AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದ ಪ್ರತಿ ಮನೆಯ ಒಬ್ಬ ನಿರುದ್ಯೋಗಿಗೆ ತಿಂಗಳಿಗೆ 3000 ರೂ. ಭತ್ಯೆ; ಅರವಿಂದ್ ಕೇಜ್ರಿವಾಲ್ ಭರವಸೆ

Goa Assembly Election: ಗೋವಾದ ಪ್ರತಿ ಮನೆಯಲ್ಲಿರುವ ಒಬ್ಬ ನಿರುದ್ಯೋಗಿಗೆ ತಿಂಗಳಿಗೆ 3000 ರೂ.ಭತ್ಯೆ ನೀಡಲಾಗುತ್ತದೆ. ಅವರಿಗೆ ಉದ್ಯೋಗ ಸಿಗುವವರೆಗೂ ಈ ಹಣ ನೀಡಲಾಗುತ್ತದೆ.

ಗೋವಾದ ಪ್ರತಿ ಮನೆಯ ಒಬ್ಬ ನಿರುದ್ಯೋಗಿಗೆ ತಿಂಗಳಿಗೆ 3000 ರೂ. ಭತ್ಯೆ; ಅರವಿಂದ್ ಕೇಜ್ರಿವಾಲ್ ಭರವಸೆ
ಅರವಿಂದ್ ಕೇಜ್ರಿವಾಲ್​
TV9 Web
| Edited By: |

Updated on:Sep 21, 2021 | 5:19 PM

Share

ಪಣಜಿ: ದೆಹಲಿ ಮುಖ್ಯಮಂತ್ರಿ, ಆಪ್​ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal)​ ಇದೀಗ ಗೋವಾ ವಿಧಾನಸಭಾ ಚುನಾವಣೆ (Goa Assembly Election)ಯತ್ತ ಗಮನಹರಿಸಿದ್ದಾರೆ. ಇತ್ತೀಚೆಗಷ್ಟೇ ಉತ್ತಾರಖಂಡ್​ಗೆ ಭೇಟಿ ನೀಡಿದ್ದ ಅರವಿಂದ್ ಕೇಜ್ರಿವಾಲ್​ ಅಲ್ಲಿ ನಿರುದ್ಯೋಗ ಸಮಸ್ಯೆ ನೀಗಿಸುವುದೇ ಮೊದಲ ಆದ್ಯತೆ ಎಂದಿದ್ದರು. ಹಾಗೇ, ಮುಂದಿನ ವರ್ಷದ ಚುನಾವಣೆಯಲ್ಲಿ ಆಪ್​ ಅಧಿಕಾರಕ್ಕೆ ಬಂದರೆ  6ತಿಂಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿಸುವ ಭರವಸೆಯನ್ನೂ ನೀಡಿದ್ದಾರೆ. ಹಾಗೇ, ಇಂದು ಗೋವಾಕ್ಕೆ ಭೇಟಿ ನೀಡಿರುವ ಅವರು, ಅಲ್ಲಿಯೂ ಸಹ ನಿರುದ್ಯೋಗ ನೀಗಿಸುವ ಆಶ್ವಾಸನೆಯನ್ನೇ ನೀಡಿದ್ದಾರೆ.  

ಗೋವಾದಲ್ಲಿ 2022ರಲ್ಲಿ ನಡೆಯಲಿರುವ ಚುನಾವಣೆ ನಿಮಿತ್ತ ಮತ ಸೆಳೆಯಲು ಅಲ್ಲಿಗೆ ಧಾವಿಸಿರುವ ಅರವಿಂದ್ ಕೇಜ್ರಿವಾಲ್​ ಏಳು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಮೊದಲನೇದಾಗಿ ಯುವಕರಿಗೆ ಉದ್ಯೋಗ ನೀಡುವ ಭರವಸೆ ನೀಡಿದ್ದಾರೆ.  ಲಂಚವಿಲ್ಲದೆ ಸರ್ಕಾರಿ ಕೆಲಸ ಪಡೆಯಲು ಸಾಧ್ಯವಿಲ್ಲ ಎಂಬ ನಂಬಿಕೆ ಬಲವಾಗಿ ಇದೆ. ಆ ಸಂಪ್ರದಾಯವನ್ನು ನಾವು ಸಂಪೂರ್ಣವಾಗಿ ಹೋಗಲಾಡಿಸುತ್ತೇವೆ ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ಗೋವಾದ ಪ್ರತಿ ಮನೆಯಲ್ಲಿರುವ ಒಬ್ಬ ನಿರುದ್ಯೋಗಿಗೆ ತಿಂಗಳಿಗೆ 3000 ರೂ.ಭತ್ಯೆ ನೀಡಲಾಗುತ್ತದೆ. ಅವರಿಗೆ ಉದ್ಯೋಗ ಸಿಗುವವರೆಗೂ ಈ ಹಣ ನೀಡಲಾಗುತ್ತದೆ. ಕೆಲಸ ಸಿಕ್ಕ ಬಳಿಕ ಅದನ್ನು ನಿಲ್ಲಿಸಲಾಗುತ್ತದೆ. ಇನ್ನು ಶೇ.80ರಷ್ಟು ಉದ್ಯೋಗವನ್ನು ಗೋವಾದ ಜನರಿಗಾಗಿಯೇ ಅಂದರೆ ಸ್ಥಳೀಯರಿಗಾಗಿಯೇ ಮೀಸಲಿಡಲಾಗುತ್ತದೆ ಎಂದೂ ಭರವಸೆ ನೀಡಿದ್ದಾರೆ.

ಕೊವಿಡ್​ 19ನಿಂದಾಗಿ ಪ್ರವಾಸೋದ್ಯಮ ಅವಲಂಬಿತ ಕುಟುಂಬಗಳು ಉದ್ಯೋಗ ಕಳೆದುಕೊಂಡಿವೆ. ಕೆಲವರ ಉದ್ಯೋಗ ಹೋಗಿಲ್ಲವಾದರೂ ಕೈಯಲ್ಲಿ ಕೆಲಸವಿಲ್ಲದೆ ಕಂಗಾಲಾಗಿದ್ದಾರೆ. ಅಂಥವರು ಮತ್ತೆ ಕೆಲಸಕ್ಕೆ ಹೋಗಿ, ಸಂಬಳ ಪಡೆಯುವಂತೆ ಆಗುವವರೆಗೂ ತಿಂಗಳಿಗೆ 5 ಸಾವಿರ ರೂ ನೀಡಲಾಗುತ್ತದೆ. ಅದೇ ರೀತಿ ಗಣಿಗಾರಿಕೆ ನಡೆಸುತ್ತಿದ್ದು, ಉದ್ಯೋಗ ಕಳೆದುಕೊಂಡವರಿಗೂ ತಿಂಗಳಿಗೆ 5000 ರೂ.ನೀಡಲಾಗುವುದು ಎಂದಿದ್ದಾರೆ. ಅಷ್ಟೇ ಅಲ್ಲ, ಗೋವಾದಲ್ಲಿ ಕೌಶಲ ವಿಶ್ವವಿದ್ಯಾಲಯ ನಿರ್ಮಿಸುವ ಮೂಲಕ ಯುವಜನರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದೂ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ₹12 ಕೋಟಿ ಗೆದ್ದ ಆಟೋ ಚಾಲಕ; ಕೇರಳ ತಿರುವೋಣಂ ಬಂಪರ್ ಲಾಟರಿ ವಿಜೇತ ಯಾರು ಎಂಬ ಪ್ರಶ್ನೆಗೆ  ಕೊನೆಗೂ ಸಿಕ್ಕಿತು ಉತ್ತರ

Karnataka High Court: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ರಿತು ರಾಜ್ ಅವಸ್ತಿ ನೇಮಕಕ್ಕೆ ಶಿಫಾರಸು

(Delhi Chief Minister Arvind Kejriwal announced one unemployed youth per household in Goa)

Published On - 5:10 pm, Tue, 21 September 21

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು