AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi MCD Polls: ದೆಹಲಿ ಸಿಎಂ ಕೇಜ್ರಿವಾಲ್ ಲಾಲು ಮಾದರಿಯಲ್ಲಿ ಲೂಟಿ ಮಾಡುತ್ತಿದ್ದಾರೆ: ಸಚಿವ ಅನುರಾಗ್ ಠಾಕೂರ್

ಕೇಜ್ರಿವಾಲ್ ಅವರು ಪ್ರಸ್ತುತ ಲಾಲು ಅವರ ರೀತಿಯಲ್ಲಿ ದೆಹಲಿಯಲ್ಲಿ ಲೂಟಿ ಮಾಡುತ್ತಿದ್ದಾರೆ. ಕೇಜ್ರಿವಾಲ್ ಅವರು ಚುನಾವಣೆಗಳು ಬಂದಾಗ ಮಾತ್ರ ಭಗವಾನ್ ರಾಮನನ್ನು ನೆನಪಿಸಿಕೊಳ್ಳುತ್ತಾರೆ. ಇಲ್ಲದಿದ್ದರೆ, ತುಕ್ಡೆ-ತುಕ್ಡೆ ಗ್ಯಾಂಗ್ ನಾಯಕರೊಂದಿಗೆ ಮೆರವಣಿಗೆಯಲ್ಲಿ ಇರುತ್ತಾರೆ ಎಂದು ಹೇಳಿದ್ದಾರೆ.

Delhi MCD Polls: ದೆಹಲಿ ಸಿಎಂ ಕೇಜ್ರಿವಾಲ್ ಲಾಲು ಮಾದರಿಯಲ್ಲಿ ಲೂಟಿ ಮಾಡುತ್ತಿದ್ದಾರೆ: ಸಚಿವ ಅನುರಾಗ್ ಠಾಕೂರ್
TV9 Web
| Edited By: |

Updated on:Dec 03, 2022 | 6:26 PM

Share

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (MCD) ಚುನಾವಣೆಗೆ ಕೇವಲ ಒಂದು ದಿನ ಮುಂಚಿತವಾಗಿ, ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಇಂದು (ಡಿಸೆಂಬರ್ 3 ಶನಿವಾರ) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ನೇತೃತ್ವದ ಸರ್ಕಾರವನ್ನು ಟೀಕಿಸಿದ್ದಾರೆ. ಕೇಜ್ರಿವಾಲ್ ಸರ್ಕಾರದ ಹಲವಾರು ಹಗರಣಗಳ ಕುರಿತು ಆರೋಪಿಸಿದರು. ದೆಹಲಿ ಸರ್ಕಾರವು ಲಾಲು ಪ್ರಸಾದ್ ಯಾದವ್ ಲೂಟಿ ಮಾದರಿಯನ್ನು ಅನುಸರಿಸಲಾಗುತ್ತಿದೆ ಎಂದು ಹೇಳಿದ್ದರು.

ಕೇಜ್ರಿವಾಲ್ ಅವರು ಪ್ರಸ್ತುತ ಲಾಲು ಅವರ ರೀತಿಯಲ್ಲಿ ದೆಹಲಿಯಲ್ಲಿ ಲೂಟಿ ಮಾಡುತ್ತಿದ್ದಾರೆ. ಕೇಜ್ರಿವಾಲ್ ಅವರು ಚುನಾವಣೆಗಳು ಬಂದಾಗ ಮಾತ್ರ ಭಗವಾನ್ ರಾಮನನ್ನು ನೆನಪಿಸಿಕೊಳ್ಳುತ್ತಾರೆ. ಇಲ್ಲದಿದ್ದರೆ, ತುಕ್ಡೆ-ತುಕ್ಡೆ ಗ್ಯಾಂಗ್ ನಾಯಕರೊಂದಿಗೆ ಮೆರವಣಿಗೆಯಲ್ಲಿ ಇರುತ್ತಾರೆ ಎಂದು ಸಚಿವ ಅನುರಾಗ್ ಠಾಕೂರ್ ದೆಹಲಿಯಲ್ಲಿ ನಡೆದ ಪತ್ರಿಗೋಷ್ಠಿಯಲ್ಲಿ ಹೇಳಿದರು.

ಎಎಪಿ ಪಕ್ಷ ಭ್ರಷ್ಟಾಚಾರದ ಪಕ್ಷ ಎಂದು ಅನುರಾಗ್ ಠಾಕೂರ್ ಕರೆದಿದ್ದಾರೆ. ರಾಷ್ಟ್ರ ರಾಜಧಾನಿಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರು ಸುಳ್ಳು ಭರವಸೆಗಳನ್ನು ನೀಡಿದ್ದಾರೆ. ಯಾವುದನ್ನೂ ಜನರು ಮುಂದೆ ತರುವ ಪ್ರಯತ್ನವನ್ನು ಮಾಡಿಲ್ಲ ಎಂದು ಠಾಕೂರ್ ಹೇಳಿದರು. ಇತ್ತೀಚೆಗೆ ಕೇಜ್ರಿವಾಲ್ ಅವರ ಪಕ್ಷದ ಸಚಿವ ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಾರೆ ಎಂದು ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದರು. ಕೇಜ್ರಿವಾಲ್ ಅವರ ರಾಜಕೀಯ ವಂಚಕರು, ದೆಹಲಿ ಜನರಿಗೆ ಮೋಸ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದರು.

ಇದನ್ನು ಓದಿ: ನೀವೇಕೆ ಈಗ ಮಫ್ಲರ್ ಹಾಕಿಕೊಳ್ಳುತ್ತಿಲ್ಲ?; ಮಹಿಳೆಯ ಪ್ರಶ್ನೆಗೆ ಅರವಿಂದ್ ಕೇಜ್ರಿವಾಲ್ ಉತ್ತರ ಹೀಗಿತ್ತು

ಕೇಜ್ರಿವಾಲ್ ಅವರು ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ. ಈಗಾಗಲೇ ಅವರ ಸರ್ಕಾರದ ಒದೊಂದು ಭ್ರಷ್ಟಾಚಾರದ ಸತ್ಯಗಳು ಹೊರ ಬರುತ್ತಿದೆ, ಅವರ ಸರ್ಕಾರ ಭ್ರಷ್ಟಾಚಾರದ ಮೂಲಕ ನಡೆಸುತ್ತಿದ್ದಾರೆ. ಕೇಜ್ರಿವಾಲ್ 16 ಸ್ಮಾಗ್ ಟವರ್‌ಗಳನ್ನು ಸ್ಥಾಪಿಸುವುದಾಗಿ ಹೇಳಿದರು, ಆದರೆ ಅದು ಸಾಧ್ಯವಾಗಲಿಲ್ಲ. ಎರಡನ್ನು ಸ್ಥಾಪಿಸಿ, ಅದು ಕೂಡ ಈಗ ಕಾರ್ಯನಿರ್ವಹಿಸುತ್ತಿಲ್ಲ. ನಾವು ಪಂಜಾಬ್‌ನಲ್ಲಿ ಸರ್ಕಾರವನ್ನು ರಚಿಸಿದರೆ, ಹುಲ್ಲು ಸುಡುವುದು ನಿಲ್ಲುತ್ತದೆ ಎಂದು ಅವರು ಹೇಳಿದರು. ಆದರೆ ಅದು ಕೂಡ ಇಲ್ಲ, ಅಲ್ಲಿ ಈಗ ಹೆಚ್ಚು ಮಾಲಿನ್ಯವಿದೆ ಎಂದು ಠಾಕೂರ್ ತಿಳಿಸಿದರು. ಡಿಸೆಂಬರ್ 4 ರಂದು ನಡೆಯಲಿರುವ ಮುನ್ಸಿಪಲ್ ಕಾರ್ಪೊರೇಷನ್ ಆಫ್ ದೆಹಲಿ (MCD) ಚುನಾವಣೆಗೆ  ಒಂದು ದಿನ ಮೊದಲು ಕೇಜ್ರಿವಾಲ್ ವಿರುದ್ಧ ಠಾಕೂರ್ ಅವರ ವಾಗ್ದಾಳಿ ನಡೆಸಿದ್ದಾರೆ.

Published On - 6:20 pm, Sat, 3 December 22

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ