AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಆಕಾಶ ತಲುಪಿದ ಚಳುವಳಿಕಾರ ಬೇಡಿಕೆಗಳು!

ಪಂಜಾಬ್- ಹರಿಯಾಣದ ಯುವಕರು ವಿಭಿನ್ಬ ರೀತಿಯಲ್ಲಿ ದೆಹಲಿ ಚಲೋ ಚಳುವಳಿಯಲ್ಲಿ ಭಾಗವಹಿಸುತ್ತಿದ್ದಾರೆ. ಗಾಳಿಪಟಗಳನ್ನು ಹಾರಿಸುವ ಮೂಲಕ ತಮ್ಮ ಸಂದೇಶವನ್ನು ಆಕಾಶದಲ್ಲಿ ಹರಿಬಿಡುತ್ತಿದ್ದಾರೆ.

Delhi Chalo: ಆಕಾಶ ತಲುಪಿದ ಚಳುವಳಿಕಾರ ಬೇಡಿಕೆಗಳು!
NO FARMER NO FOOD ಗಾಳಿಪಟ
guruganesh bhat
|

Updated on:Dec 27, 2020 | 2:17 PM

Share

ದೆಹಲಿ: ಒಂದು ತಿಂಗಳಿಂದ ನಡೆಸುತ್ತಿರುವ ಪಂಜಾಬ್ ರೈತರ ಚಳುವಳಿಯ ಕೂಗು ಈಗ ಆಕಾಶ ತಲುಪಿದೆ ಎಂದರೆ ತಪ್ಪಾಗುವುದಿಲ್ಲ. ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಲು ಚಳುವಳಿ ನಿರತರು ವಿಭಿನ್ನ ಮಾರ್ಗಗಳನ್ನು ಅನುಸರಿಸುತ್ತಿದ್ದಾರೆ. ಸದ್ದು ಗದ್ದಲವಿಲ್ಲದೇ ತಮ್ಮ ಧ್ವನಿಯನ್ನು ಆಕಾಶದಾದ್ಯಂತ ಪಸರಿಸುತ್ತಿದ್ದಾರೆ.

ಯುವಕರ ಪಡೆಯೊಂದು ನೂತನ ಕೃಷಿ ಕಾಯ್ದೆ ವಿರೋಧಿ ಘೋಷಣೆಗಳನ್ನು ಬರೆದಿರುವ ಗಾಳಿಪಟಗಳನ್ನು ಹಾರಿಸುತ್ತಿದೆ.. ‘ರೈತರಿಲ್ಲದೇ ಆಹಾರವಿಲ್ಲ‘, ‘ನಾವು ರೈತರು ಭಯೋತ್ಪಾದಕರಲ್ಲ’ ಎಂದು ಬರೆದಿರುವ ಬಣ್ಣ ಬಣ್ಣದ ಗಾಳಿಪಟಗಳನ್ನು ಹಾರಿಸುತ್ತಿದ್ದಾರೆ. ಈ ಯೋಜನೆ ರೂಪಿಸಿರುವ ಯುವಕ ಸರ್ದೀಪ್ ಸಿಂಗ್, ‘ಬಹುಶಃ ಈ ಗಾಳಿಪಟಗಳು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾರ ಮನೆಯನ್ನೂ ತಲುಪಬಹುದು. ಆಗಾದರೂ, ಅವರಿಗೆ ನಮ್ಮ ಬೇಡಿಕೆ ಅರಿವಾಗಬಹುದು’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಗಾಳಿಪಟಗಳಲ್ಲಿ ತಮ್ಮ ಸಂದೇಶ ಬರೆದಿರುವ ಚಳುವಳಿಕಾರರು ‘ಈ ಗಾಳಿಪಟಗಳ ದಾರಗಳನ್ನು ತುಂಡರಿಸಿ ಹಾರಿಬಿಡುತ್ತೇವೆ. ಗಾಳಿಯಲ್ಲಿ ಹಾರಿ ಎಲ್ಲೆಲ್ಲೋ ತಲುಪುವ ಗಾಳಿಪಟಗಳು ನಮ್ಮ ಬೇಡಿಕೆಗಳನ್ನು ಇನ್ನಷ್ಟು ಜನರಿಗೆ ತಲುಪಿಸಲಿವೆ’ ಎಂದು ಅಭಿಪ್ರಾಯಪಡುತ್ತಾರೆ.

ಕೆಲವರು ಗಾಳಿಪಟ ಚಳುವಳಿಯನ್ನು ಫೇಸ್​ಬುಕ್ ಲೈವ್​ನಲ್ಲೂ ಹರಿಬಿಡುತ್ತಿದ್ದಾರೆ. ಯಾರು ಬೇಕಾದರೂ ಈ ಚಳುವಳಿಯ ಗಾಳಿಪಟ ಉತ್ಸವದಲ್ಲಿ ಭಾಗವಹಿಸಬಹುದು ಎಂದು ಹರಿಯಾಣದ ಕರಮ್​ವೀರ್ ಸಿಂಗ್ ಹೇಳುತ್ತಾರೆ. ನಮ್ಮನ್ನು ತಪ್ಪಾಗಿ ವ್ಯಾಖ್ಯಾನಿಸುತ್ತಿರುವ ಸರ್ಕಾರಕ್ಕೆ ಗಾಳಿಪಟಗಳು ನಾವು ‘ಶಾಂತಿಯುತ’ ಪ್ರತಿಭಟನೆಯನ್ನಷ್ಟೇ ಮಾಡುತ್ತಿದ್ದೇವೆ ಎಂದು ತಿಳಿಸುತ್ತಿವೆ.

‘ಮೋದಿ ಮಧ್ಯಸ್ಥಿಕೆ ವಹಿಸಿದರೆ ರೈತರ ಪ್ರತಿಭಟನೆಗೆ ನಿಮಿಷದೊಳಗೆ ಅಂತ್ಯ ಹಾಡಬಹುದು’

Published On - 10:09 pm, Sat, 26 December 20

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?