AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ವಾಯು ಮಾಲಿನ್ಯದಿಂದ ಹದಗೆಟ್ಟಿತು ಸೋನಿಯಾ ಆರೋಗ್ಯ

ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಮಿತಿಮೀರುತ್ತ್ತಿದ್ದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರ ಮೇಲೆ ಅದರ ದುಷ್ಪರಿಣಾಮ ಜಾಸ್ತಿಯಾಗಿರುವಂತಿದೆ . ಮೊದಲೇ ಅಸ್ತಮಾ, ಎದೆಯ ಸೋಂಕಿನಿಂದ ಬಳಲುತ್ತಿರುವ ಸೋನಿಯಾಗೆ ವೈದ್ಯರು ದೆಹಲಿ ತೊರೆಯಲು ಸೂಚಿಸಿದ್ದಾರೆ. ಸಲಹೆಯನ್ನು ಗಂಭೀರವಾಗಿಯೇ ಪರಿಗಣಿಸಿರುವ 73 ವರ್ಷದ ಕಾಂಗ್ರೆಸ್ ಅಧ್ಯಕ್ಷೆ ದಕ್ಷಿಣ ಗೋವಾದ ಖಾಸಗಿ ರೆಸಾರ್ಟ್ ಒಂದಕ್ಕೆ ಶಿಫ್ಟ್ ಆಗಿದ್ದಾರೆ. ರಾಹುಲ್ ಗಾಂಧಿ ಸಹ ತಾಯಿಯೊಂದಿಗೆ ಗೋವಾಗೆ ಬಂದಿಳಿದಿದ್ದಾರೆ. ದೇಶದ ಅತ್ಯಂತ ಪ್ರಭಾವಿ ರಾಜಕಾರಣಿ, ಸೋನಿಯಾ ಅವರಂಥವರಿಗೆ ದೆಹಲಿಯಲ್ಲಿ ವಾಸಿಸಲು ಸಾಧ್ಯವಾಗುತ್ತಿಲ್ಲವಾದರೆ ಜನಸಾಮಾನ್ಯರ ಗತಿಯೇನು ಎಂಬ […]

ದೆಹಲಿ ವಾಯು ಮಾಲಿನ್ಯದಿಂದ ಹದಗೆಟ್ಟಿತು ಸೋನಿಯಾ ಆರೋಗ್ಯ
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 21, 2020 | 10:06 PM

Share

ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಮಿತಿಮೀರುತ್ತ್ತಿದ್ದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರ ಮೇಲೆ ಅದರ ದುಷ್ಪರಿಣಾಮ ಜಾಸ್ತಿಯಾಗಿರುವಂತಿದೆ . ಮೊದಲೇ ಅಸ್ತಮಾ, ಎದೆಯ ಸೋಂಕಿನಿಂದ ಬಳಲುತ್ತಿರುವ ಸೋನಿಯಾಗೆ ವೈದ್ಯರು ದೆಹಲಿ ತೊರೆಯಲು ಸೂಚಿಸಿದ್ದಾರೆ. ಸಲಹೆಯನ್ನು ಗಂಭೀರವಾಗಿಯೇ ಪರಿಗಣಿಸಿರುವ 73 ವರ್ಷದ ಕಾಂಗ್ರೆಸ್ ಅಧ್ಯಕ್ಷೆ ದಕ್ಷಿಣ ಗೋವಾದ ಖಾಸಗಿ ರೆಸಾರ್ಟ್ ಒಂದಕ್ಕೆ ಶಿಫ್ಟ್ ಆಗಿದ್ದಾರೆ. ರಾಹುಲ್ ಗಾಂಧಿ ಸಹ ತಾಯಿಯೊಂದಿಗೆ ಗೋವಾಗೆ ಬಂದಿಳಿದಿದ್ದಾರೆ.

ದೇಶದ ಅತ್ಯಂತ ಪ್ರಭಾವಿ ರಾಜಕಾರಣಿ, ಸೋನಿಯಾ ಅವರಂಥವರಿಗೆ ದೆಹಲಿಯಲ್ಲಿ ವಾಸಿಸಲು ಸಾಧ್ಯವಾಗುತ್ತಿಲ್ಲವಾದರೆ ಜನಸಾಮಾನ್ಯರ ಗತಿಯೇನು ಎಂಬ ಪ್ರಶ್ನೆ ಉದ್ಭವಿಸಿದೆ. ಅಸ್ತಮಾ, ಉಸಿರಾಟದ ತೊಂದರೆ ಮತ್ತು ಇತರ ಅನಾರೋಗ್ಯಗಳಿಂದ ಬಳಲುತ್ತಿರುವ ಹಿರಿಯ ನಾಗರಿಕರು ಅನುಭವಿಸುತ್ತಿರಬಹುದಾದ ಪಾಡನ್ನು ದೆಹಲಿ ಮತ್ತು ಕೇಂದ್ರ ಸರ್ಕಾರಗಳು ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡುತ್ತಿವೆಯೇ?

ಮುಂದಿದೆ ಎಲೆಕ್ಷನ್ ಜಾತ್ರೆ!

2021ರಲ್ಲಿ ಒಟ್ಟು 5 ರಾಜ್ಯಗಳಿಗೆ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆಯಿದೆ. ಬಿಜೆಪಿ ಈಗಿಂದಲೇ ಪ್ರಚಾರ ತಂತ್ರ ಹೆಣೆಯುತ್ತಿದೆ. ಆದರೆ, ಸೋನಿಯಾ ಅನಾರೋಗ್ಯ, ಕಾಂಗ್ರೆಸ್ ಸ್ಥಿತಿಯನ್ನು ಇನ್ನಷ್ಟು ಕರುಣಾಜನಕವಾಗಿಸಲಿರುವುದು ಸುಳ್ಳಲ್ಲ.

ದೆಹಲಿಯ ವಾಯುಮಾಲಿನ್ಯವನ್ನು ಗಮನಿಸಿದ ಹೈಕೋರ್ಟ್ ವಾಹನ ದಟ್ಟಣೆ ಕಡಿಮೆ ಮಾಡಲು ಮತ್ತು ಪಾರ್ಕಿಂಗ್ ನೀತಿ ಜಾರಿಗೆ ತರಲು ಸೂಚಿಸಿತ್ತು. ಸಾರ್ವಜನಿಕ ಸಾರಿಗೆಗಳ ಸಂಖ್ಯೆಯನ್ನು ಹೆಚ್ಚಿಸಲು ಸಹ ಸೂಚಿಸಿತ್ತು. ಹಿಂದೆ, ದೆಹಲಿ ಸರ್ಕಾರ ಸಮ-ಬೆಸ ಸಂಖ್ಯೆಯಲ್ಲಿ ವಾಹನಗಳನ್ನು ರೋಡಿಗಿಳಿಸುವ  ನಿಯಮವನ್ನೂ ಜಾರಿಗೆ ತಂದಿತ್ತು. ಆದರೆ ವಾಹನಗಳ ಸಂಖ್ಯೆ ಪ್ರತಿದಿನ ಹೆಚ್ಚುತ್ತಿರುವ ದೆಹಲಿಯಲ್ಲಿ ವಾಯು ಮಾಲಿನ್ಯ ಕಡಿಮೆಯಾಗುವ ಲಕ್ಷಣಗಳು ಸದ್ಯಕ್ಕಂತೂ ಇಲ್ಲ.

ದೆಹಲಿ ಆಸುಪಾಸಿನ ಪಂಜಾಬ್, ಹರಿಯಾಣದ ರೈತರು ಭತ್ತದ ತ್ಯಾಜ್ಯವನ್ನು ಸುಡುತ್ತಿರುವುದು ಸಹ ದೆಹಲಿಯಲ್ಲಿ ಅಪಾರ ಪ್ರಮಾಣದ ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಅಲ್ಲದೆ, ದೆಹಲಿಯ ಸುತ್ತಲಿನ ಕಾರ್ಖಾನೆ ಮತ್ತು ವಿದ್ಯುತ್ ಸ್ಥಾವರಗಳು ಉಗುಳುವ ಹೊಗೆಯೂ ಮಾಲಿನ್ಯವನ್ನು ಹೆಚ್ಚಿಸುತ್ತಿವೆ.  ಕೃಷಿ ತ್ಯಾಜ್ಯಕ್ಕೆ ಬೆಂಕಿಯಿಟ್ಟ 121  ರೈತರಿಂದ ರೂ. 3 ಲಕ್ಷ ದಂಡ ಹಾಗೂ 59 ರೈತರ ವಿರುದ್ಧ ಎಫ್ಐಆರ್​ಗಳನ್ನು ಪೋಲೀಸರು ದಾಖಲಿಸಿದ್ದರೂ  ಕೃಷಿ ತ್ಯಾಜ್ಯ ಸುಡುವ ಪದ್ಧತಿಯನ್ನು ರೈತರು ಕೈಬಿಡುತ್ತಿಲ್ಲ.

Follow Us
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!