AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ವಿಪರೀತ ಶೀತ ಗಾಳಿ; ಹೃದಯಾಘಾತ, ಅತಿ ರಕ್ತದೊತ್ತಡ, ಮೆದುಳಿನ ಸ್ಟ್ರೋಕ್ ಸಮಸ್ಯೆ ಹೆಚ್ಚಳ

ಶೀತ ಅಲೆಗಳ ಕಾರಣದಿಂದಾಗಿ ಸುಮಾರು ಶೇ. 10ರಿಂದ 15ರಷ್ಟು ಹೆಚ್ಚು ಹೃದಯಾಘಾತ, ಮೆದುಳಿನ ಪಾರ್ಶ್ವವಾಯು ಮತ್ತು ಅಧಿಕ ರಕ್ತದೊತ್ತಡಕ್ಕೆ ಒಳಗಾಗುತ್ತಿದ್ದಾರೆ.

ದೆಹಲಿಯಲ್ಲಿ ವಿಪರೀತ ಶೀತ ಗಾಳಿ; ಹೃದಯಾಘಾತ, ಅತಿ ರಕ್ತದೊತ್ತಡ, ಮೆದುಳಿನ ಸ್ಟ್ರೋಕ್ ಸಮಸ್ಯೆ ಹೆಚ್ಚಳ
ದೆಹಲಿಯಲ್ಲಿ ಶೀತಗಾಳಿImage Credit source: times now
TV9 Web
| Edited By: |

Updated on: Jan 14, 2023 | 12:47 PM

Share

ನವದೆಹಲಿ: ದೆಹಲಿಯಲ್ಲಿ ಚಳಿ ವಿಪರೀತ ಹೆಚ್ಚಾಗಿದೆ. ಇದರಿಂದ ದೆಹಲಿಯ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳ ತುರ್ತು ವಿಭಾಗಗಳಲ್ಲಿ ಮುಂಜಾನೆ ಹೃದಯಾಘಾತ (Heart Attack), ಮೆದುಳಿನ ಪಾರ್ಶ್ವವಾಯು (Brain Stroke) ಮತ್ತು ಅಧಿಕ ರಕ್ತದೊತ್ತಡ (High BP) ಹೊಂದಿರುವ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ದೆಹಲಿಯಲ್ಲಿ ಕಳೆದ 23 ವರ್ಷಗಳಲ್ಲಿ ಮೂರನೇ ಬಾರಿ ಅತ್ಯಂತ ಕೆಟ್ಟ ಶೀತ ಅಲೆ (Cold Wave) ದಾಖಲಾಗಿದೆ.

ದೆಹಲಿಯ ಲೋಕನಾಯಕ್ ಜೈ ಪ್ರಕಾಶ್ (ಎಲ್‌ಎನ್‌ಜೆಪಿ) ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಸುರೇಶ್ ಕುಮಾರ್ ಅವರ ಪ್ರಕಾರ, ಶೀತ ಅಲೆಗಳ ಕಾರಣದಿಂದಾಗಿ ಸುಮಾರು ಶೇ. 10ರಿಂದ 15ರಷ್ಟು ಹೆಚ್ಚು ಹೃದಯಾಘಾತ, ಮೆದುಳಿನ ಪಾರ್ಶ್ವವಾಯು ಮತ್ತು ಅಧಿಕ ರಕ್ತದೊತ್ತಡಕ್ಕೆ ಒಳಗಾಗುತ್ತಿದ್ದಾರೆ. ಶೀತ ಗಾಳಿಯಿಂದ 50ರಿಂದ 70 ವರ್ಷದವರು ಹೆಚ್ಚು ತೊಂದರೆಗೆ ಒಳಗಾಗುತ್ತಿದ್ದಾರೆ.

ಇದನ್ನೂ ಓದಿ: Spicy Ghee Recipe: ಚಳಿಗಾಲದ ಸೋಂಕಿನಿಂದ ಕಾಪಾಡಲು ತುಪ್ಪವನ್ನು ಈ ರೀತಿಯಾಗಿ ಬಳಸಿ

ಜನರು ತಮ್ಮ ಮಧುಮೇಹ ಮತ್ತು ರಕ್ತದೊತ್ತಡದ ಬಗ್ಗೆ ನಿಯಮಿತವಾಗಿ ಚೆಕಪ್ ಮಾಡಿಸಬೇಕು. ಆದಷ್ಟು ಬೆಚ್ಚಗಿನ ಬಟ್ಟೆಗಳನ್ನು ಧರಿಸಬೇಕು ಎಂದು ಡಾ. ಸುರೇಶ್ ಕುಮಾರ್ ಸಲಹೆ ನೀಡಿದ್ದಾರೆ. ಕೆಲವು ಖಾಸಗಿ ಆಸ್ಪತ್ರೆಗಳು ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಪಾರ್ಶ್ವವಾಯು ರೋಗಿಗಳಲ್ಲಿ 9%ರಷ್ಟು ಏರಿಕೆ ಕಂಡುಬಂದಿದೆ.

ಪಾರ್ಶ್ವವಾಯುಗೆ ಒಳಗಾದ ಸುಮಾರು 25% ರೋಗಿಗಳು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ. ವಿಶೇಷವಾಗಿ ಮೆಟ್ರೋ ನಗರಗಳಲ್ಲಿ ಇವರ ಸಂಖ್ಯೆ ಹೆಚ್ಚಾಗಿದೆ. ನಿದ್ರೆಯ ಕೊರತೆ, ಕಳಪೆ ಗುಣಮಟ್ಟದ ಆಹಾರ ಮತ್ತು ಅತಿಯಾದ ಮಾನಸಿಕ ಒತ್ತಡದಂತಹ ಜೀವನಶೈಲಿಯಿಂದ ಈ ಸಮಸ್ಯೆ ಹೆಚ್ಚಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ