Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: 9ನೇ ತರಗತಿ ವಿದ್ಯಾರ್ಥಿಯನ್ನು ಅಪಹರಿಸಿ ಕೊಲೆ ಮಾಡಿದ ಸ್ನೇಹಿತರು

ಸ್ನೇಹಿತರೇ ತನ್ನ ಸ್ನೇಹಿತನನ್ನು ಅಪಹರಿಸಿ ಕೊಲೆ ಮಾಡಿರುವ ಘಟನೆ ನವದೆಹಲಿಯ ವಜೀರಾಬಾದ್ ಪ್ರದೇಶದಲ್ಲಿ ನಡೆದಿದೆ. ಸ್ನೇಹಿತರೆಂದರೆ ಪ್ರಾಣಕ್ಕೆ ಪ್ರಾಣ ಕೊಡುವವರು ಎಂದು ಹೇಳುತ್ತಾರೆ, ಆದರೆ ಪ್ರಾಣ ತೆಗೆದ ಇಂಥವರು ಎಂಥಾ ಸ್ನೇಹಿತರು. 9ನೇ ತರಗತಿ ವಿದ್ಯಾರ್ಥಿಯನ್ನು ಅಪಹರಿಸಿ ಫೋನ್ ಮೂಲಕ ಕುಟುಂಬದವರ ಬಳಿ 10 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಆದರೆ ಪ್ರಕರಣ ಭಾರಿ ತಿರುವು ಪಡೆದುಕೊಂಡಿದೆ. ಬಾಲಕನನ್ನು ಭಲ್ಸ್ವಾ ಸರೋವರದ ಬಳಿಯ ನಿರ್ಜನ ಸ್ಥಳಕ್ಕೆ ಕರೆದೊಯ್ದು, ಅಲ್ಲಿ ಹಲವು ಬಾರಿ ಇರಿದು, ಶವವನ್ನು ಎಸೆದು ಹೋಗಿದ್ದಾರೆ.

ದೆಹಲಿ: 9ನೇ ತರಗತಿ ವಿದ್ಯಾರ್ಥಿಯನ್ನು ಅಪಹರಿಸಿ ಕೊಲೆ ಮಾಡಿದ ಸ್ನೇಹಿತರು
ಕ್ರೈಂ
Follow us
ನಯನಾ ರಾಜೀವ್
|

Updated on: Mar 26, 2025 | 9:10 AM

ನವದೆಹಲಿ, ಮಾರ್ಚ್​ 26: ಸ್ನೇಹಿತರೇ ತನ್ನ ಸ್ನೇಹಿತನನ್ನು ಅಪಹರಿಸಿ ಕೊಲೆ ಮಾಡಿರುವ ಘಟನೆ ನವದೆಹಲಿಯ ವಜೀರಾಬಾದ್ ಪ್ರದೇಶದಲ್ಲಿ ನಡೆದಿದೆ. ಸ್ನೇಹಿತರೆಂದರೆ ಪ್ರಾಣಕ್ಕೆ ಪ್ರಾಣ ಕೊಡುವವರು ಎಂದು ಹೇಳುತ್ತಾರೆ, ಆದರೆ ಪ್ರಾಣ ತೆಗೆದ ಇಂಥವರು ಎಂಥಾ ಸ್ನೇಹಿತರು. 9ನೇ ತರಗತಿ ವಿದ್ಯಾರ್ಥಿಯನ್ನು ಅಪಹರಿಸಿ ಫೋನ್ ಮೂಲಕ ಕುಟುಂಬದವರ ಬಳಿ 10 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಆದರೆ ಪ್ರಕರಣ ಭಾರಿ ತಿರುವು ಪಡೆದುಕೊಂಡಿದೆ. ಬಾಲಕನನ್ನು ಭಲ್ಸ್ವಾ ಸರೋವರದ ಬಳಿಯ ನಿರ್ಜನ ಸ್ಥಳಕ್ಕೆ ಕರೆದೊಯ್ದು, ಅಲ್ಲಿ ಹಲವು ಬಾರಿ ಇರಿದು, ಶವವನ್ನು ಎಸೆದು ಹೋಗಿದ್ದಾರೆ.

ಮೃತನ ದೇಹದಲ್ಲಿ ಹಲವಾರು ಇರಿತದ ಗಾಯಗಳಿದ್ದು, ಇದು ಹಿಂಸಾತ್ಮಕ ದಾಳಿಯನ್ನು ಸೂಚಿಸುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆಯ ನಂತರ ದೆಹಲಿ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತರನ್ನು ಬಂಧಿಸಿದ್ದಾರೆ. ಅಪರಾಧದ ಹಿಂದಿನ ಉದ್ದೇಶ ಮತ್ತು ಹೆಚ್ಚಿನ ಜನರು ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೇಗಂಪುರ ಪ್ರದೇಶದಲ್ಲಿ ಮೂವರು ಅಪರಾಧಿಗಳನ್ನು ಬಂಧಿಸಿದ ಪೊಲೀಸರು ಮಾರ್ಚ್ 19 ರಂದು, ಬೇಗಂಪುರ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ದೆಹಲಿ ಪೊಲೀಸರು ಮೂವರು ಅಪರಾಧಿಗಳನ್ನು ಬಂಧಿಸಿದರು. ಕೆಲವು ಅಪರಾಧಿಗಳು ಕಾರಿನಲ್ಲಿ ಬರುತ್ತಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತು, ನಂತರ ಜಿಲ್ಲಾ ಪೊಲೀಸರು ಅವರಿಗಾಗಿ ಬಲೆ ಬೀಸಿದರು. ಅಪರಾಧಿಗಳು ಬಂದಾಗ, ಪೊಲೀಸರು ಅವರನ್ನು ತಡೆಯಲು ಪ್ರಯತ್ನಿಸಿದರು, ಆದರೆ ಅಪರಾಧಿಗಳು ತಂಡದ ಮೇಲೆ ಗುಂಡು ಹಾರಿಸಿದರು.

ಮತ್ತಷ್ಟು ಓದಿ: ರೈಲ್ವೆ ನಿಲ್ದಾಣದಲ್ಲಿ ಬಾಲಕಿ ಮತ್ತವಳ ತಂದೆಯ ಹತ್ಯೆಗೈದು, ತಾನೂ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಹಲವಾರು ಸುತ್ತಿನ ಗುಂಡುಗಳು ವಿನಿಮಯವಾದವು ಮತ್ತು ಇಬ್ಬರು ಅಪರಾಧಿಗಳು ಗಾಯಗೊಂಡರು ಮತ್ತು ಅವರ ಕಾಲುಗಳಲ್ಲಿ ಗುಂಡೇಟಿನ ಗಾಯಗಳಿದ್ದವು. ಒಟ್ಟು ಮೂವರು ಅಪರಾಧಿಗಳನ್ನು ಬಂಧಿಸಲಾಗಿದ್ದು, ಅವರೆಲ್ಲರ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಕಳ್ಳತನ, ದರೋಡೆ, ಲೂಟಿ ಮತ್ತು ವಾಹನ ಕಳ್ಳತನ ಸೇರಿದಂತೆ ಹಲವಾರು ಅಪರಾಧಗಳಿಗೆ ಈ ವ್ಯಕ್ತಿಗಳು ಕಾರಣರಾಗಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಆರೋಪಿಗಳು ಬಳಸುತ್ತಿದ್ದ ಕಾರನ್ನು ನೇತಾಜಿ ಸುಭಾಷ್ ಪ್ಲೇಸ್‌ನಿಂದ ಕದ್ದಿದ್ದಾರೆ ಎಂದು ಅಧಿಕಾರಿ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು