Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಅವರ ಕನಸಾಗಿತ್ತು; ಶಾಲೆ ಉದ್ಘಾಟನೆ ಸಮಾರಂಭದಲ್ಲಿ ಸಿಸೋಡಿಯಾ ನೆನೆದು ಭಾವುಕರಾದ ಕೇಜ್ರಿವಾಲ್

ಪ್ರತಿ ಮಗುವಿಗೆ ಗುಣಮಟ್ಟದ ಶಿಕ್ಷಣದ ಪ್ರಾಮುಖ್ಯತೆಯನ್ನು ಪುನರುಚ್ಚರಿಸಿದ ಕೇಜ್ರಿವಾಲ್, ಬಿಜೆಪಿ ನಮ್ಮ ಸಚಿವರನ್ನು ಬಂಧಿಸುವ ಮೂಲಕ ಕ್ರಾಂತಿಯನ್ನು ತಡೆಯಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಇದು ಅವರ ಕನಸಾಗಿತ್ತು; ಶಾಲೆ ಉದ್ಘಾಟನೆ ಸಮಾರಂಭದಲ್ಲಿ ಸಿಸೋಡಿಯಾ ನೆನೆದು ಭಾವುಕರಾದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್
Follow us
ರಶ್ಮಿ ಕಲ್ಲಕಟ್ಟ
|

Updated on: Jun 07, 2023 | 5:34 PM

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಬುಧವಾರ ನಗರದ ಬವಾನಾ ಪ್ರದೇಶದಲ್ಲಿ ಹೊಸ ಶಾಲೆಯೊಂದರ ಉದ್ಘಾಟನೆಯ ಸಂದರ್ಭದಲ್ಲಿ ತಮ್ಮ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia )ಅವರನ್ನು ನೆನಪಿಸಿಕೊಂಡು ಭಾವುಕರಾದರು. ದೆಹಲಿಯ (Delhi) ಶಾಲಾ ವಿದ್ಯಾರ್ಥಿಗಳ ಶಿಕ್ಷಣವು ಸಿಸೋಡಿಯಾ ಅವರ ಕನಸಾಗಿದೆ ಎಂದು ಕೇಜ್ರಿವಾಲ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಆಮ್ ಆದ್ಮಿ ಪಕ್ಷದ ನಾಯಕ ಸಿಸೋಡಿಯಾ ದೆಹಲಿ ಮದ್ಯದ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತಿಹಾರ್ ಜೈಲಿನಲ್ಲಿದ್ದಾರೆ. ಮಾರ್ಚ್‌ನಲ್ಲಿ ಬಂಧನದ ನಂತರ ಅವರು ರಾಜೀನಾಮೆ ನೀಡುವವರೆಗೂ ದೆಹಲಿಯ ಶಿಕ್ಷಣ ಸಚಿವರಾಗಿದ್ದರು.

ಆ ಜನರು ದೆಹಲಿಯ ಶಿಕ್ಷಣ ಕ್ರಾಂತಿಯು ಕೊನೆಗೊಳ್ಳಬೇಕೆಂದು ಬಯಸುತ್ತಾರೆ. ನಾವು ಅದನ್ನು ಕೊನೆಗೊಳಿಸಲು ಬಿಡುವುದಿಲ್ಲ. ಸಿಸೋಡಿಯಾರಂಥಾ ಒಳ್ಳೆಯ ವ್ಯಕ್ತಿಯನ್ನು ಸುಳ್ಳು ಆರೋಪ ಮಾಡಿ ಸುಳ್ಳು ಕೇಸು ದಾಖಲಿಸಿ ಜೈಲಿನಲ್ಲಿಟ್ಟಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಏಪ್ರಿಲ್‌ನಲ್ಲಿ ಕೇಜ್ರಿವಾಲ್ ಅವರು ಸಿಸೋಡಿಯಾ ಅವರನ್ನು ‘ದೆಹಲಿಯ ಶಿಕ್ಷಣ ಕ್ರಾಂತಿಯ ವಾಸ್ತುಶಿಲ್ಪಿ’ ಎಂದಿದ್ದು ಅವರು ಅಪ್ಪಟ ಪ್ರಾಮಾಣಿಕ ವ್ಯಕ್ತಿ ಎಂದಿದ್ದರು. ಪ್ರತಿ ಮಗುವಿಗೆ ಗುಣಮಟ್ಟದ ಶಿಕ್ಷಣದ ಪ್ರಾಮುಖ್ಯತೆಯನ್ನು ಪುನರುಚ್ಚರಿಸಿದ ಕೇಜ್ರಿವಾಲ್, ಬಿಜೆಪಿ ನಮ್ಮ ಸಚಿವರನ್ನು ಬಂಧಿಸುವ ಮೂಲಕ ಕ್ರಾಂತಿಯನ್ನು ತಡೆಯಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ದೆಹಲಿಯ ಬವಾನಾ ಪ್ರದೇಶದಲ್ಲಿ ಅಸ್ತಿತ್ವದಲ್ಲಿರುವ ಶಾಲೆಯ ಹೀನಾಯ ಸ್ಥಿತಿಯ ಕುರಿತು ಮಾತನಾಡಿದ ಕೇಜ್ರಿವಾಲ್, ಆ ಗುಣಮಟ್ಟವನ್ನು ಸುಧಾರಿಸಲು ತಮ್ಮ ಸರ್ಕಾರವು ಶ್ರದ್ಧೆಯಿಂದ ಕೆಲಸ ಮಾಡಿದೆ ನಾನು ಬವಾನಾಗೆ ಹಲವಾರು ಸಂದರ್ಭಗಳಲ್ಲಿ ಬಂದಿದ್ದೇನೆ. ಇಲ್ಲಿನ ಶಾಲೆಯ ದುಃಸ್ಥಿತಿಯನ್ನು ನಾನು ಕಣ್ಣಾರೆ ಕಂಡಿದ್ದೇನೆ. ಇಂದು ಎರಡು ಶಾಲೆಗಳೊಂದಿಗೆ ನನ್ನ ಭರವಸೆಯ ಈಡೇರಿಸಿ ನಾನು ನಿಮ್ಮ ಮುಂದೆ ನಿಂತಿದ್ದೇನೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು