ಲೆಫ್ಟಿನೆಂಟ್ ಗವರ್ನರ್, ದೆಹಲಿ ಮುಖ್ಯಮಂತ್ರಿ ಪರಸ್ಪರ ರಾಜಕೀಯ ಕಚ್ಚಾಟ ಬಿಡಬೇಕು: ಸುಪ್ರೀಂಕೋರ್ಟ್

ಆಮ್ ಆದ್ಮಿ ಪಕ್ಷದ ಸರ್ಕಾರದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಡಿಇಆರ್‌ಸಿಗೆ ಮುಖ್ಯಸ್ಥರೇ ಇಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ ನಂತರ ನ್ಯಾಯಾಲಯವು ಈ ಸಲಹೆಯನ್ನು ನೀಡಿದೆ.

ಲೆಫ್ಟಿನೆಂಟ್ ಗವರ್ನರ್, ದೆಹಲಿ ಮುಖ್ಯಮಂತ್ರಿ ಪರಸ್ಪರ ರಾಜಕೀಯ ಕಚ್ಚಾಟ ಬಿಡಬೇಕು: ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Follow us
|

Updated on:Jul 17, 2023 | 3:06 PM

ದೆಹಲಿ ಜುಲೈ17: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal)  ಮತ್ತು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ (VK Saxena) ಇಬ್ಬರೂ ರಾಜಕೀಯ ಕಚ್ಚಾಟ ಬಿಡಬೇಕು ಎಂದು ಸುಪ್ರೀಂಕೋರ್ಟ್ (Supreme Court) ಹೇಳಿದ್ದು ಕೇಂದ್ರದ ವಿವಾದಾತ್ಮಕ ಸುಗ್ರೀವಾಜ್ಞೆಗೆ ಸಂಬಂಧಿಸಿದ ಜಗಳ  ಪರಿಹರಿಸುವಂತೆ ಸಲಹೆಯನ್ನು ನೀಡಿತು. ಬಿಕ್ಕಟ್ಟನ್ನು ಪರಿಹರಿಸಲು ನಾವು ಸಲಹೆಯನ್ನು ನೀಡುತ್ತೇವೆ. ಎಲ್‌ಜಿ ಮತ್ತು ಸಿಎಂ ಕುಳಿತು ಒಪ್ಪುವ ಅಭ್ಯರ್ಥಿಯನ್ನು ನೀಡಬಹುದೇ? ಹಾಗಾದರೆ ಆ ವ್ಯಕ್ತಿಯನ್ನು ಡಿಇಆರ್‌ಸಿ (ದೆಹಲಿ ವಿದ್ಯುತ್ ನಿಯಂತ್ರಣ ಆಯೋಗ) ಗೆ ನೇಮಿಸಬಹುದು” ಎಂದು ನ್ಯಾಯಾಲಯ ಹೇಳಿದೆ.

ಆಮ್ ಆದ್ಮಿ ಪಕ್ಷದ ಸರ್ಕಾರದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಡಿಇಆರ್‌ಸಿಗೆ ಮುಖ್ಯಸ್ಥರೇ ಇಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ ನಂತರ ನ್ಯಾಯಾಲಯವು ಈ ಸಲಹೆಯನ್ನು ನೀಡಿದೆ.

ಸುಗ್ರೀವಾಜ್ಞೆಗೆ ಬದಲಾಗಿ ಮುಂಬರುವ ಸಂಸತ್ತಿನ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಾಗುವುದು ಎಂದು ಕೇಂದ್ರವು ಅಫಿಡವಿಟ್ ಸಲ್ಲಿಸಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದರು.

DERC ಅಧ್ಯಕ್ಷರ ನೇಮಕಾತಿ ಈ ಪ್ರಕರಣವು ಸುಗ್ರೀವಾಜ್ಞೆಯ ಒಂದು ವಿಭಾಗಕ್ಕೆ ಸಂಬಂಧಿಸಿದೆ. ಇಡೀ ಸುಗ್ರೀವಾಜ್ಞೆಯನ್ನು ಪ್ರಶ್ನಿಸುವ ಎರಡನೇ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ನಡೆಸಿದ್ದು, ನೋಟಿಸ್ ಜಾರಿ ಮಾಡಿ ಮತ್ತು ವಿಷಯವನ್ನು ಸಂವಿಧಾನ ಪೀಠಕ್ಕೆ ಕಳುಹಿಸುತ್ತದೆ. ಸುಪ್ರೀಂಕೋರ್ಟ್ ಪ್ರಕರಣದ ಮುಂದಿನ ವಿಚಾರಣೆಯನ್ನು ಗುರುವಾರ ನಡೆಸಲಿದೆ.

ಇದನ್ನೂ ಓದಿ: ರಾಜ್ಯಸಭೆಗೆ ಎಸ್ ಜೈಶಂಕರ್, ಡೆರೆಕ್ ಓಬ್ರಿಯಾನ್ ಸೇರಿದಂತೆ 11 ಮಂದಿ ಅವಿರೋಧ ಆಯ್ಕೆ

ಆಮ್ ಆದ್ಮಿ ಪಕ್ಷ (ಎಎಪಿ) ಈ ವಿಷಯದ ಬಗ್ಗೆ ಕಾಂಗ್ರೆಸ್ ಬೆಂಬಲವನ್ನು ಪಡೆದುಕೊಂಡಿದ್ದರೂ ಸಹ, ಕೇಂದ್ರವು ರಾಜ್ಯಸಭೆಯ ಮೂಲಕ ತನ್ನ ಸುಗ್ರೀವಾಜ್ಞೆಯನ್ನು ಜಾರಿ ಮಾಡುವಲ್ಲಿ ಯಾವುದೇ ತೊಂದರೆ ಎದುರಿಸುವ ಸಾಧ್ಯತೆಯಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:56 pm, Mon, 17 July 23

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ