ಮುಂದುವರೆದ ಮಳೆ, ನಾಳೆ ದೆಹಲಿಯಲ್ಲಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದ ಸಿಎಂ ಅರವಿಂದ್ ಕೇಜ್ರಿವಾಲ್​

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ನಾಳೆಯೂ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹಾಗಾಗಿ ನಾಳೆ ದೆಹಲಿಯಲ್ಲಿನ ಎಲ್ಲಾ ಶಾಲೆಗಳಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಜೆ ಘೋಷಿಸಿದ್ದಾರೆ.

ಮುಂದುವರೆದ ಮಳೆ, ನಾಳೆ ದೆಹಲಿಯಲ್ಲಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದ ಸಿಎಂ ಅರವಿಂದ್ ಕೇಜ್ರಿವಾಲ್​
ಪ್ರಾತಿನಿಧಿಕ ಚಿತ್ರ
Follow us
|

Updated on: Jul 09, 2023 | 7:24 PM

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ನಾಳೆಯೂ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹಾಗಾಗಿ ನಾಳೆ ದೆಹಲಿಯಲ್ಲಿನ ಎಲ್ಲಾ ಶಾಲೆಗಳಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ರಜೆ ಘೋಷಿಸಿದ್ದಾರೆ. ನಗರದ ಪ್ರಾಥಮಿಕ ಹವಾಮಾನ ಕೇಂದ್ರವಾದ ಸಫ್ದರ್‌ಜಂಗ್ ವೀಕ್ಷಣಾಲಯವು ಭಾನುವಾರ ಬೆಳಿಗ್ಗೆ ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 153 ಮಿಮೀ ದಾಖಲೆಯ ಮಳೆಯಾಗಿದ್ದು, 1982 ರ ಬಳಿಕ ಜುಲೈನಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಉತ್ತರಾಖಂಡ್, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಕರಾವಳಿ ಕರ್ನಾಟಕ ಮತ್ತು ಗುಜರಾತ್​ನ ಹಲವು ಪ್ರದೇಶಗಳಲ್ಲಿಯೂ ಸಾಕಷ್ಟು ಮಳೆಯಾಗಿದೆ. ಹಾಗಾಗಿ ಎಲ್ಲಾ ಸರ್ಕಾರಿ ಅಧಿಕಾರಿಗಳ ಭಾನುವಾರದ ರಜೆಯನ್ನು ರದ್ದುಗೊಳಿಸಿ ಕೆಲಸಕ್ಕೆ ಹಾಜರಾಗುವಂತೆ ಸಿಎಂ ಅರವಿಂದ್ ಕೇಜ್ರಿವಾಲ್​ ಸೂಚಿಸಿದ್ದರು.

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತು ಹವಾಮಾನ ಇಲಾಖೆಯ ಎಚ್ಚರಿಕೆಗಳನ್ನು ಗಮನದಲ್ಲಿಟ್ಟುಕೊಂಡು, ಸೋಮವಾರ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತಾಗಿ ಸಿಎಂ ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Jammu And Kashmir Flood: ಪೂಂಚ್​ನಲ್ಲಿ ಸಂಭವಿಸಿದ ಪ್ರವಾಹದಲ್ಲಿ ಕೊಚ್ಚಿ ಹೋದ ಇಬ್ಬರು ಸೈನಿಕರು

8:30 ಕ್ಕೆ ಕೊನೆಗೊಂಡ 24-ಗಂಟೆಗಳ ಅವಧಿಯಲ್ಲಿ 153 ಮಿಮೀ ಮಳೆಯನ್ನು ದಾಖಲಿಸಿದೆ, ಜುಲೈ 25, 1982 ರಂದು 24-ಗಂಟೆಗಳ ಮಳೆಯಾದ 169.9 ಮಿಮೀ ಮಳೆಯಾಗಿದೆ ಎಂದು ಹಿರಿಯ IMD ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ