AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2020ರ ದೆಹಲಿ ಗಲಭೆ ಪ್ರಕರಣದ ಪಿತೂರಿ ಆರೋಪಿ ಉಮರ್​ ಖಾಲಿದ್​ಗೆ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ

Umar Khalid | Delhi Riots Case: ಫೆಬ್ರವರಿ 2020ರ ಈಶಾನ್ಯ ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದ ಆರೋಪಿ ಉಮರ್ ಖಾಲಿದ್ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯವು ವಜಾಗೊಳಿಸಿದೆ.

2020ರ ದೆಹಲಿ ಗಲಭೆ ಪ್ರಕರಣದ ಪಿತೂರಿ ಆರೋಪಿ ಉಮರ್​ ಖಾಲಿದ್​ಗೆ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ
ಉಮರ್ ಖಾಲಿದ್
TV9 Web
| Edited By: |

Updated on:Mar 24, 2022 | 1:02 PM

Share

ಫೆಬ್ರವರಿ 2020ರ ಈಶಾನ್ಯ ದೆಹಲಿ ಗಲಭೆಯ ಪಿತೂರಿ ಆರೋಪಿ ಉಮರ್ ಖಾಲಿದ್ (Umar Khalid) ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದೆ. ಈ ಕುರಿತು ಇಂದು (ಗುರುವಾರ ಮಾರ್ಚ್ 24) ನ್ಯಾಯಾಲಯ ಆದೇಶ ನೀಡಿದೆ. ಉಮರ್ ಖಾಲಿದ್ ಜೆಎನ್​ಯುನ ಮಾಜಿ ವಿದ್ಯಾರ್ಥಿಯಾಗಿದ್ದಾರೆ. ಉಮರ್​​ ಖಾಲಿದ್​ರನ್ನು 2020ರ ಸೆಪ್ಟೆಂಬರ್ 14ರಂದು ಬಂಧಿಸಲಾಗಿತ್ತು. ಪ್ರಸ್ತುತ ಅವರು ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಭ್ ರಾವತ್ ಅವರು ಪ್ರಕರಣದ ವಾದವನ್ನು ಆಲಿಸಿದ ನಂತರ ಮಾರ್ಚ್ 3 ರಂದು ಆದೇಶವನ್ನು ಕಾಯ್ದಿರಿಸಿದ್ದರು. ವಿಚಾರಣೆಯ ವೇಳೆ ಆರೋಪಿಯು ತಮ್ಮ ವಿರುದ್ಧದ ಪ್ರಕರಣವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್‌ಗೆ ಸಾಕ್ಷ್ಯಾಧಾರಗಳ ಕೊರತೆಯಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಆದರೆ ಇದೀಗ ನ್ಯಾಯಾಲಯ ಖಾಲಿದ್​ಗೆ ಜಾಮೀನು ನಿರಾಕರಿಸಿದೆ.

ಈ ಕುರಿತು ಎಎನ್​ಐ ಮಾಹಿತಿ:

ಉಮರ್ ಖಾಲಿದ್ ಫೆಬ್ರವರಿ 2020ರ ಗಲಭೆಯ ‘ಮಾಸ್ಟರ್‌ಮೈಂಡ್‌’ ಎಂದು ಆರೋಪಿಸಲಾಗಿದೆ. ಖಾಲಿದ್ ವಿರುದ್ಧ ಭಯೋತ್ಪಾದನಾ-ವಿರೋಧಿ ಕಾನೂನು ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ. ದೆಹಲಿ ಗಲಭೆಯಲ್ಲಿ 53 ಜನರು ಮೃತಪಟ್ಟಿದ್ದರು. ಮತ್ತು 700 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ದೆಹಲಿ ಗಲಭೆಗೆ ಪಿತೂರಿ ನಡೆಸಿದ ಪ್ರಕರಣದಲ್ಲಿ 18 ಜನರನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ಇದುವರೆಗೆ ಈ ಆರೋಪಿಗಳಲ್ಲಿ 6 ಜನರು ಜಾಮೀನು ಪಡೆದು ಹೊರಬಂದಿದ್ದಾರೆ.

ಉಮರ್ ಖಾಲಿದ್ ಪರ ವಾದ ಮಂಡಿಸಿದ ಹಿರಿಯ ವಕೀಲ ತ್ರಿದೀಪ್ ಪೈಸ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಸಲ್ಲಿಸಿರುವ ಚಾರ್ಜ್ ಶೀಟ್ ಸಂಪೂರ್ಣ ಕಟ್ಟುಕಥೆ ಎಂದು ವಾದಿಸಿದ್ದಾರೆ. ಅಲ್ಲದೇ ಖಾಲಿದ್ ಭಾಷಣದ ತುಣುಕುಗಳನ್ನು ಕತ್ತರಿಸಿ ತಿರುಚಲಾಗಿದೆ ಎಂದು ಅವರು ಹೇಳಿದ್ದಾರೆ.

ಸಿಎಎ ಮತ್ತು ಎನ್​ಆರ್​ಸಿ ಕಾಯ್ದೆಯ ವಿರುದ್ಧದ ಹೋರಾಟದ ಸಂದರ್ಭದಲ್ಲಿ ಹಿಂಸಾಚಾರ ಸಂಭವಿಸಿತ್ತು. ಉಮರ್ ಖಾಲಿದ್ ಜತೆಗೆ ಖಾಲಿದ್ ಸೈಫಿ, ಜೆಎನ್‌ಯು ವಿದ್ಯಾರ್ಥಿಗಳಾದ ನತಾಶಾ ನರ್ವಾಲ್ ಮತ್ತು ದೇವಾಂಗನಾ ಕಲಿತಾ, ಜಾಮಿಯಾ ಸಮನ್ವಯ ಸಮಿತಿ ಸದಸ್ಯರಾದ ಸಫೂರ ಜರ್ಗರ್, ಎಎಪಿ ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್ ಮತ್ತು ಹಲವರ ವಿರುದ್ಧವೂ ಕಠಿಣ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:

ಹಿಜಾಬ್ ಪ್ರಕರಣದ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ; ‘ಹಿಜಾಬ್‌ಗೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ’ ಎಂದ ಸಿಜೆಐ

ಉಮರ್ ಖಾಲಿದ್​​ಗೆ ಕೈಕೋಳ ತೊಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಜೈಲು ಅಧಿಕಾರಿಗಳಿಗೆ ನೋಟಿಸ್

Published On - 12:39 pm, Thu, 24 March 22

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ