AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಆಕಾಶ ತಲುಪಿದ ಚಳುವಳಿಕಾರ ಬೇಡಿಕೆಗಳು!

ಪಂಜಾಬ್- ಹರಿಯಾಣದ ಯುವಕರು ವಿಭಿನ್ಬ ರೀತಿಯಲ್ಲಿ ದೆಹಲಿ ಚಲೋ ಚಳುವಳಿಯಲ್ಲಿ ಭಾಗವಹಿಸುತ್ತಿದ್ದಾರೆ. ಗಾಳಿಪಟಗಳನ್ನು ಹಾರಿಸುವ ಮೂಲಕ ತಮ್ಮ ಸಂದೇಶವನ್ನು ಆಕಾಶದಲ್ಲಿ ಹರಿಬಿಡುತ್ತಿದ್ದಾರೆ.

Delhi Chalo: ಆಕಾಶ ತಲುಪಿದ ಚಳುವಳಿಕಾರ ಬೇಡಿಕೆಗಳು!
NO FARMER NO FOOD ಗಾಳಿಪಟ
guruganesh bhat
|

Updated on:Dec 27, 2020 | 2:17 PM

Share

ದೆಹಲಿ: ಒಂದು ತಿಂಗಳಿಂದ ನಡೆಸುತ್ತಿರುವ ಪಂಜಾಬ್ ರೈತರ ಚಳುವಳಿಯ ಕೂಗು ಈಗ ಆಕಾಶ ತಲುಪಿದೆ ಎಂದರೆ ತಪ್ಪಾಗುವುದಿಲ್ಲ. ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಲು ಚಳುವಳಿ ನಿರತರು ವಿಭಿನ್ನ ಮಾರ್ಗಗಳನ್ನು ಅನುಸರಿಸುತ್ತಿದ್ದಾರೆ. ಸದ್ದು ಗದ್ದಲವಿಲ್ಲದೇ ತಮ್ಮ ಧ್ವನಿಯನ್ನು ಆಕಾಶದಾದ್ಯಂತ ಪಸರಿಸುತ್ತಿದ್ದಾರೆ.

ಯುವಕರ ಪಡೆಯೊಂದು ನೂತನ ಕೃಷಿ ಕಾಯ್ದೆ ವಿರೋಧಿ ಘೋಷಣೆಗಳನ್ನು ಬರೆದಿರುವ ಗಾಳಿಪಟಗಳನ್ನು ಹಾರಿಸುತ್ತಿದೆ.. ‘ರೈತರಿಲ್ಲದೇ ಆಹಾರವಿಲ್ಲ‘, ‘ನಾವು ರೈತರು ಭಯೋತ್ಪಾದಕರಲ್ಲ’ ಎಂದು ಬರೆದಿರುವ ಬಣ್ಣ ಬಣ್ಣದ ಗಾಳಿಪಟಗಳನ್ನು ಹಾರಿಸುತ್ತಿದ್ದಾರೆ. ಈ ಯೋಜನೆ ರೂಪಿಸಿರುವ ಯುವಕ ಸರ್ದೀಪ್ ಸಿಂಗ್, ‘ಬಹುಶಃ ಈ ಗಾಳಿಪಟಗಳು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾರ ಮನೆಯನ್ನೂ ತಲುಪಬಹುದು. ಆಗಾದರೂ, ಅವರಿಗೆ ನಮ್ಮ ಬೇಡಿಕೆ ಅರಿವಾಗಬಹುದು’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಗಾಳಿಪಟಗಳಲ್ಲಿ ತಮ್ಮ ಸಂದೇಶ ಬರೆದಿರುವ ಚಳುವಳಿಕಾರರು ‘ಈ ಗಾಳಿಪಟಗಳ ದಾರಗಳನ್ನು ತುಂಡರಿಸಿ ಹಾರಿಬಿಡುತ್ತೇವೆ. ಗಾಳಿಯಲ್ಲಿ ಹಾರಿ ಎಲ್ಲೆಲ್ಲೋ ತಲುಪುವ ಗಾಳಿಪಟಗಳು ನಮ್ಮ ಬೇಡಿಕೆಗಳನ್ನು ಇನ್ನಷ್ಟು ಜನರಿಗೆ ತಲುಪಿಸಲಿವೆ’ ಎಂದು ಅಭಿಪ್ರಾಯಪಡುತ್ತಾರೆ.

ಕೆಲವರು ಗಾಳಿಪಟ ಚಳುವಳಿಯನ್ನು ಫೇಸ್​ಬುಕ್ ಲೈವ್​ನಲ್ಲೂ ಹರಿಬಿಡುತ್ತಿದ್ದಾರೆ. ಯಾರು ಬೇಕಾದರೂ ಈ ಚಳುವಳಿಯ ಗಾಳಿಪಟ ಉತ್ಸವದಲ್ಲಿ ಭಾಗವಹಿಸಬಹುದು ಎಂದು ಹರಿಯಾಣದ ಕರಮ್​ವೀರ್ ಸಿಂಗ್ ಹೇಳುತ್ತಾರೆ. ನಮ್ಮನ್ನು ತಪ್ಪಾಗಿ ವ್ಯಾಖ್ಯಾನಿಸುತ್ತಿರುವ ಸರ್ಕಾರಕ್ಕೆ ಗಾಳಿಪಟಗಳು ನಾವು ‘ಶಾಂತಿಯುತ’ ಪ್ರತಿಭಟನೆಯನ್ನಷ್ಟೇ ಮಾಡುತ್ತಿದ್ದೇವೆ ಎಂದು ತಿಳಿಸುತ್ತಿವೆ.

‘ಮೋದಿ ಮಧ್ಯಸ್ಥಿಕೆ ವಹಿಸಿದರೆ ರೈತರ ಪ್ರತಿಭಟನೆಗೆ ನಿಮಿಷದೊಳಗೆ ಅಂತ್ಯ ಹಾಡಬಹುದು’

Published On - 10:09 pm, Sat, 26 December 20

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ