AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿಗಳ ಸಭೆಯಲ್ಲಿ ಶಿಷ್ಟಾಚಾರ ಮುರಿದ ಅರವಿಂದ್ ಕೇಜ್ರಿವಾಲ್; ಏನು ನಡೆಯುತ್ತಿದೆ ಎಂದು ಗದರಿದ ನರೇಂದ್ರ ಮೋದಿ

PM Narendra Modi: ಇದು ಸರಿಯಲ್ಲ, ನಾವು ಸದಾ ಸಂಯಮ ಪಾಲಿಸಬೇಕು ಎಂದು ಮೋದಿ ಹೇಳಿದಾಗ ಕೇಜ್ರಿವಾಲ್ ಕ್ಷಮೆಯಾಚಿಸಿದ್ದಾರೆ.  ಸರಿ ಸರ್, ಇನ್ನು ಮುಂದೆ ನಾನು ಈ ಬಗ್ಗೆ ಎಚ್ಚರ ವಹಿಸುತ್ತೇನೆ ಎಂದು ಕೇಜ್ರಿವಾಲ್ ಮಾತು ಮುಂದುವರಿಸಿದ್ದಾರೆ.

ಮುಖ್ಯಮಂತ್ರಿಗಳ ಸಭೆಯಲ್ಲಿ ಶಿಷ್ಟಾಚಾರ ಮುರಿದ ಅರವಿಂದ್ ಕೇಜ್ರಿವಾಲ್; ಏನು ನಡೆಯುತ್ತಿದೆ ಎಂದು ಗದರಿದ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on:Apr 23, 2021 | 4:35 PM

Share

ದೆಹಲಿ: ಕೊವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ 10 ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಭೆ ನಡೆಸಿದ್ದರು. ಈ ಸಭೆಯಲ್ಲಿ ಭಾಗವಹಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿಯಲ್ಲಿನ ಆಕ್ಸಿಜನ್ ಕೊರತೆ ಬಗ್ಗೆ ವಿವರಿಸಿದ್ದರು. ಈ ವೇಳೆ ಅವರು ಮಾತುಕತೆ ಟಿವಿಯಲ್ಲಿ ಪ್ರಸಾರವಾಗಿದೆ. ಕೋವಿಡ್ ವಿರುದ್ಧ ರಾಷ್ಟ್ರೀಯ ನೀತಿ ಇದ್ದರೆ ಕೇಂದ್ರ ಮತ್ತು ಎಲ್ಲಾ ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬಹುದು ಎಂಬುದು ನನ್ನ ನಂಬಿಕೆ. ನಮ್ಮ ಅಗಲಿದ ಆತ್ಮಗಳು.. ಇಷ್ಟು ಹೇಳುವಾಗ ಮೋದಿ ಪ್ರವೇಶಿಸಿದ್ದಾರೆ. ಅಲ್ಲಿ ಏನು ನಡೆಯುತ್ತಿದೆ? ಇದು ನಮ್ಮ ಸಂಸ್ಕೃತಿ, ಶಿಷ್ಟಾಚಾರಕ್ಕೆ ವಿರುದ್ಧವಾದುದು.ಕೆಲವು ಮುಖ್ಯಮಂತ್ರಿಗಳು ಖಾಸಗಿ ಸಭೆಯನ್ನು ನೇರ ಪ್ರಸಾರ ಮಾಡುತ್ತಿವೆ ಎಂದು ಮೋದಿ ಗದರಿದ್ದಾರೆ.

ಇದು ಸರಿಯಲ್ಲ, ನಾವು ಸದಾ ಸಂಯಮ ಪಾಲಿಸಬೇಕು ಎಂದು ಮೋದಿ ಹೇಳಿದಾಗ ಕೇಜ್ರಿವಾಲ್ ಕ್ಷಮೆಯಾಚಿಸಿದ್ದಾರೆ.  ಸರಿ ಸರ್, ಇನ್ನು ಮುಂದೆ ನಾನು ಈ ಬಗ್ಗೆ ಎಚ್ಚರ ವಹಿಸುತ್ತೇನೆ ಎಂದು ಕೇಜ್ರಿವಾಲ್ ಮಾತು ಮುಂದುವರಿಸಿದ್ದಾರೆ.

ನಮ್ಮನ್ನು ಅಗಲಿದ ಆತ್ಮಗಳು, ಕೊರೊನಾದಿಂದ ಮರಣ ಹೊಂದಿದವರು, ಅವರ ಕುಟುಂಬಗಳಿಗೆ ದುಃಖ ಸಹಿಸಿಕೊಳ್ಳುವ ಶಕ್ತಿಯನ್ನು ಪಡೆಯಲಿ. ನನ್ನ ಕಡೆಯಿಂದ ಏನಾದರೂ ತಪ್ಪು ಸಂಭವಿಸಿದಲ್ಲಿ, ನಾನು ಕಠಿಣವಾಗಿ ಏನಾದರೂ ಹೇಳಿದ್ದೇನೆ ಅಥವಾ ನನ್ನ ನಡವಳಿಕೆಯಲ್ಲಿ ಏನಾದರೂ ತಪ್ಪಿದ್ದರೆ, ನಾನು ಕ್ಷಮೆಯಾಚಿಸುತ್ತೇನೆ. ನಮಗೆ ನೀಡಿದ ಸೂಚನೆಗಳನ್ನು ನಾವು ಅನುಸರಿಸುತ್ತೇವೆ ಎಂದಿದ್ದಾರೆ ಕೇಜ್ರಿವಾಲ್.

ಈ ಸಂವಾದವನ್ನು ದೂರದರ್ಶನದಲ್ಲಿ ಪ್ರಸಾರ ಮಾಡಲು ಉದ್ದೇಶಿಸಿಲ್ಲ. ಕೇಜ್ರಿವಾಲ್ ಅವರು ಈ ಮಟ್ಟಕ್ಕೆ ಇಳಿಯಬಾರದಿತ್ತು ಎಂದು ಸರ್ಕಾರದ ಮೂಲಗಳು ಪ್ರತಿಕ್ರಿಯಿಸಿವೆ.

ಮೊದಲ ಬಾರಿ ಮುಖ್ಯಮಂತ್ರಿಗಳ ಜತೆ ಪ್ರಧಾನಿಯವರ ಭೇಟಿಯ ಖಾಸಗಿ ಸಂಭಾಷಣೆಗಳನ್ನು ಪ್ರಸಾರ ಮಾಡಲಾಗಿದೆ. ಕೇಜ್ರಿವಾಲ್ ಅವರ ಸಂಪೂರ್ಣ ಭಾಷಣ ಯಾವುದೇ ಪರಿಹಾರಕ್ಕಾಗಿ ಅಲ್ಲ, ಇದು ರಾಜಕೀಯ ಆಟ ಮತ್ತು ಜವಾಬ್ದಾರಿಯಿಂದ ನುಣುಚಿಕೊಳ್ಳುವುದಾಗಿದೆ . ಪ್ರಧಾನಿ ಮೋದಿಯವರೊಂದಿಗೆ ಕೊವಿಡ್ ಕುರಿತು ಈ ಹಿಂದೆ ನಡೆದ ಸಭೆಯಲ್ಲಿ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಆಕಳಿಸಿದ್ದರು, ನಗುತ್ತಾ ಕುಳಿತಿದ್ದರು ಎಂದು ಕೇಂದ್ರದ ಮೂಲಗಳು ಆರೋಪಿಸಿವೆ.

ಸಭೆಯ ನಂತರ ಕೇಜ್ರಿವಾಲ್ ಅವರ ಕಚೇರಿ ಹೇಳಿಕೆಯೊಂದನ್ನು ನೀಡಿದ್ದು, ಇಂದು, ಮುಖ್ಯಮಂತ್ರಿಯವರ ಸಂವಾದವನ್ನು ನೇರಪ್ರಸಾರ ಮಾಡಲಾಗಿತ್ತು. ಈ ಸಂವಾದವನ್ನು ನೇರಪ್ರಸಾರ ಮಾಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆ, ಲಿಖಿತ ಅಥವಾ ಮೌಖಿಕ ನಿರ್ದೇಶನಗಳು ಬಂದಿರಲಿಲ್ಲ. ಯಾವುದೇ ಗೌಪ್ಯ ಮಾಹಿತಿಯಿಲ್ಲದ ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳನ್ನು ನಾವು ನೇರ ಪ್ರಸಾರ ಮಾಡಿದ್ದೇವೆ. ಆದಾಗ್ಯೂ, ಯಾವುದೇ ಅನಾನುಕೂಲತೆ ಉಂಟಾಗಿದ್ದಕೆ ಅದಕ್ಕೆ ನಾವು ವಿಷಾದಿಸುತ್ತೇವೆ ಎಂದಿದೆ.

ಇದನ್ನೂ ಓದಿ:   ನರೇಂದ್ರ ಮೋದಿ ಜತೆಗಿನ ಮಾತುಕತೆಯನ್ನು ಪ್ರಸಾರ ಮಾಡಿದ ಅರವಿಂದ್ ಕೇಜ್ರಿವಾಲ್; ರಾಜಕೀಯ ಮಾಡ್ಬೇಡಿ ಎಂದು ಟೀಕಿಸಿದ ಕೇಂದ್ರ

(Delhi CM Arvind Kejriwal breaks Protocol At Covid Meeting PM Narendra Modi Chided )

Published On - 3:43 pm, Fri, 23 April 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ