AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ಯೋಜನೆ ವಿಫಲಗೊಳಿಸಿದ್ದೇವೆ ಎಂದಿದ್ದ ಕೇಜ್ರಿವಾಲ್​ಗೆ ಗೃಹ ಬಂಧನ -ಪೊಲೀಸರು ಹೇಳೋದೇನು?

ದೆಹಲಿ ಪೊಲೀಸರು ಈ ಆರೋಪವನ್ನು ತಳ್ಳಿ ಹಾಕಿದ್ದಾರೆ. ಯಾವುದೇ ರೀತಿಯ ಘರ್ಷಣೆ, ಅವಘಡ ತಡೆಯುವ ನಿಟ್ಟಿನಲ್ಲಿ ಸಿಎಂ ನಿವಾಸದ ಸುತ್ತ ಸೇರಿ, ಹಲವು ಕಡೆಗಳಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ ಹೊರತು, ಮುಖ್ಯಮಂತ್ರಿಯನ್ನು ಗೃಹ ಬಂಧನದಲ್ಲಿ ಇರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೇಂದ್ರದ ಯೋಜನೆ ವಿಫಲಗೊಳಿಸಿದ್ದೇವೆ ಎಂದಿದ್ದ ಕೇಜ್ರಿವಾಲ್​ಗೆ ಗೃಹ ಬಂಧನ -ಪೊಲೀಸರು ಹೇಳೋದೇನು?
Lakshmi Hegde
|

Updated on:Dec 08, 2020 | 1:31 PM

Share

ದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. ಅವರನ್ನು ಭೇಟಿಯಾಗಲು ಯಾರಿಗೂ ಅವಕಾಶ ಕೊಡುತ್ತಿಲ್ಲ ಎಂದು ಆಮ್​ ಆದ್ಮಿ ಪಕ್ಷ ಆರೋಪ ಮಾಡಿದೆ.

ಸಿಂಗು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ನಿನ್ನೆ ಅರವಿಂದ ಕೇಜ್ರಿವಾಲ್ ಭೇಟಿಯಾಗಿ, ಮಾತುಕತೆ ನಡೆಸಿದ್ದರು. ಅಲ್ಲಿಂದ ವಾಪಸ್ ಬಂದ ನಂತರ ಅವರನ್ನು ಮನೆಯಲ್ಲೇ ಬಂಧಿಸಿಡಲಾಗಿದೆ. ಸಿಎಂ ಮನೆಗೆ ಪ್ರವೇಶ ಅವಕಾಶ ಕೊಡುತ್ತಿಲ್ಲ.. ಯಾರನ್ನೂ ಒಳಗೆ ಬಿಡುತ್ತಿಲ್ಲ ಎಂದು ಆಪ್​ ಟ್ವೀಟ್ ಮೂಲಕ ತಿಳಿಸಿದೆ.

ಹಾಗೇ ಆಪ್​ ಮುಖಂಡ ಸೌರಭ್​ ಭಾರದ್ವಾಜ್​ ಸುದ್ದಿಗೋಷ್ಠಿ ನಡೆಸಿ, ಸಿಎಂ ನಿವಾಸದ ಸುತ್ತಲೂ ಎಲ್ಲ ಕಡೆಯಲ್ಲೂ ಬ್ಯಾರಿಕೇಡ್ ಹಾಕಿದ್ದಾರೆ. ಕೇಂದ್ರ ಗೃಹ ಸಚಿವಾಲಯದ ಆದೇಶದ ಮೇರೆಗೆ ಅವರನ್ನು ಮನೆಯಲ್ಲಿ ಕೂಡಿಹಾಕಿದ್ದಾರೆ ಎಂದು ದೂರಿದ್ದರು. ಅಷ್ಟೇ ಅಲ್ಲ, ನಮ್ಮ ಶಾಸಕರಿಗೂ ಪೊಲೀಸರು ಥಳಿಸಿದ್ದಾರೆ ಎಂದಿದ್ದರು.

ಆದರೆ ದೆಹಲಿ ಪೊಲೀಸರು ಈ ಆರೋಪವನ್ನು ತಳ್ಳಿ ಹಾಕಿದ್ದಾರೆ. ಯಾವುದೇ ರೀತಿಯ ಘರ್ಷಣೆ, ಅವಘಡ ತಡೆಯುವ ನಿಟ್ಟಿನಲ್ಲಿ ಸಿಎಂ ನಿವಾಸದ ಸುತ್ತ ಸೇರಿ, ಹಲವು ಕಡೆಗಳಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ ಹೊರತು, ಮುಖ್ಯಮಂತ್ರಿಯನ್ನು ಗೃಹ ಬಂಧನದಲ್ಲಿ ಇರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಬಲ ಘೋಷಿಸಿದ್ದ ಸಿಎಂ ನಿನ್ನೆ ಸಿಂಗು ಗಡಿಗೆ ಭೇಟಿ ಕೊಟ್ಟಿದ್ದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರೈತರು ಕರೆ ನೀಡಿರುವ ಭಾರತ್​ ಬಂದ್​ಗೆ ಬೆಂಬಲ ಘೋಷಿಸಿದ್ದರು. ಕೇಂದ್ರ ಸರ್ಕಾರ ರೈತರಿಗೆ ದೆಹಲಿಯೊಳಗೆ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟು ನಂತರ ಸ್ಟೇಡಿಯಂ ಜೈಲಿನಲ್ಲಿ ಇಡಲು ಯೋಜನೆ ರೂಪಿಸಿತ್ತು. ಆದರೆ ನಮ್ಮ ದೆಹಲಿ ಸರ್ಕಾರ ಆ ಪ್ಲ್ಯಾನ್​ ವಿಫಲಗೊಳಿಸಿದೆ. ಸ್ಟೇಡಿಯಂನ್ನು ತಾತ್ಕಾಲಿಕ ಜೈಲಾಗಿ ಪರಿವರ್ತಿಸಲು ನಮ್ಮ ಸರ್ಕಾರದ ಮೇಲೆ ತುಂಬ ಒತ್ತಡ ತಂದಿದ್ದರು. ಆದರೆ ನಾವು ಅದಕ್ಕೆ ಅನುಮತಿ ನೀಡಲಿಲ್ಲ ಎಂದು ಹೇಳಿದ್ದರು.

ಕೃಷಿ ತಿದ್ದುಪಡಿ ಕಾಯ್ದೆ: ರೈತರು ಈ ಪರಿ ರೊಚ್ಚಿಗೇಳಲು ಕಾರಣವೇನು? ನೀವು ತಿಳಿದುಕೊಳ್ಳಬೇಕಿರುವ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ

Published On - 12:55 pm, Tue, 8 December 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ