AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪ್ ವರ್ಸಸ್ ಬಿಜೆಪಿ; ಅಕ್ರಮ ಬಳಕೆ ಆರೋಪದ ಮೇಲೆ ದೆಹಲಿ ಸಿಎಂ ಅತಿಶಿ ನಿವಾಸ ಸೀಲ್

ದೆಹಲಿ ಮುಖ್ಯಮಂತ್ರಿ ಅತಿಶಿ ಅವರು ತಮ್ಮ ಅಧಿಕೃತ ನಿವಾಸಕ್ಕೆ ತೆರಳಿದ 2 ದಿನಗಳ ನಂತರ ಅವರನ್ನು ಆ ಮನೆಯಿಂದ ಹೊರಹಾಕಲಾಗಿದೆ ಎಂದು ಆಮ್ ಆದ್ಮಿ ಪಕ್ಷ ಇಂದು ಹೇಳಿಕೊಂಡಿದೆ. ಎಎಪಿ ಮತ್ತು ಕೇಂದ್ರದ ನಡುವೆ ಹೊಸ ಮುಖಾಮುಖಿಯ ಪ್ರಾರಂಭವನ್ನು ಸೂಚಿಸುವ ಮೂಲಕ ದೆಹಲಿ ಮುಖ್ಯಮಂತ್ರಿ ಕಚೇರಿಯು ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಅವರು ಅತಿಶಿ ಅವರ ವಸ್ತುಗಳನ್ನು "ಬಿಜೆಪಿಯ ಆಜ್ಞೆಯ ಮೇರೆಗೆ" ಅಧಿಕೃತ ಮನೆಯಿಂದ ಬಲವಂತವಾಗಿ ತೆಗೆದುಹಾಕಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದ್ದಾರೆ.

ಆಪ್ ವರ್ಸಸ್ ಬಿಜೆಪಿ; ಅಕ್ರಮ ಬಳಕೆ ಆರೋಪದ ಮೇಲೆ ದೆಹಲಿ ಸಿಎಂ ಅತಿಶಿ ನಿವಾಸ ಸೀಲ್
ದೆಹಲಿ ಸಿಎಂ ಅತಿಶಿ ನಿವಾಸ ಸೀಲ್
ಸುಷ್ಮಾ ಚಕ್ರೆ
|

Updated on: Oct 09, 2024 | 6:56 PM

Share

ನವದೆಹಲಿ: “ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮುಖ್ಯಮಂತ್ರಿ ನಿವಾಸವನ್ನು ತೆರವು ಮಾಡಲಾಗಿದೆ. ಬಿಜೆಪಿಯ ಆಜ್ಞೆಯ ಮೇರೆಗೆ ಲೆಫ್ಟಿನೆಂಟ್ ಗವರ್ನರ್ ಮುಖ್ಯಮಂತ್ರಿ ಅತಿಶಿ ಅವರ ವಸ್ತುಗಳನ್ನು ಮುಖ್ಯಮಂತ್ರಿ ನಿವಾಸದಿಂದ ಬಲವಂತವಾಗಿ ತೆಗೆದುಹಾಕಿದ್ದಾರೆ” ಎಂದು ಮುಖ್ಯಮಂತ್ರಿ ಕಚೇರಿ ಆರೋಪಿಸಿದೆ. ಅಧಿಕೃತ ನಿವಾಸದಿಂದ ಹಲವಾರು ಪೆಟ್ಟಿಗೆಗಳು ಮತ್ತು ಸಾಮಾನುಗಳನ್ನು ತೆಗೆದುಕೊಂಡು ಹೋಗುತ್ತಿರುವುದನ್ನು ದೃಶ್ಯಗಳ ವಿಡಿಯೋ ವೈರಲ್ ಆಗಿದೆ.

ಸಿಎಂ ಅತಿಶಿ ಅವರ ನಿವಾಸಕ್ಕೆ ಡಬಲ್ ಬೀಗ ಹಾಕಲಾಗಿದೆ. ಕೀಗಳನ್ನು ಹಸ್ತಾಂತರಿಸುವ ಬಗ್ಗೆ ಲೋಕೋಪಯೋಗಿ ಇಲಾಖೆಗೆ (ಪಿಡಬ್ಲ್ಯುಡಿ) ಸರಿಯಾದ ದಾಖಲೆಗಳನ್ನು ಸಲ್ಲಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಸಿಎಂ ಬಂಗಲೆಯು ಎಎಪಿ ಮತ್ತು ಬಿಜೆಪಿ ನಡುವೆ ಮತ್ತೊಂದು ಘರ್ಷಣೆಯನ್ನು ಹುಟ್ಟುಹಾಕಿದೆ. ಅಕ್ರಮ ಬಳಕೆ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅತಿಶಿ ಅವರ ಅಧಿಕೃತ ನಿವಾಸವನ್ನು ಪಿಡಬ್ಲ್ಯುಡಿ ಇಲಾಖೆ ಇಂದು ಸೀಲ್ ಮಾಡಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಕೆಜಿಗೆ 65 ರೂ. ಸಬ್ಸಿಡಿ ದರದಲ್ಲಿ ಟೊಮ್ಯಾಟೊ ಮಾರಾಟ ಆರಂಭಿಸಿದ ಕೇಂದ್ರ ಸರ್ಕಾರ

ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಿದ ನಂತರ ಸಿಎಂ ನಿವಾಸ ತೆರವಾಗಿತ್ತು. ನಂತರ, ಅತಿಶಿ ಸಿಎಂ ಆದ ನಂತರ ಆ ಮನೆಗೆ ಶಿಫ್ಟ್ ಆದರು. ಇದೀಗ ಸಿಎಂ ಮನೆ ತೆರವು ಹಾಗೂ ಹಸ್ತಾಂತರ ವಿಚಾರವಾಗಿ ವಿವಾದ ಉಂಟಾಗಿದ್ದು, ಬಳಿಕ ಪಿಡಬ್ಲ್ಯುಡಿ ಕ್ರಮ ಕೈಗೊಂಡಿದೆ.

ಆದರೆ, ಎಲ್‌ಜಿ ಕಚೇರಿ ಅಥವಾ ಬಿಜೆಪಿಯಿಂದ ಈ ಆರೋಪಗಳಿಗೆ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ. ಈ ಹಿಂದೆ ಅವರ ಹಿಂದಿನ ಅರವಿಂದ್ ಕೇಜ್ರಿವಾಲ್ ಅವರು ಆಕ್ರಮಿಸಿಕೊಂಡಿದ್ದ ನಿವಾಸದಿಂದ ದೆಹಲಿ ಮುಖ್ಯಮಂತ್ರಿ ಅತಿಶಿ ಅವರ ವಸ್ತುಗಳನ್ನು ಸಹ ತೆಗೆದುಹಾಕಲಾಗಿದೆ ಎಂದು ಸಿಎಂಒ ತಿಳಿಸಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಕೆಜಿಗೆ 65 ರೂ. ಸಬ್ಸಿಡಿ ದರದಲ್ಲಿ ಟೊಮ್ಯಾಟೊ ಮಾರಾಟ ಆರಂಭಿಸಿದ ಕೇಂದ್ರ ಸರ್ಕಾರ

ಇದಕ್ಕೂ ಮುನ್ನ ಎಎಪಿ ಸಂಸದ ಸಂಜಯ್ ಸಿಂಗ್ ಅವರು, ಸಿಎಂ ಅತಿಶಿಗೆ ಅಧಿಕಾರಿಗಳು ಬಂಗಲೆ ಮಂಜೂರು ಮಾಡುತ್ತಿಲ್ಲ ಮತ್ತು ಅವರ ಕ್ಯಾಂಪ್ ಕಚೇರಿಯನ್ನು ಸಹ ಖಾಲಿ ಮಾಡಲಾಗಿದೆ ಎಂದು ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ
ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ
ಅಜಿತ್​​​ ಪವರ್​​​ ಸಾವು ಪ್ರಕರಣದ ಹೊಸ ಅಪ್ಡೇಟ್
ಅಜಿತ್​​​ ಪವರ್​​​ ಸಾವು ಪ್ರಕರಣದ ಹೊಸ ಅಪ್ಡೇಟ್
ಕೈ ಶಾಸಕರಿಂದ ವಿದೇಶ ಪ್ರವಾಸ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ ಆಪ್ತ
ಕೈ ಶಾಸಕರಿಂದ ವಿದೇಶ ಪ್ರವಾಸ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ ಆಪ್ತ
‘ತಾಯಿ ಸ್ಥಾನದಲ್ಲಿರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’; ಚಕ್ರವರ್ತಿ
‘ತಾಯಿ ಸ್ಥಾನದಲ್ಲಿರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’; ಚಕ್ರವರ್ತಿ