AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Weekend Curfew: ಕೊರೊನಾ ತಡೆಗೆ ದೆಹಲಿಯಲ್ಲಿ ವೀಕೆಂಡ್​ ಕರ್ಫ್ಯೂ ಜಾರಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ತಡೆಗೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿ ಅಲ್ಲಿನ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

Delhi Weekend Curfew: ಕೊರೊನಾ ತಡೆಗೆ ದೆಹಲಿಯಲ್ಲಿ ವೀಕೆಂಡ್​ ಕರ್ಫ್ಯೂ ಜಾರಿ
ಅರವಿಂದ ಕೇಜ್ರಿವಾಲ್​
Skanda
|

Updated on:Apr 15, 2021 | 1:32 PM

Share

ದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು ಕೊವಿಡ್​ ಎರಡನೇ ಅಲೆಯ ಹೊಡೆತ ತಪ್ಪಿಸಿಕೊಳ್ಳಲು ವಿವಿಧ ರಾಜ್ಯಗಳು ಕಠಿಣ ನಿಯಮಗಳ ಮೊರೆ ಹೋಗುತ್ತಿವೆ. ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕೊರೊನಾ ತಡೆಗೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿ ಅಲ್ಲಿನ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಅವರು ದೆಹಲಿಯಲ್ಲಿ ವಾರಾಂತ್ಯದಲ್ಲಿ ಕರ್ಫ್ಯೂ ಜಾರಿಗೆ ನಿರ್ಧಾರ ಮಾಡಲಾಗಿದೆ. ಕರ್ಫ್ಯೂ ವೇಳೆ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಅತ್ಯಂತ ವೇಗವಾಗಿ ಹೆಚ್ಚಳವಾಗುತ್ತಿರುವುದರಿಂದ ವೀಕೆಂಡ್​ ಕರ್ಫ್ಯೂ ಜಾರಿಗೊಳಿಸುವ ನಿರ್ಧಾರಕ್ಕೆ ಬರಲಾಗಿದೆ. ಈ ಕ್ರಮದ ಮೂಲಕ ಕೊರೊನಾ ಸರಪಳಿಯನ್ನು ತುಂಡರಿಸುವ ವಿಶ್ವಾಸವಿದೆ. ದಯವಿಟ್ಟು ಜನರು ಜಾಗರೂಕರಾಗಿದ್ದು ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಈಗಾಗಲೇ ಮದುವೆ ಕಾರ್ಯಕ್ರಮಗಳನ್ನು ನಿಶ್ಚಯಿಸಿಕೊಂಡಿರುವವರಿಗೆ ವಿಶೇಷ ಅನುಮತಿ ನೀಡಲಾಗುವುದು. ಮಾರುಕಟ್ಟೆಗಳಲ್ಲಿ ಕೊರೊನಾ ನಿಯಮಾವಳಿಗಳನ್ನು ಪಾಲಿಸುವಂತೆ ವಿಶೇಷ ವ್ಯವಸ್ಥೆ ರೂಪಿಸಲಾಗುವುದು. ರೆಸ್ಟೋರೆಂಟ್​ಗಳಲ್ಲಿ ಅಲ್ಲಿಯೇ ಊಟ ಮಾಡುವುದಕ್ಕೆ ಅವಕಾಶ ಇರುವುದಿಲ್ಲ. ಜೊತೆಗೆ, ಮಾಸ್ಕ್​ ಧರಿಸುವುದಕ್ಕೆ ಸಂಬಂಧಿಸಿದಂತೆ ಹೊಸ ಕಾನೂನನ್ನೇ ಜಾರಿಗೊಳಿಸಲಿದ್ದೇವೆ ಎನ್ನುವುದಾಗಿ ಮಾಹಿತಿ ನೀಡಿದ್ದಾರೆ.

ವೀಕೆಂಡ್ ಕರ್ಫ್ಯೂ ವೇಳೆ ಅಗತ್ಯ ಸೇವೆಗಳಿಗೆ ಅವಕಾಶ ನೀಡಲಾಗುವುದು. ಆದರೆ ಮಾರ್ಕೆಟ್, ಮಾಲ್, ಜಿಮ್‌ಗಳು ಬಂದ್ ಆಗಲಿವೆ. ಥಿಯೇಟರ್‌ಗಳಲ್ಲಿ ಶೇ.30ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶವಿದೆ. ಹೋಟೆಲ್, ರೆಸ್ಟೋರೆಂಟ್‌ನಲ್ಲಿ ಪಾರ್ಸೆಲ್‌ಗೆ ಮಾತ್ರ ಅನುಮತಿ ಇದೆ. ಮದುವೆಗಳಲ್ಲಿ ಭಾಗಿಯಾಗುವುದಕ್ಕೆ ಪಾಸ್ ಕಡ್ಡಾಯವಾಗಲಿದೆ. ಶುಕ್ರವಾರ ರಾತ್ರಿಯಿಂದಲೇ ವೀಕೆಂಡ್ ಕರ್ಫ್ಯೂ ಜಾರಿಗೊಳ್ಳಲಿದ್ದು, ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಗ್ಗೆ 6ರವರೆಗೆ ಇರಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇದೇ ವೇಳೆಯಲ್ಲಿ, ದೆಹಲಿಯಲ್ಲಿ ಕೊರೊನಾ ಸೋಂಕಿತರಿಗೆ ಬೆಡ್ ಕೊರತೆ ಇಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಸೋಂಕು ಹೆಚ್ಚಿರುವ ಕಡೆ ನೈಟ್​ ಕರ್ಫ್ಯೂ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿಕೆ 

ಕೊರೊನಾ ನಿಯಂತ್ರಣಕ್ಕೆ ಮತ್ತಷ್ಟು ಜಿಲ್ಲೆಗಳಿಗೆ ನೈಟ್​ ಕರ್ಫ್ಯೂ ವಿಸ್ತರಣೆ ಸಾಧ್ಯತೆ.. ಲಾಕ್​ಡೌನ್​ ಪ್ರಸ್ತಾಪ ಇಲ್ಲ: ಬಿ.ಎಸ್.ಯಡಿಯೂರಪ್ಪ

Published On - 1:14 pm, Thu, 15 April 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ