AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಾ ಸರ್ಕಾರಗಳು ಬ್ರಾಹ್ಮಣ ಸಮುದಾಯದ ಹಿತಾಸಕ್ತಿಗಾಗಿ ಕೆಲಸ ಮಾಡಬೇಕು: ರೇಖಾ ಗುಪ್ತಾ

ಬ್ರಾಹ್ಮಣ(Brahmin)ರು ಸಮಾಜದಲ್ಲಿ ಜ್ಞಾನದ ಬೆಳಕನ್ನು ಬೆಳಗಿಸುವ ಕೆಲಸ ಮಾಡುತ್ತಾರೆ, ಎಲ್ಲಾ ಸರ್ಕಾರಗಳು ಸಮುದಾಯದ ಹಿತಾಸಕ್ತಿಗಾಗಿ ಕೆಲಸ ಮಾಡಬೇಕು ಎನ್ನುವ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತ ಹೇಳಿಕೆ ತೀವ್ರ ವಿವಾದದ ಅಲೆ ಎಬ್ಬಿಸಿದೆ. ದೆಹಲಿಯ ಪಿತಾಂಪುರದಲ್ಲಿ ಬ್ರಾಹ್ಮಣ ಸಭಾ ಆಯೋಜಿಸಿದ್ದ ಅಖಿಲ ಭಾರತ ಬ್ರಾಹ್ಮಣ ಸಮ್ಮೇಳನದಲ್ಲಿ ರೇಖಾ ಗುಪ್ತಾ ಈ ಹೇಳಿಕೆ ನೀಡಿದ್ದಾರೆ. ಬ್ರಾಹ್ಮಣ ಸಮುದಾಯವು ಧರ್ಮಗ್ರಂಥಗಳನ್ನು ಪೂಜಿಸುವುದಷ್ಟೇ ಅಲ್ಲದೆ ಆಯುಧಗಳನ್ನು ಕೂಡ ಗೌರವಿಸುತ್ತಾರೆ.

ಎಲ್ಲಾ ಸರ್ಕಾರಗಳು ಬ್ರಾಹ್ಮಣ ಸಮುದಾಯದ ಹಿತಾಸಕ್ತಿಗಾಗಿ ಕೆಲಸ ಮಾಡಬೇಕು: ರೇಖಾ ಗುಪ್ತಾ
ರೇಖಾ ಗುಪ್ತಾ
ನಯನಾ ರಾಜೀವ್
|

Updated on: Oct 06, 2025 | 3:08 PM

Share

ನವದೆಹಲಿ, ಅಕ್ಟೋಬರ್ 06: ಬ್ರಾಹ್ಮಣ(Brahmin)ರು ಸಮಾಜದಲ್ಲಿ ಜ್ಞಾನದ ಬೆಳಕನ್ನು ಬೆಳಗಿಸುವ ಕೆಲಸ ಮಾಡುತ್ತಾರೆ, ಎಲ್ಲಾ ಸರ್ಕಾರಗಳು ಸಮುದಾಯದ ಹಿತಾಸಕ್ತಿಗಾಗಿ ಕೆಲಸ ಮಾಡಬೇಕು ಎನ್ನುವ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತ ಹೇಳಿಕೆ ತೀವ್ರ ವಿವಾದದ ಅಲೆ ಎಬ್ಬಿಸಿದೆ. ದೆಹಲಿಯ ಪಿತಾಂಪುರದಲ್ಲಿ ಬ್ರಾಹ್ಮಣ ಸಭಾ ಆಯೋಜಿಸಿದ್ದ ಅಖಿಲ ಭಾರತ ಬ್ರಾಹ್ಮಣ ಸಮ್ಮೇಳನದಲ್ಲಿ ರೇಖಾ ಗುಪ್ತಾ ಈ ಹೇಳಿಕೆ ನೀಡಿದ್ದಾರೆ. ಬ್ರಾಹ್ಮಣ ಸಮುದಾಯವು ಧರ್ಮಗ್ರಂಥಗಳನ್ನು ಪೂಜಿಸುವುದಷ್ಟೇ ಅಲ್ಲದೆ ಆಯುಧಗಳನ್ನು ಕೂಡ ಗೌರವಿಸುತ್ತಾರೆ.

ಸಮುದಾಯವು ಯಾವಾಗಲೂ ಧರ್ಮ, ಜ್ಞಾನ ಮತ್ತು ಸದ್ಭಾವನೆಯನ್ನು ಉತ್ತೇಜಿಸುವ ಮೂಲಕ ಸಮಾಜದ ಒಳಿತಿಗಾಗಿ ಕೆಲಸ ಮಾಡಿದೆ. ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ, ಅದು ಬ್ರಾಹ್ಮಣ ಸಮುದಾಯದ ಕಲ್ಯಾಣ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡಬೇಕು ಎಂದರು.

ದೆಹಲಿಯಲ್ಲಿ ಬ್ರಾಹ್ಮಣ ಸಮುದಾಯವು ಕಳೆದ 27 ವರ್ಷಗಳಿಂದ ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದೆ. ಈಗ ರಾಜಧಾನಿಯಲ್ಲಿ ಉತ್ತಮ ಆಡಳಿತ, ಅಭಿವೃದ್ಧಿಗಾಗಿ ಬ್ರಾಹ್ಮಣ ಸಮುದಾಯವು ತಮ್ಮ ಸಲಹೆಗಳನ್ನು ನೀಡಬೇಕೆಂದು ಮನವಿ ಮಾಡಿದರು.

ಮತ್ತಷ್ಟು ಓದಿ: Rekha Gupta Attacked: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆ

ದೆಹಲಿಯನ್ನು ಮುನ್ನಡೆಸಲು ನಿಮ್ಮೆಲ್ಲರ ಸಲಹೆಗಳನ್ನು ನೀಡುವುದನ್ನು ಮುಂದುವರಿಸಬೇಕೆಂದು ನಾನು ವಿನಂತಿಸುತ್ತೇನೆ. ಹಲವು ಹಳೆಯ ಸಮಸ್ಯೆಗಳು ಬಗೆಹರಿಯದೆ ಉಳಿದಿವೆ. ಕಳೆದ 27 ವರ್ಷಗಳಿಂದ ದೆಹಲಿಯ ಪ್ರಗತಿ ನಿಧಾನವಾಗಿದೆ, ಆದರೆ ಈಗ ಈ ವೇಗವನ್ನು ಹೆಚ್ಚಿಸುವ ಸಮಯ.

ರೇಖಾ ಗುಪ್ತಾ ಮಾತು

ನಾವೆಲ್ಲರೂ ದೆಹಲಿ ಮತ್ತು ಅದರ ಜನರಿಗಾಗಿ ಒಟ್ಟಾಗಿ ಕೆಲಸ ಮಾಡಿದರೆ, ನಾವು ದೆಹಲಿಯನ್ನು ಅಭಿವೃದ್ಧಿ ಹೊಂದಿದ ನಗರವನ್ನಾಗಿ ಮಾಡಬಹುದು” ಎಂದು ರೇಖಾ ಗುಪ್ತಾ ಹೇಳಿದರು.

ರೇಖಾ ಗುಪ್ತಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಎಎಪಿ ನಾಯಕ ಸಂಜೀವ್ ಝಾ, ಅವರ ಹೇಳಿಕೆಯಿಂದ ಆಘಾತಕ್ಕೊಳಗಾಗಿದ್ದೇನೆ, ಏಕೆಂದರೆ ಅದು ಜನರ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಹೇಳಿದರು . ಏತನ್ಮಧ್ಯೆ, ಅಕ್ಟೋಬರ್ 25 ರಿಂದ 28 ರವರೆಗೆ ನಡೆಯಲಿರುವ ಛಠ್ ಪೂಜೆಯ ಸಿದ್ಧತೆಗಳನ್ನು ಮುಖ್ಯಮಂತ್ರಿ ರೇಖಾ ಗುಪ್ತಾ ಪರಿಶೀಲಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ