AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಧವ್ ಠಾಕ್ರೆಯನ್ನು ಭೇಟಿ ಮಾಡಿದ ಅರವಿಂದ ಕೇಜ್ರಿವಾಲ್, ಭಗವಂತ್ ಮಾನ್

ಎಎಪಿ ನಾಯಕರನ್ನು ಬರಮಾಡಿಕೊಳ್ಳಲು ಆದಿತ್ಯ ಠಾಕ್ರೆ ಕೂಡ ಹಾಜರಿದ್ದರು. ಉದ್ಧವ್ ಠಾಕ್ರೆ ಕೇಜ್ರಿವಾಲ್ ಮತ್ತು ಎಎಪಿ ನಾಯಕರನ್ನು ತಮ್ಮ ನಿವಾಸದಲ್ಲಿ ಚಹಾಕ್ಕೆ ಆಹ್ವಾನಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಉದ್ಧವ್ ಠಾಕ್ರೆಯನ್ನು ಭೇಟಿ ಮಾಡಿದ ಅರವಿಂದ ಕೇಜ್ರಿವಾಲ್, ಭಗವಂತ್ ಮಾನ್
ಉದ್ಧವ್ ಠಾಕ್ರೆಯನ್ನು ಭೇಟಿ ಮಾಡಿದ ಅರವಿಂದ ಕೇಜ್ರಿವಾಲ್ - ಭಗವಂತ್ ಮಾನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 24, 2023 | 10:10 PM

Share

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal), ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಮತ್ತು ಆಪ್ ಹಿರಿಯ ನಾಯಕರಾದ ಸಂಜಯ್ ಸಿಂಗ್, ಸಂಸದ ರಾಘವ್ ಚಡ್ಡಾ ಶುಕ್ರವಾರ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (Uddhav Thackeray) ಅವರನ್ನು ಮುಂಬೈನ ಅವರ ನಿವಾಸ ಮಾತೋಶ್ರೀಯಲ್ಲಿ ಭೇಟಿಯಾದರು. ಎಎಪಿ ನಾಯಕರನ್ನು ಬರಮಾಡಿಕೊಳ್ಳಲು ಆದಿತ್ಯ ಠಾಕ್ರೆ ಕೂಡ ಹಾಜರಿದ್ದರು. ಉದ್ಧವ್ ಠಾಕ್ರೆ ಕೇಜ್ರಿವಾಲ್ ಮತ್ತು ಎಎಪಿ ನಾಯಕರನ್ನು ತಮ್ಮ ನಿವಾಸದಲ್ಲಿ ಚಹಾಕ್ಕೆ ಆಹ್ವಾನಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಶಿವಸೇನಾ ಹೆಸರು ಮತ್ತು ಬಿಲ್ಲು ಬಾಣದ ಚಿಹ್ನೆಯನ್ನು ಏಕನಾಥ್ ಶಿಂಧೆ ಅವರಿಗೆ ನೀಡಲಾಗಿದೆ. ಇತ್ತ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವು ಆಪಾದಿತ ಮದ್ಯ ಹಗರಣ ಮತ್ತು ಸ್ನೂಪಿಂಗ್ ಪ್ರಕರಣದಲ್ಲಿ ಸಿಲುಕಿರುವ ಸಮಯದಲ್ಲಿ ಈ ಸಭೆಯು ಬಂದಿದೆ.

“ಕೊರೊನಾ ಸಾಂಕ್ರಾಮಿಕವು ಉತ್ತುಂಗದಲ್ಲಿದ್ದಾಗ, ಮಹಾರಾಷ್ಟ್ರದಲ್ಲಿ ಉದ್ಧವ್ ಜಿ ಅದನ್ನು ನಿಯಂತ್ರಿಸಿದ ರೀತಿ ಶ್ಲಾಘನೀಯವಾಗಿತ್ತು. ಇಂದು ನಾವು ಕೇಂದ್ರ ಸರ್ಕಾರವು ಬಂಡವಾಳಶಾಹಿಗಳನ್ನು ಉಳಿಸಲು ದೇಶವನ್ನು ಅಡಮಾನವಿಡುವ ವಿಷಯವನ್ನು ಚರ್ಚಿಸಿದ್ದೇವೆ. ನಾವು ಪರಸ್ಪರ ಏನನ್ನಾದರೂ ಕಲಿತಾಗ ಮಾತ್ರ ದೇಶ ಪ್ರಗತಿ ಹೊಂದುತ್ತದೆ ಎಂದು ಅವರು ಹೇಳಿದ್ದಾರೆ.

ದೆಹಲಿಯಲ್ಲಿ ಮೇಯರ್ ಚುನಾವಣೆ ಕುರಿತು ಮಾತನಾಡಿದ ಮುಖ್ಯಮಂತ್ರಿ ದೆಹಲಿಯ ಜನರು ನಮಗೆ ಅವಕಾಶ ನೀಡಿದ್ದಾರೆ, ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಡ್ಡಿಪಡಿಸಿದೆ” ಎಂದು ಹೇಳಿದರು.

ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿದ ನಂತರ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಸಂಬಂಧವನ್ನು ಮುಂದಕ್ಕೆ ಕೊಂಡೊಯ್ಯುವುದಾಗಿ ಹೇಳಿದರು.

ಇದನ್ನೂ ಓದಿ: Delhi MCD: ದೆಹಲಿ ಸಿವಿಕ್ ಸೆಂಟರ್‌ನಲ್ಲಿ ಎಎಪಿ, ಬಿಜೆಪಿ ಕೌನ್ಸಿಲರ್‌ಗಳ ನಡುವೆ ಹೊಡೆದಾಟ; ಬಿಜೆಪಿ ಗೂಂಡಾಗಿರಿ ನಿಲ್ಲಿಸಲಿ ಎಂದ ಆಪ್

“ಉದ್ಧವ್ ಠಾಕ್ರೆ ಮತ್ತು ಆದಿತ್ಯ ಠಾಕ್ರೆ ಅವರನ್ನು ಭೇಟಿಯಾಗಬೇಕು ಎಂಬ ಆಸೆ ಬಹಳ ದಿನಗಳಿಂದ ಇತ್ತು. ನಾವು ಈ ಸಂಬಂಧವನ್ನು ಮುಂದಕ್ಕೆ ಕೊಂಡೊಯ್ಯುತ್ತೇವೆ. ಉದ್ಧವ್ ಜಿ ಸಿಂಹದ ಮಗ (ಬಾಳಾಸಾಹೇಬ್).ಉದ್ಧವ್ ಠಾಕ್ರೆ ಅವರಿಗೆ ನ್ಯಾಯ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ. ದೇಶದಲ್ಲಿನಹಲವು ಸಂಗತಿಗಳ ಬಗ್ಗೆ ಚರ್ಚಿಸಲಾಗಿದೆ” ಎಂದು ಕೇಜ್ರಿವಾಲ್ ಹೇಳಿದರು.

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕೇಜ್ರಿವಾಲ್, ‘ಬಿಜೆಪಿಯವರು ಗೂಂಡಾಗಿರಿ ಮಾಡುತ್ತಾರೆ, ಇಡಿ ಮತ್ತು ಸಿಬಿಐ ಅನ್ನು ಹೇಡಿಗಳು ಬಳಸುತ್ತಾರೆ, ದೆಹಲಿಯ ಜನರು ನಮಗೆ ಎಂಸಿಡಿಯಲ್ಲಿ ಬಹುಮತ ನೀಡಿದ್ದಾರೆ, ಸ್ಥಾಯಿ ಸಮಿತಿಯಲ್ಲಿ ನಮಗೆ ಬಹುಮತವಿದೆ, ಬಿಜೆಪಿ ಮಾತ್ರ ಚುನಾವಣೆ ಬಗ್ಗೆ ಯೋಚಿಸುತ್ತದೆ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ