AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ಯೋಜನೆ ವಿಫಲಗೊಳಿಸಿದ್ದೇವೆ ಎಂದಿದ್ದ ಕೇಜ್ರಿವಾಲ್​ಗೆ ಗೃಹ ಬಂಧನ -ಪೊಲೀಸರು ಹೇಳೋದೇನು?

ದೆಹಲಿ ಪೊಲೀಸರು ಈ ಆರೋಪವನ್ನು ತಳ್ಳಿ ಹಾಕಿದ್ದಾರೆ. ಯಾವುದೇ ರೀತಿಯ ಘರ್ಷಣೆ, ಅವಘಡ ತಡೆಯುವ ನಿಟ್ಟಿನಲ್ಲಿ ಸಿಎಂ ನಿವಾಸದ ಸುತ್ತ ಸೇರಿ, ಹಲವು ಕಡೆಗಳಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ ಹೊರತು, ಮುಖ್ಯಮಂತ್ರಿಯನ್ನು ಗೃಹ ಬಂಧನದಲ್ಲಿ ಇರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೇಂದ್ರದ ಯೋಜನೆ ವಿಫಲಗೊಳಿಸಿದ್ದೇವೆ ಎಂದಿದ್ದ ಕೇಜ್ರಿವಾಲ್​ಗೆ ಗೃಹ ಬಂಧನ -ಪೊಲೀಸರು ಹೇಳೋದೇನು?
Lakshmi Hegde
|

Updated on:Dec 08, 2020 | 1:31 PM

Share

ದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. ಅವರನ್ನು ಭೇಟಿಯಾಗಲು ಯಾರಿಗೂ ಅವಕಾಶ ಕೊಡುತ್ತಿಲ್ಲ ಎಂದು ಆಮ್​ ಆದ್ಮಿ ಪಕ್ಷ ಆರೋಪ ಮಾಡಿದೆ.

ಸಿಂಗು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ನಿನ್ನೆ ಅರವಿಂದ ಕೇಜ್ರಿವಾಲ್ ಭೇಟಿಯಾಗಿ, ಮಾತುಕತೆ ನಡೆಸಿದ್ದರು. ಅಲ್ಲಿಂದ ವಾಪಸ್ ಬಂದ ನಂತರ ಅವರನ್ನು ಮನೆಯಲ್ಲೇ ಬಂಧಿಸಿಡಲಾಗಿದೆ. ಸಿಎಂ ಮನೆಗೆ ಪ್ರವೇಶ ಅವಕಾಶ ಕೊಡುತ್ತಿಲ್ಲ.. ಯಾರನ್ನೂ ಒಳಗೆ ಬಿಡುತ್ತಿಲ್ಲ ಎಂದು ಆಪ್​ ಟ್ವೀಟ್ ಮೂಲಕ ತಿಳಿಸಿದೆ.

ಹಾಗೇ ಆಪ್​ ಮುಖಂಡ ಸೌರಭ್​ ಭಾರದ್ವಾಜ್​ ಸುದ್ದಿಗೋಷ್ಠಿ ನಡೆಸಿ, ಸಿಎಂ ನಿವಾಸದ ಸುತ್ತಲೂ ಎಲ್ಲ ಕಡೆಯಲ್ಲೂ ಬ್ಯಾರಿಕೇಡ್ ಹಾಕಿದ್ದಾರೆ. ಕೇಂದ್ರ ಗೃಹ ಸಚಿವಾಲಯದ ಆದೇಶದ ಮೇರೆಗೆ ಅವರನ್ನು ಮನೆಯಲ್ಲಿ ಕೂಡಿಹಾಕಿದ್ದಾರೆ ಎಂದು ದೂರಿದ್ದರು. ಅಷ್ಟೇ ಅಲ್ಲ, ನಮ್ಮ ಶಾಸಕರಿಗೂ ಪೊಲೀಸರು ಥಳಿಸಿದ್ದಾರೆ ಎಂದಿದ್ದರು.

ಆದರೆ ದೆಹಲಿ ಪೊಲೀಸರು ಈ ಆರೋಪವನ್ನು ತಳ್ಳಿ ಹಾಕಿದ್ದಾರೆ. ಯಾವುದೇ ರೀತಿಯ ಘರ್ಷಣೆ, ಅವಘಡ ತಡೆಯುವ ನಿಟ್ಟಿನಲ್ಲಿ ಸಿಎಂ ನಿವಾಸದ ಸುತ್ತ ಸೇರಿ, ಹಲವು ಕಡೆಗಳಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ ಹೊರತು, ಮುಖ್ಯಮಂತ್ರಿಯನ್ನು ಗೃಹ ಬಂಧನದಲ್ಲಿ ಇರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಬಲ ಘೋಷಿಸಿದ್ದ ಸಿಎಂ ನಿನ್ನೆ ಸಿಂಗು ಗಡಿಗೆ ಭೇಟಿ ಕೊಟ್ಟಿದ್ದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರೈತರು ಕರೆ ನೀಡಿರುವ ಭಾರತ್​ ಬಂದ್​ಗೆ ಬೆಂಬಲ ಘೋಷಿಸಿದ್ದರು. ಕೇಂದ್ರ ಸರ್ಕಾರ ರೈತರಿಗೆ ದೆಹಲಿಯೊಳಗೆ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟು ನಂತರ ಸ್ಟೇಡಿಯಂ ಜೈಲಿನಲ್ಲಿ ಇಡಲು ಯೋಜನೆ ರೂಪಿಸಿತ್ತು. ಆದರೆ ನಮ್ಮ ದೆಹಲಿ ಸರ್ಕಾರ ಆ ಪ್ಲ್ಯಾನ್​ ವಿಫಲಗೊಳಿಸಿದೆ. ಸ್ಟೇಡಿಯಂನ್ನು ತಾತ್ಕಾಲಿಕ ಜೈಲಾಗಿ ಪರಿವರ್ತಿಸಲು ನಮ್ಮ ಸರ್ಕಾರದ ಮೇಲೆ ತುಂಬ ಒತ್ತಡ ತಂದಿದ್ದರು. ಆದರೆ ನಾವು ಅದಕ್ಕೆ ಅನುಮತಿ ನೀಡಲಿಲ್ಲ ಎಂದು ಹೇಳಿದ್ದರು.

ಕೃಷಿ ತಿದ್ದುಪಡಿ ಕಾಯ್ದೆ: ರೈತರು ಈ ಪರಿ ರೊಚ್ಚಿಗೇಳಲು ಕಾರಣವೇನು? ನೀವು ತಿಳಿದುಕೊಳ್ಳಬೇಕಿರುವ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ

Published On - 12:55 pm, Tue, 8 December 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ