AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ವಿಪರೀತ ಶೀತ ಗಾಳಿ; ಹೃದಯಾಘಾತ, ಅತಿ ರಕ್ತದೊತ್ತಡ, ಮೆದುಳಿನ ಸ್ಟ್ರೋಕ್ ಸಮಸ್ಯೆ ಹೆಚ್ಚಳ

ಶೀತ ಅಲೆಗಳ ಕಾರಣದಿಂದಾಗಿ ಸುಮಾರು ಶೇ. 10ರಿಂದ 15ರಷ್ಟು ಹೆಚ್ಚು ಹೃದಯಾಘಾತ, ಮೆದುಳಿನ ಪಾರ್ಶ್ವವಾಯು ಮತ್ತು ಅಧಿಕ ರಕ್ತದೊತ್ತಡಕ್ಕೆ ಒಳಗಾಗುತ್ತಿದ್ದಾರೆ.

ದೆಹಲಿಯಲ್ಲಿ ವಿಪರೀತ ಶೀತ ಗಾಳಿ; ಹೃದಯಾಘಾತ, ಅತಿ ರಕ್ತದೊತ್ತಡ, ಮೆದುಳಿನ ಸ್ಟ್ರೋಕ್ ಸಮಸ್ಯೆ ಹೆಚ್ಚಳ
ದೆಹಲಿಯಲ್ಲಿ ಶೀತಗಾಳಿImage Credit source: times now
TV9 Web
| Edited By: |

Updated on: Jan 14, 2023 | 12:47 PM

Share

ನವದೆಹಲಿ: ದೆಹಲಿಯಲ್ಲಿ ಚಳಿ ವಿಪರೀತ ಹೆಚ್ಚಾಗಿದೆ. ಇದರಿಂದ ದೆಹಲಿಯ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳ ತುರ್ತು ವಿಭಾಗಗಳಲ್ಲಿ ಮುಂಜಾನೆ ಹೃದಯಾಘಾತ (Heart Attack), ಮೆದುಳಿನ ಪಾರ್ಶ್ವವಾಯು (Brain Stroke) ಮತ್ತು ಅಧಿಕ ರಕ್ತದೊತ್ತಡ (High BP) ಹೊಂದಿರುವ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ದೆಹಲಿಯಲ್ಲಿ ಕಳೆದ 23 ವರ್ಷಗಳಲ್ಲಿ ಮೂರನೇ ಬಾರಿ ಅತ್ಯಂತ ಕೆಟ್ಟ ಶೀತ ಅಲೆ (Cold Wave) ದಾಖಲಾಗಿದೆ.

ದೆಹಲಿಯ ಲೋಕನಾಯಕ್ ಜೈ ಪ್ರಕಾಶ್ (ಎಲ್‌ಎನ್‌ಜೆಪಿ) ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಸುರೇಶ್ ಕುಮಾರ್ ಅವರ ಪ್ರಕಾರ, ಶೀತ ಅಲೆಗಳ ಕಾರಣದಿಂದಾಗಿ ಸುಮಾರು ಶೇ. 10ರಿಂದ 15ರಷ್ಟು ಹೆಚ್ಚು ಹೃದಯಾಘಾತ, ಮೆದುಳಿನ ಪಾರ್ಶ್ವವಾಯು ಮತ್ತು ಅಧಿಕ ರಕ್ತದೊತ್ತಡಕ್ಕೆ ಒಳಗಾಗುತ್ತಿದ್ದಾರೆ. ಶೀತ ಗಾಳಿಯಿಂದ 50ರಿಂದ 70 ವರ್ಷದವರು ಹೆಚ್ಚು ತೊಂದರೆಗೆ ಒಳಗಾಗುತ್ತಿದ್ದಾರೆ.

ಇದನ್ನೂ ಓದಿ: Spicy Ghee Recipe: ಚಳಿಗಾಲದ ಸೋಂಕಿನಿಂದ ಕಾಪಾಡಲು ತುಪ್ಪವನ್ನು ಈ ರೀತಿಯಾಗಿ ಬಳಸಿ

ಜನರು ತಮ್ಮ ಮಧುಮೇಹ ಮತ್ತು ರಕ್ತದೊತ್ತಡದ ಬಗ್ಗೆ ನಿಯಮಿತವಾಗಿ ಚೆಕಪ್ ಮಾಡಿಸಬೇಕು. ಆದಷ್ಟು ಬೆಚ್ಚಗಿನ ಬಟ್ಟೆಗಳನ್ನು ಧರಿಸಬೇಕು ಎಂದು ಡಾ. ಸುರೇಶ್ ಕುಮಾರ್ ಸಲಹೆ ನೀಡಿದ್ದಾರೆ. ಕೆಲವು ಖಾಸಗಿ ಆಸ್ಪತ್ರೆಗಳು ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಪಾರ್ಶ್ವವಾಯು ರೋಗಿಗಳಲ್ಲಿ 9%ರಷ್ಟು ಏರಿಕೆ ಕಂಡುಬಂದಿದೆ.

ಪಾರ್ಶ್ವವಾಯುಗೆ ಒಳಗಾದ ಸುಮಾರು 25% ರೋಗಿಗಳು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ. ವಿಶೇಷವಾಗಿ ಮೆಟ್ರೋ ನಗರಗಳಲ್ಲಿ ಇವರ ಸಂಖ್ಯೆ ಹೆಚ್ಚಾಗಿದೆ. ನಿದ್ರೆಯ ಕೊರತೆ, ಕಳಪೆ ಗುಣಮಟ್ಟದ ಆಹಾರ ಮತ್ತು ಅತಿಯಾದ ಮಾನಸಿಕ ಒತ್ತಡದಂತಹ ಜೀವನಶೈಲಿಯಿಂದ ಈ ಸಮಸ್ಯೆ ಹೆಚ್ಚಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್