AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದುವರೆದ ಮಳೆ, ನಾಳೆ ದೆಹಲಿಯಲ್ಲಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದ ಸಿಎಂ ಅರವಿಂದ್ ಕೇಜ್ರಿವಾಲ್​

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ನಾಳೆಯೂ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹಾಗಾಗಿ ನಾಳೆ ದೆಹಲಿಯಲ್ಲಿನ ಎಲ್ಲಾ ಶಾಲೆಗಳಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಜೆ ಘೋಷಿಸಿದ್ದಾರೆ.

ಮುಂದುವರೆದ ಮಳೆ, ನಾಳೆ ದೆಹಲಿಯಲ್ಲಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದ ಸಿಎಂ ಅರವಿಂದ್ ಕೇಜ್ರಿವಾಲ್​
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jul 09, 2023 | 7:24 PM

Share

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ನಾಳೆಯೂ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹಾಗಾಗಿ ನಾಳೆ ದೆಹಲಿಯಲ್ಲಿನ ಎಲ್ಲಾ ಶಾಲೆಗಳಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ರಜೆ ಘೋಷಿಸಿದ್ದಾರೆ. ನಗರದ ಪ್ರಾಥಮಿಕ ಹವಾಮಾನ ಕೇಂದ್ರವಾದ ಸಫ್ದರ್‌ಜಂಗ್ ವೀಕ್ಷಣಾಲಯವು ಭಾನುವಾರ ಬೆಳಿಗ್ಗೆ ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 153 ಮಿಮೀ ದಾಖಲೆಯ ಮಳೆಯಾಗಿದ್ದು, 1982 ರ ಬಳಿಕ ಜುಲೈನಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಉತ್ತರಾಖಂಡ್, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಕರಾವಳಿ ಕರ್ನಾಟಕ ಮತ್ತು ಗುಜರಾತ್​ನ ಹಲವು ಪ್ರದೇಶಗಳಲ್ಲಿಯೂ ಸಾಕಷ್ಟು ಮಳೆಯಾಗಿದೆ. ಹಾಗಾಗಿ ಎಲ್ಲಾ ಸರ್ಕಾರಿ ಅಧಿಕಾರಿಗಳ ಭಾನುವಾರದ ರಜೆಯನ್ನು ರದ್ದುಗೊಳಿಸಿ ಕೆಲಸಕ್ಕೆ ಹಾಜರಾಗುವಂತೆ ಸಿಎಂ ಅರವಿಂದ್ ಕೇಜ್ರಿವಾಲ್​ ಸೂಚಿಸಿದ್ದರು.

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತು ಹವಾಮಾನ ಇಲಾಖೆಯ ಎಚ್ಚರಿಕೆಗಳನ್ನು ಗಮನದಲ್ಲಿಟ್ಟುಕೊಂಡು, ಸೋಮವಾರ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತಾಗಿ ಸಿಎಂ ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Jammu And Kashmir Flood: ಪೂಂಚ್​ನಲ್ಲಿ ಸಂಭವಿಸಿದ ಪ್ರವಾಹದಲ್ಲಿ ಕೊಚ್ಚಿ ಹೋದ ಇಬ್ಬರು ಸೈನಿಕರು

8:30 ಕ್ಕೆ ಕೊನೆಗೊಂಡ 24-ಗಂಟೆಗಳ ಅವಧಿಯಲ್ಲಿ 153 ಮಿಮೀ ಮಳೆಯನ್ನು ದಾಖಲಿಸಿದೆ, ಜುಲೈ 25, 1982 ರಂದು 24-ಗಂಟೆಗಳ ಮಳೆಯಾದ 169.9 ಮಿಮೀ ಮಳೆಯಾಗಿದೆ ಎಂದು ಹಿರಿಯ IMD ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?