AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಸ್​​ ಮೇಲೆ ಹಲ್ಲೆ ನಡೆದ ಪ್ರಕರಣ; ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ಗೆ ಕೋರ್ಟ್​​ನಿಂದ ನೋಟಿಸ್​​

2018ರಲ್ಲಿ ಟಿವಿ ಜಾಹೀರಾತು ಕುರಿತು ವಿಷಯ ಚರ್ಚಿಸಲು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ನಿವಾಸದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಅಂದಿನ ಸಿಎಸ್​ ಆಗಿದ್ದ ಅಂಶು ಪ್ರಕಾಶ್​ ಮೇಲೆ ಆಪ್​ ಶಾಸಕರು ಹಲ್ಲೆ ನಡೆಸಿದ್ದರು.

ಸಿಎಸ್​​ ಮೇಲೆ ಹಲ್ಲೆ ನಡೆದ ಪ್ರಕರಣ; ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ಗೆ ಕೋರ್ಟ್​​ನಿಂದ ನೋಟಿಸ್​​
ಅರವಿಂದ್ ಕೇಜ್ರಿವಾಲ್​
TV9 Web
| Edited By: |

Updated on: Nov 01, 2021 | 5:14 PM

Share

ದೆಹಲಿ ಮಾಜಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್​ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ  ದೆಹಲಿಯ ರೋಸ್​ ಅವೆನ್ಯೂ ಜಿಲ್ಲಾ ನ್ಯಾಯಾಲಯ ಇದೀಗ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​, ಡೆಪ್ಯೂಟಿ ಸಿಎಂ ಮನೀಶ್​ ಸಿಸೋಡಿಯಾ ಮತ್ತು ಆಮ್​ ಆದ್ಮಿ ಪಕ್ಷದ  ಇತರರಿಗೆ ನೋಟಿಸ್​ ನೀಡಿದೆ. ವಿಶೇಷ ನ್ಯಾಯಾಧೀಶರಾದ ಗೀತಾಂಜಲಿ ಗೋಯೆಲ್​ ಈ ನೋಟಿಸ್​ ನೀಡಿದ್ದು, ಮುಂದಿನ ವಿಚಾರಣೆಯನ್ನು ನವೆಂಬರ್ 23ಕ್ಕೆ ಮುಂದೂಡಿದ್ದಾರೆ. 

ಅಂಶು ಪ್ರಕಾಶ್​ ಮೇಲೆ 2018ರಲ್ಲಿ ಹಲ್ಲೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಂಶು ಅವರು ನ್ಯಾಯಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​, ಮನೀಶ್ ಸಿಸೋಡಿಯಾ ಮತ್ತು ಇತರ 9 ಜನರಿಗೆ ಇದೇ ವರ್ಷ  ಆಗಸ್ಟ್​​ನಲ್ಲಿ ಕ್ಲೀನ್​ಚಿಟ್​ ಸಿಕ್ಕಿತ್ತು. ಆದರೆ ಆಪ್​ ಶಾಸಕರಾದ ಅಮಾನುತುಲ್ಲಾ ಖಾನ್​ ಮತ್ತು ಪ್ರಕಾಶ್​ ಜಾರ್ವಾಲ್​ ವಿರುದ್ಧ ಆರೋಪ ಮುಂದುವರಿದಿತ್ತು. ಅರವಿಂದ್ ಕೇಜ್ರಿವಾಲ್​ ಮತ್ತು ಮನೀಶ್​ ಸಿಸೋಡಿಯಾ, ಉಳಿದ 9 ಮಂದಿಯನ್ನು ಆರೋಪ ಮುಕ್ತಗೊಳಿಸಿದ ಕ್ರಮ ಪ್ರಶ್ನಿಸಿ ಮತ್ತೆ ಅಂಶು ಅರ್ಜಿ ಸಲ್ಲಿಸಿದ್ದರು.

2018ರಲ್ಲಿ ಟಿವಿ ಜಾಹೀರಾತು ಕುರಿತು ವಿಷಯ ಚರ್ಚಿಸಲು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ನಿವಾಸದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಅಂದಿನ ಸಿಎಸ್​ ಆಗಿದ್ದ ಅಂಶು ಪ್ರಕಾಶ್​ ಮೇಲೆ ಆಪ್​ ಶಾಸಕರು ಹಲ್ಲೆ ನಡೆಸಿದ್ದರು. ಅವರ ತುಟಿ, ಕಿವಿಗೆ ಗಾಯಗಳಾಗಿದ್ದವು. ಅದಾದ ಬಳಿಕ ಐಎಎಸ್​ ಅಧಿಕಾರಿಗಳ ಒಕ್ಕೂಟವೂ ಪ್ರತಿಭಟನೆ ನಡೆಸಿತ್ತು.  ಈ ಪ್ರಕರಣ ಮೆಟ್ರೋಪಾಲಿಟಿನ್​ ಮ್ಯಾಜಿಸ್ಟ್ರೇಟ್​ ಕೋರ್ಟ್​ ಮೆಟ್ಟಿಲೇರಿತ್ತು. ಇದೀಗ ಮತ್ತೆ ಹೊಸದಾಗಿ ಅರ್ಜಿ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ: T20 World Cup: ಮಾತಿನ ಮೇಲೆ ನಿಲ್ಲದ ಕೊಹ್ಲಿ! ತಂಡದ ಕಳಪೆ ಪ್ರದರ್ಶನಕ್ಕೆ ಕೊಹ್ಲಿ ಎಡವಟ್ಟು ನಿರ್ಧಾರಗಳೇ ಕಾರಣ?

ನಮಗೆ ಹಿರಿಯರು, ಆದ್ರೆ ಹೋರಾಟ ಇನ್ನೂ ಯುವಕರಂತೆ: ವಾಟಾಳ್ ನಾಗರಾಜ್​ರನ್ನು ಹೊಗಳಿದ ಸಿಎಂ ಬೊಮ್ಮಾಯಿ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ