AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ಗೆ ಕೊರೊನಾ ಸೋಂಕು; ಸಂಪರ್ಕದಲ್ಲಿದ್ದವರು ಕೊವಿಡ್​ 19 ಟೆಸ್ಟ್ ಮಾಡಿಸಿಕೊಳ್ಳಿ ಎಂದ ಸಿಎಂ

2020ರ ಜೂನ್​ನಲ್ಲಿ ಅರವಿಂದ್​ ಕೇಜ್ರಿವಾಲ್​ಗೆ ತೀವ್ರವಾದ ಜ್ವರ, ಗಂಟಲುನೋವು ಕಾಣಿಸಿತ್ತು. ಆಗ ಕೊರೊನಾ ಟೆಸ್ಟ್ ಮಾಡಿಸಿದಾಗ ಕೊವಿಡ್ 19 ನೆಗೆಟಿವ್​​​ ವರದಿ ಬಂದಿತ್ತು. ಹಾಗಿದ್ದಾಗ್ಯೂ ಆಗ ತಮಗೆ ಶೀತ, ಜ್ವರ ಬಂದಾಗಿನಿಂದಲೂ ಎಲ್ಲ ಸಭೆಗಳನ್ನೂ ರದ್ದು ಮಾಡಿ ಅವರು ಕ್ವಾರಂಟೈನ್​ ಆಗಿದ್ದರು.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ಗೆ ಕೊರೊನಾ ಸೋಂಕು; ಸಂಪರ್ಕದಲ್ಲಿದ್ದವರು ಕೊವಿಡ್​ 19 ಟೆಸ್ಟ್ ಮಾಡಿಸಿಕೊಳ್ಳಿ ಎಂದ ಸಿಎಂ
ಅರವಿಂದ ಕೇಜ್ರಿವಾಲ್
TV9 Web
| Edited By: |

Updated on:Jan 04, 2022 | 8:49 AM

Share

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ಗೆ (Arvind Kejriwal) ಕೊರೊನಾ ಸೋಂಕು (Corona Virus) ತಗುಲಿದೆ. ಈ ಬಗ್ಗೆ ಅರವಿಂದ್ ಕೇಜ್ರಿವಾಲ್​ ಟ್ವೀಟ್ ಮಾಡಿ ತಿಳಿಸಿದ್ದು, ನನಗೆ ಕೊರೊನಾದ ಸೌಮ್ಯ ಲಕ್ಷಣಗಳು ಇವೆ. ಕಳೆದ ಕೆಲವು ದಿನಗಳಿಂದಲೂ ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಕೊವಿಡ್​ 19 ತಪಾಸಣೆ ಮಾಡಿಸಿಕೊಳ್ಳಿ. ಐಸೋಲೇಟ್​ ಆಗಿ ಎಂದು ಮನವಿ ಮಾಡಿದ್ದಾರೆ. ನನಗೆ ಕೊವಿಡ್​ 19 ಸೋಂಕು ತಗುಲಿದೆ ಎಂದಷ್ಟೇ ಅರವಿಂದ್ ಕೇಜ್ರಿವಾಲ್​ ಹೇಳಿದ್ದಾರೆ. ಹಾಗಾಗಿ, ಒಮಿಕ್ರಾನ್​ ಸೋಂಕಿಗೆ ಒಳಗಾಗಿದ್ದಾರೋ, ಅಥವಾ ಕೊರೊನಾ ಸೋಂಕೋ ಎಂಬುದಿನ್ನೂ ದೃಢಪಟ್ಟಿಲ್ಲ. ಸದ್ಯ ಅರವಿಂದ್ ಕೇಜ್ರಿವಾಲ್​ ಐಸೋಲೇಟ್ ಆಗಿದ್ದಾರೆ.

2020ರ ಜೂನ್​ನಲ್ಲಿ ಅರವಿಂದ್​ ಕೇಜ್ರಿವಾಲ್​ಗೆ ತೀವ್ರವಾದ ಜ್ವರ, ಗಂಟಲುನೋವು ಕಾಣಿಸಿತ್ತು. ಆಗ ಕೊರೊನಾ ಟೆಸ್ಟ್ ಮಾಡಿಸಿದಾಗ ಕೊವಿಡ್ 19 ನೆಗೆಟಿವ್​​​ ವರದಿ ಬಂದಿತ್ತು. ಹಾಗಿದ್ದಾಗ್ಯೂ ಆಗ ತಮಗೆ ಶೀತ, ಜ್ವರ ಬಂದಾಗಿನಿಂದಲೂ ಎಲ್ಲ ಸಭೆಗಳನ್ನೂ ರದ್ದು ಮಾಡಿ ಅವರು ಕ್ವಾರಂಟೈನ್​ ಆಗಿದ್ದರು. ನಂತರ ಏಪ್ರಿಲ್​ ತಿಂಗಳಲ್ಲಿ ಅರವಿಂದ್ ಕೇಜ್ರಿವಾಲ್​ ಪತ್ನಿ ಸುನೀತಾ ಕೇಜ್ರಿವಾಲ್​ಗೆ ಕೊರೊನಾ ಸೋಂಕು ತಗುಲಿತ್ತು. ಆಗಲೂ ಸಹ ಮುನ್ನೆಚ್ಚರಿಕಾ ಕ್ರಮವಾಗಿ ಅವರು ಹೋಂ ಕ್ವಾರಂಟೈನ್​ಗೆ ಒಳಗಾಗಿದ್ದರು.

ಇನ್ನು ಈಗ ಅರವಿಂದ್ ಕೇಜ್ರಿವಾಲ್​ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಯ ಬ್ಯೂಸಿಯಲ್ಲಿದ್ದಾರೆ. 2021ರ ನವೆಂಬರ್​ನಿಂದಲೂ ಪಂಜಾಬ್​, ಉತ್ತರಾಖಂಡ್​ ಮತ್ತು ಗೋವಾ (ಈ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜ್ಯಗಳು) ಚುನಾವಣಾ ಕಾರ್ಯದಲ್ಲಿ ಸಕ್ರಿಯರಾಗಿದ್ದಾರೆ. ಪ್ರತಿರಾಜ್ಯಗಳಿಗೂ ತೆರಳಿ ದೊಡ್ಡಮಟ್ಟದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು, ಜನಸಂಪರ್ಕಕ್ಕೆ ಹೋಗುತ್ತಿದ್ದಾರೆ. ಇನ್ನು ದೆಹಲಿಯಲ್ಲಿ ಕಳೆದ ವಾರದಿಂದ ಕೊವಿಡ್​ 19 ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಒಮಿಕ್ರಾನ್​ ಕೂಡ ಹೆಚ್ಚುತ್ತಿದೆ. ನಿನ್ನೆ ಒಂದೇ ದಿನ ದೆಹಲಿಯಲ್ಲಿ 4099 ಕೊರೊನಾ ಕೇಸ್​ಗಳು ದಾಖಲಾಗಿದ್ದು, ಪಾಸಿಟಿವಿಟಿ ದರ ಶೇ.6.46ರಷ್ಟಿದೆ. ಅಲ್ಲಿ ಹಲವು ರೀತಿಯ ನಿರ್ಬಂಧಗಳನ್ನು ವಹಿಸಲಾಗಿದೆ. ಸದ್ಯ ಹಳದಿ ಅಲರ್ಟ್​ ಘೋಷಣೆಯಾಗಿದ್ದು, ಪರಿಸ್ಥಿತಿ ಹೀಗೆ ಮುಂದುವರಿದರೆ ಸಂಪೂರ್ಣ ಲಾಕ್​ಡೌನ್ ಆಗಬಹುದಾದ ಸಾಧ್ಯತೆ ಇದೆ.

ಇದನ್ನೂ ಓದಿ: 9 ಬ್ಯಾಂಕ್​ಗಳಿಗೆ ವಂಚನೆ; ಗುಜರಾತ್​ ಮೂಲದ ಸಂಸ್ಥೆಯ 26.25 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇ.ಡಿ.

Published On - 8:46 am, Tue, 4 January 22

ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ