AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಹೊಂಜು ಗೋಪುರ ಉದ್ಘಾಟಿಸಿದ ಅರವಿಂದ ಕೇಜ್ರಿವಾಲ್

Smog Tower: ಕನ್ನಾಟ್ ಪ್ಲೇಸ್‌ನಲ್ಲಿರುವ ಶಿವಾಜಿ ಸ್ಟೇಡಿಯಂ ಮೆಟ್ರೋ ನಿಲ್ದಾಣದ ಹಿಂಭಾಗದಲ್ಲಿರುವ ಈ ಗೋಪುರವನ್ನು 24.2 ಮೀಟರ್ ಎತ್ತರದಲ್ಲಿದೆ. ಎರಡು ವರ್ಷಗಳ ಕಾರ್ಯಾಚರಣೆಯ ವೆಚ್ಚ ಸೇರಿದಂತೆ ಒಟ್ಟು ಯೋಜನಾ ವೆಚ್ಚ ಸುಮಾರು ರೂ. 20 ಕೋಟಿ ಎಂದು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿಯ (ಡಿಪಿಸಿಸಿ) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

ದೆಹಲಿಯಲ್ಲಿ ಹೊಂಜು ಗೋಪುರ ಉದ್ಘಾಟಿಸಿದ ಅರವಿಂದ ಕೇಜ್ರಿವಾಲ್
ಹೊಂಜು ಗೋಪುರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 23, 2021 | 6:16 PM

Share

ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ ದೆಹಲಿಯ ಕನ್ನಾಟ್ ಪ್ಲೇಸ್‌ನಲ್ಲಿ  ಹೊಂಜು ಗೋಪುರವನ್ನು (smog tower) ಉದ್ಘಾಟಿಸಿದರು. ಇದು ಸುಮಾರು 1 ಕಿಮೀ ವ್ಯಾಪ್ತಿಯಲ್ಲಿ ಪ್ರತಿ ಸೆಕೆಂಡ್ ಗಳಿಗೆ 1,000ಕ್ಯುಬಿಕ್ ಮೀಟರ್ ಗಾಳಿಯನ್ನು ಶುದ್ಧೀಕರಿಸುತ್ತದೆ. ದೇಶದಲ್ಲಿನ ಮೊದಲ ಹೊಂಜು ಗೋಪುರ ಇದಾಗಿದೆ ಎಂದು  ಆಮ್ ಆದ್ಮಿ ಪಕ್ಷ ಹೇಳಿದೆ.

ಸಣ್ಣ ಪ್ರಮಾಣದ ಯೋಜನೆಯಂತೆ ಟವರ್ ಅನ್ನು ಸ್ಥಾಪಿಸಲಾಗಿದೆ ಮತ್ತು ಆರಂಭಿಕ ಪ್ರವೃತ್ತಿಗಳು ಒಂದು ತಿಂಗಳೊಳಗೆ ಲಭ್ಯವಿರುತ್ತವೆ ಎಂದು ಕೇಜ್ರಿವಾಲ್ ಹೇಳಿದರು. ಪ್ರಾಯೋಗಿಕ ಯೋಜನೆ ಯಶಸ್ವಿಯಾದರೆ, ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿನ ಹೊಂಜು ಗೋಪುರಗಳನ್ನು ಸ್ಥಾಪಿಸಲಾಗುವುದು. ” ಕನ್ನಾಟ್ ಪ್ಲೇಸ್‌ ನಲ್ಲಿ ಸ್ಥಾಪಿಸಲಾಗಿರುವ ಹೊಸದರಲ್ಲಿ ಪ್ರಾಯೋಗಿಕ ಅಧ್ಯಯನವು ಅನುಕೂಲಕರ ಫಲಿತಾಂಶಗಳನ್ನು ನೀಡಿದರೆ ನಗರದ ಇತರ ಭಾಗಗಳಲ್ಲೂ ಹೊಂಜು ಗೋಪುರಗಳನ್ನು ಸ್ಥಾಪಿಸಬಹುದು” ಎಂದು ಉದ್ಘಾಟನೆಯ ಸಂದರ್ಭದಲ್ಲಿ ಕೇಜ್ರಿವಾಲ್ ಹೇಳಿದರು.

ಕನ್ನಾಟ್ ಪ್ಲೇಸ್‌ನಲ್ಲಿರುವ ಶಿವಾಜಿ ಸ್ಟೇಡಿಯಂ ಮೆಟ್ರೋ ನಿಲ್ದಾಣದ ಹಿಂಭಾಗದಲ್ಲಿರುವ ಈ ಗೋಪುರವನ್ನು 24.2 ಮೀಟರ್ ಎತ್ತರದಲ್ಲಿದೆ. ಎರಡು ವರ್ಷಗಳ ಕಾರ್ಯಾಚರಣೆಯ ವೆಚ್ಚ ಸೇರಿದಂತೆ ಒಟ್ಟು ಯೋಜನಾ ವೆಚ್ಚ ಸುಮಾರು ರೂ. 20 ಕೋಟಿ ಎಂದು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿಯ (ಡಿಪಿಸಿಸಿ) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಡಿಪಿಸಿಸಿ, ಗೋಪುರದ ನೋಡಲ್ ಏಜೆನ್ಸಿಯಾಗಿದೆ.

ಈ ಗೋಪುರ ನಗರ ಪ್ರದೇಶಗಳಲ್ಲಿನ ವಾಯು ಮಾಲಿನ್ಯದ ಕಡಿತವನ್ನು ‘ಏರ್ ಕ್ಲೀನಿಂಗ್’ ಮೂಲಕ ಮೌಲ್ಯಮಾಪನ ಮಾಡಲು ಪ್ರಾಯೋಗಿಕ ಅಧ್ಯಯನವನ್ನು ರೂಪಿಸಿದೆ. ಎರಡು ವರ್ಷಗಳ ಅವಧಿಯ ಪ್ರಾಯೋಗಿಕ ಅಧ್ಯಯನವನ್ನು ಐಐಟಿ ದೆಹಲಿ ಮತ್ತು ಐಐಟಿ ಬಾಂಬೆ ನಡೆಸುತ್ತದೆ. ಎರಡು ಸಂಸ್ಥೆಗಳು ಯೋಜನೆಗೆ ತಾಂತ್ರಿಕ ಸಲಹೆಗಾರರಾಗಿದ್ದಾರೆ.

ಟವರ್​​ನ ಕೆಳಭಾಗದಲ್ಲಿ ಒಟ್ಟು 40 ಫ್ಯಾನ್ ಗಳನ್ನು ಅಳವಡಿಸಲಾಗಿದೆ. ಗೋಪುರದ ಮೇಲ್ಭಾಗದಿಂದ ಗಾಳಿಯನ್ನು ಹೀರಿಕೊಳ್ಳಲಾಗುತ್ತದೆ, ಫಿಲ್ಟರ್ ಮಾಡಿ ಮತ್ತು ಕೆಳಭಾಗದಲ್ಲಿರುವ ಫ್ಯಾನ್ ಮೂಲಕ ಬಿಡುಗಡೆ ಮಾಡಲಾಗುತ್ತದೆ. ಪ್ರಾಯೋಗಿಕ ಅಧ್ಯಯನದ ಪ್ರವೃತ್ತಿಗಳು ಒಂದು ತಿಂಗಳಲ್ಲಿ ಲಭ್ಯವಾಗಬಹುದು ಎಂದು ಕೇಜ್ರಿವಾಲ್ ಹೇಳಿದರು.

ಇದನ್ನೂ ಓದಿ:  ನಾವು ಮುಂದಿನ ಚುನಾವಣೆಯನ್ನು ಜತೆಯಾಗಿ ಎದುರಿಸಲಿದ್ದೇವೆ: ಮಲ್ಲಿಕಾರ್ಜುನ ಖರ್ಗೆ

ಇದನ್ನೂ ಓದಿ: Panjshir: ತಾಲಿಬಾನ್ ಪಾಲಿಗೆ ಈವರೆಗೆ ಸವಾಲಾಗಿಯೇ ಉಳಿದಿರುವ ಅಫ್ಘಾನಿಸ್ತಾನದ ಪ್ರತಿರೋಧದ ಕಣಿವೆ ಪಂಜ್​ಶೀರ್​

(Delhi Chief Minister Arvind Kejriwal inaugurates India’s first smog tower in Delhi)

Published On - 6:16 pm, Mon, 23 August 21

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ