ನಂತರ ಜಡ್ಜ್​ಮೆಂಟ್ ಅಥವಾ ಸಮಂಜಸ ನಿರ್ದೇಶನ​ ನೀಡಲಿದೆ ಸುಪ್ರೀಂ ನ್ಯಾಯಪೀಠ. ಇಂದು ಬೆಳಗ್ಗೆ 11.30ರಿಂದ ವಿಚಾರಣೆ ಕೈಗೆತ್ತಿಕೊಳ್ಳಲ್ಲಿದೆ.

ಇತ್ತ ರೈತ ಸಂಘಟನೆಗಳು ರೈತರ ಸಮಸ್ಯೆ ಪರಿಹರಿಸಲು ನ್ಯಾಯಾಲಯದ ಬಳಿ ಸಾಧ್ಯವಿಲ್ಲ. ಕೇಂದ್ರ ಸರ್ಕಾರ ತನ್ನ ಜವಾಬ್ದಾರಿಯಿಂದ ಪಾರಾಗಲು ನ್ಯಾಯಾಲಯದ ಹೆಗಲಿಗೆ ಜವಾಬ್ದಾರಿಯನ್ನು ಹಸ್ತಾಂತರಿಸಿದೆ ಎಂದು ದೂರಿವೆ. ಸರ್ವೋಚ್ಛ ನ್ಯಾಯಾಲಯದ ಮಧ್ಯಸ್ಥಿಕೆಯಿಲ್ಲದೇ ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸಬೇಕಿತ್ತು. ಬಂಡವಾಳಶಾಹಿಗಳ ಆಸೆಗೆ ಮಣಿದು ಜಾರಿಗೊಳಿಸಿದ ಕಾಯ್ದೆಯನ್ನು ನ್ಯಾಯಾಲಯದ ಅಂಗಳದಲ್ಲಿ ಇರಿಸಲಾಗಿದೆ.

ರೈತರ ಬೇಡಿಕೆ ಈಡೇರಿಸಿ ಚಳುವಳಿ ಅಂತ್ಯಗೊಳಿಸುವಲ್ಲಿ ನ್ಯಾಯಾಲಯದ ಯಾವುದೇ ಪಾತ್ರವಿಲ್ಲ. ಕೇವಲ ರಾಜಕೀಯ ನಾಯಕತ್ವದಿಂದ ಮಾತ್ರ ಈ ಸಮಸ್ಯೆಗೆ ಪರಿಹಾರ ಸಾಧ್ಯ. ನ್ಯಾಯಾಲಯಕ್ಕೆ ಜವಾಬ್ದಾರಿ ಹಸ್ತಾಂತರಿಸಿ ಸರ್ಕಾರದ ನುಸುಳಿಕೊಳ್ಳುವ ಪ್ರಯತ್ನ ನಡೆಸಿದೆ ಎಂದು ಆಲ್ ಇಂಡಿಯಾ ಕಿಸಾನ್ ಸಂಘರ್ಷ ಕೋರ್ಡಿನೇಶನ್ ಕಮಿಟಿ ಸರ್ಕಾರವನ್ನು ದೂರಿದೆ.

‘ದೆಹಲಿ ಚಲೋ ಕೊರೊನಾ ಹರಡುವಿಕೆಗೆ ಕಾರಣವಾಗುವುದಿಲ್ಲವೇ?‘ ಕೇಂದ್ರವನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ